ನಲಪಾಡ್ ಗ್ಯಾಂಗ್ ದಾಳಿ ಕೇಸ್: ಇನ್ಸ್ ಪೆಕ್ಟರ್ ವಿಜಯ್ ಅಮಾನತು
ಬೆಂಗಳೂರು, ಫೆಬ್ರವರಿ 19: ಶಾಂತಿನಗರ ಕ್ಷೇತ್ರದ ಶಾಸಕ ಎನ್.ಎ ಹ್ಯಾರೀಸ್ ಅವರ ಪುತ್ರ ಮೊಹಮ್ಮದ್ ನಲಪಾಡ್ ವಿರುದ್ಧ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಮಾಡಿದ ಪ್ರಕರಣ ಈಗ ಸಿಸಿಬಿ ಪೊಲೀಸರಿಗೆ ವರ್ಗವಾಗಿದೆ. ಮೂರು ತಂಡಗಳನ್ನು ರಚಿಸಿರುವ ಸಿಸಿಬಿ ಪೊಲೀಸರು, ಆರೋಪಿ ಹುಡುಕಾಟದಲ್ಲಿ ತೊಡಗಿದ್ದಾರೆ.
ಪ್ರಕರಣದ ಮೊದಲ ಆರೋಪಿ ಮೊಹಮ್ಮದ್ ರನ್ನು ಬಂಧಿಸಲು ವಿಫಲರಾದ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ವಿಜಯ್ ಹಡಗಲಿ ಹಾಗೂ ಎಸಿಪಿ ಮಂಜುನಾಥ್ ಅವರನ್ನು ಕಮೀಷನರ್ ಕಚೇರಿಗೆ ವರ್ಗಾವಣೆಗೊಳಿಸಲಾಗಿದೆ. ಈ ಪ್ರಕರಣದ ತನಿಖೆಯನ್ನು ಸಿಸಿಬಿ ವಿಭಾಗಕ್ಕೆ ವರ್ಗಾಯಿಸಿ ನಗರ ಪೊಲೀಸ್ ಆಯುಕ್ತ ಟಿ ಸುನೀಲ್ ಕುಮಾರ್ ಅವರು ಆದೇಶಿಸಿದ್ದಾರೆ.

ಮಹಮ್ಮದ್ ನಲಪಾಡ್ ಮತ್ತು ಆತನ ಸ್ನೇಹಿತರು ಕ್ಷುಲ್ಲಕ ಕಾರಣಕ್ಕೆ 24 ವರ್ಷ ವಯಸ್ಸಿನ ವಿದ್ವತ್ ಎಂಬಾತನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು.
ಗೃಹಸಚಿವರು ನೀಡಿದ್ದ ಡೆಡ್ ಲೈನ್ : ಈ ಪ್ರಕರಣದ ಪ್ರಮುಖ ಆರೋಪಿ ಶಾಸಕರ ಪುತ್ರ ಮೊಹಮ್ಮದ್ ನನ್ನು ಭಾನುವಾರ ರಾತ್ರಿ 8 ಗಂಟೆ ಒಳಗಾಗಿ ಬಂಧಿಸಬೇಕು, ಇಲ್ಲದಿದ್ದರೆ, ತನಿಖಾಧಿಕಾರಿಗಳನ್ನು ಅಮಾನತುಗೊಳಿಸಲಾಗುತ್ತದೆ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ಡೆಡ್ಲೈನ್ ನೀಡಿದ್ದರು. ಹೀಗಾಗಿ ಇನ್ಸ್ ಪೆಕ್ಟರ್ ವಿಜಯ್ ಅಮಾನತುಗೊಂಡಿದ್ದಾರೆ.
ಆರೋಪಗಳು: ಈ ಮೊಹಮ್ಮದ್ ನಲಪಾಡ್ ಆರೋಪಿ ನಂ 1 ಆಗಿದ್ದಾರೆ. ಐಪಿಸಿ ಸೆಕ್ಷನ್ 341, 326, 504, 143, 147, 144, 149, 141, 506 ಸೆಕ್ಷನ್ಗಳಡಿ ಪ್ರಕರಣ ದಾಖಲಿಸಲಾಗಿದೆ. ಸೆಕ್ಷನ್ 307(ಕೊಲೆ ಯತ್ನ) ಅಡಿಯಲ್ಲಿ ಪ್ರಕರಣ ದಾಖಲಿಸುವಂತೆ ವಿದ್ವತ್ ಅವರ ತಂದೆ ಲೋಕನಾಥ್ ಅವರು ಮನವಿ ಮಾಡಿದ್ದಾರೆ. ಈ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದರೆ, ಅದು ಜಾಮೀನು ರಹಿತ ಕೇಸ್ ಆಗುತ್ತಿತ್ತು. ಆದರೆ, ಉದ್ದೇಶಪೂರ್ವಕವಾಗಿ ಈ ಸೆಕ್ಷನ್ ಹಾಕಿಲ್ಲ ಎಂದು ಆರೋಪಿಸಿದ್ದಾರೆ.
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications