ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪಟ್ಟು ಬಿಡದ ಆಡಳಿತ, ವಿರೋಧ ಪಕ್ಷಗಳು ವಿಧಾನಸಭೆ ಕಲಾಪ ಮುಂದೂಡಿಕೆ

|
Google Oneindia Kannada News

ಬೆಂಗಳೂರು, ಮಾ. 11: ವಿಧಾನಸಭೆಯಲ್ಲಿ ಆಡಳಿತ ಹಾಗೂ ವಿರೋಧ ಪಕ್ಷಗಳ ಮಧ್ಯೆ ವಾಗ್ಯುದ್ದ ಮುಂದುವರೆದಿದ್ದು, ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರನ್ನು ವಿಧಾನಸಭೆಯಿಂದ ಉಚ್ಛಾಟನೆ ಮಾಡಬೇಕೆಂದು ಬಿಜೆಪಿ ಸದಸ್ಯರು ಗದ್ದಲ ಮಾಡಿದ ಹಿನ್ನೆಲೆಯಲ್ಲಿ ಸದನವನ್ನು ಅರ್ಧ ಗಂಟೆ ಮುಂದೂಡಲಾಗಿದೆ.

ನಿನ್ನೆ ರಮೇಶ್ ಕುಮಾರ್ ಮೇಲೆ ಸಚಿವ ಡಾ. ಸುಧಾಕರ್ ಆರೋಪ ಮಾಡಿದ ಬಳಿಕ ಉಂಟಾಗಿದ್ದ ಗಲಾಟೆ ಇವತ್ತು ಮುಂದುವರೆದಿದೆ. ಇವತ್ತು ರಮೇಶ್ ಕುಮಾರ್ ಸದಸನಕ್ಕೆ ಗೈರು ಹಾಜರಾಗಿದ್ದರಿಂದ ರಮೇಶ್ ಕುಮಾರ್ ಪಲಾಯನವಾದಿ ಎಂದು ಘೋಷಣೆ ಹಾಕಿದ್ದಾರೆ.

'ಮಾಜಿ ಸ್ಪೀಕರ್ ರಮೇಶ್ ಕುಮಾರ್ ಎಷ್ಟು ಕೊಲೆ ಮಾಡಿಸಿದ್ದಾರೆಂಬುದು ಗೊತ್ತಿದೆ''ಮಾಜಿ ಸ್ಪೀಕರ್ ರಮೇಶ್ ಕುಮಾರ್ ಎಷ್ಟು ಕೊಲೆ ಮಾಡಿಸಿದ್ದಾರೆಂಬುದು ಗೊತ್ತಿದೆ'

ವಿಧಾನಸಭೆ ಕಲಾಪ ಆರಂಭವಾಗುತ್ತಿದ್ದಂತೆಯೆ ಮಾಜಿ ಸ್ಪೀಕರ್, ಕಾಂಗ್ರೆಸ್ ಹಿರಿಯ ಸದಸ್ಯ ರಮೇಶ್ ಕುಮಾರ್ ಅವರ ಉಚ್ಚಾಟನೆಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಆಗ್ರಹ ಮಾಡಿದ್ರು. ಇದಕ್ಕೆ ಬಿಜೆಪಿಯ ಸದಸ್ಯರು ಬೆಂಬಲ ವ್ಯಕ್ತಪಡಿಸಿ ಘೋಷಣೆ ಹಾಕಲು ಆರಂಭಿಸಿದರು.

Assembly adjourns for clash between Minister Sudhakar and former Speaker Ramesh Kumar

ಇದೇ ಸಂದರ್ಭದಲ್ಲಿ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಅವರು ಸಚಿವ ಡಾ. ಸುಧಾಕರ್ ಮೇಲೆ ಹಕ್ಕುಚ್ಯುತಿ ಮಂಡನೆಗೆ ಮುಂದಾಗಾದ ಸದನದಲ್ಲಿ ಬಿಜೆಪಿ ಸದಸ್ಯರ ಘೋಷಣೆ, ಕೂಗಾಟ ಹೆಚ್ಚಾಯ್ತು. ಸದನ ಹಿಡಿತಕ್ಕೆ ಸಿಗದ ಹಿನ್ನೆಲೆಯಲ್ಲಿ ಸದನವನ್ನು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅರ್ಧ ಗಂಟೆ ಮುಂದೂಡಿ ಸಂಧಾನ ಸಭೆಯನ್ನು ನಡೆಸುತ್ತಿದ್ದಾರೆ.

English summary
Assembly adjourns for clash between Minister Sudhakar and former Speaker Ramesh Kumar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X