ಟ್ರಾಫಿಕ್ ನಿರ್ವಹಣೆಗೆ ಹೆಚ್ಚು ಪೊಲೀಸರ ನಿಯೋಜಿಸಿ: ಸಿಎಂಗೆ ಎಎಪಿ ಪತ್ರ
ಬೆಂಗಳೂರು, ನವೆಂಬರ್ 08: ದಂಡ ವಸೂಲಿಗೆ ಹೆಚ್ಚು ಬಳಕೆಯಾಗುತ್ತಿರುವ ಬೆಂಗಳೂರು ನಗರ ಸಂಚಾರಿ ಪೊಲೀಸರನ್ನು ವಾಹನ ಸಂಚಾರ ದಟ್ಟಣೆ ಸಮಸ್ಯೆ ನಿರ್ವಹಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸಬೇಕು ಎಂದು ಆಮ್ ಆದ್ಮಿ ಪಾರ್ಟಿಯ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ.ಸದಂ ಆಗ್ರಹಿಸಿದ್ದಾರೆ.
ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದು ಮನವಿ ಮಾಡಿರುವ ಅವರು, ಬೆಂಗಳೂರಿನ ಸಂಚಾರ ದಟ್ಟಣೆ ಸಮಸ್ಯೆಯು ಇಲ್ಲಿನ ಜನತೆಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಇದನ್ನು ಬಗೆಹರಿಸಬೇಕಾದ ಸಂಚಾರಿ ಪೊಲೀಸ್ ಸಿಬ್ಬಂದಿಗಳು ದಂಡ ವಸೂಲಿ ಮಾಡಲೆಂದೇ ಹೆಚ್ಚಾಗಿ ಬಳಕೆ ಆಗುತ್ತಿರುವುದು ದುರದೃಷ್ಟಕರ ಎಂದರು.
ಸಂಚಾರಿ ನಿಯಮ ಉಲ್ಲಂಘಿಸುವವರನ್ನು ಪತ್ತೆ ಹಚ್ಚಿ ದಂಡ ವಿಧಿಸಲೆಂದು ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಸಿಸಿಟಿವಿಗಳನ್ನು ಅಳವಡಿಸಲಾಗಿದೆ. ತಪ್ಪಿತಸ್ಥರಿಗೆ ಮನಗೇ ನೋಟಿಸ್ ಕಳುಹಿಸುವ ವ್ಯವಸ್ಥೆ ಕೂಡ ಜಾರಿಯಲ್ಲಿದೆ. ಆದರೂ ಕೂಡ ಬಹುತೇಕ ಸಂಚಾರಿ ಪೊಲೀಸರು ವಾಹನ ಸವಾರರನ್ನು ಅಡ್ಡಗಟ್ಟಿ ದಂಡ ವಿಧಿಸುವುದರಲ್ಲೇ ತಮ್ಮನ್ನು ತೊಡಗಿಸಿಕೊಂಡಿರುತ್ತಾರೆ. ಇದರಿಂದಾಗಿ, ಟ್ರಾಫಿಕ್ ಜಾಮ್ ಆಗುವುದನ್ನು ತಡೆಯುವುದಕ್ಕೆ ಸಂಚಾರಿ ಪೊಲೀಸರ ಕೊರತೆ ಕಂಡು ಬರುತ್ತಿದೆ ಎಂದು ವಿವರಿಸಿದರು.

ಪಾದಾಚಾರಿ ಅತಿಕ್ರಮಣ ತೆರವು ಮಾಡಲು ಆಗ್ರಹ
ಪಾದಚಾರಿ ಮಾರ್ಗಗಳನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿರುವ ಬೀದಿ ಬದಿ ವ್ಯಾಪಾರಿಗಳನ್ನು ತೆರವುಗೊಳಿಸಿ ಜನರ ಸುಲಭ ಸಂಚಾರಕ್ಕೆ ಅನುವು ಮಾಡಿಕೊಡುವುದು ಸಂಚಾರಿ ಪೊಲೀಸರ ಜವಾಬ್ದಾರಿ. ಆದರೆ ಬೆಂಗಳೂರಿನ ಅನೇಕ ರಸ್ತೆಗಳ ಪಾದಚಾರಿ ಮಾರ್ಗಗಳನ್ನು ವ್ಯಾಪಾರಿಗಳು ಅತಿಕ್ರಮಣ ಮಾಡಿಕೊಂಡಿದ್ದರೂ ಸಂಚಾರಿ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಇದು ಪಾದಚಾರಿಗಳಿಗೆ ಸಮಸ್ಯೆ ತಂದೊಡ್ಡಿದೆ. ಇದರಿಂದ ಜನರು ರಸ್ತೆಗಳಲ್ಲಿ ಸಂಚರಿಸುತ್ತಾರೆ, ಇದು ರಸ್ತೆ ಅಪಘಾತಗಳಿಗೆ ಎಡೆಮಾಡಿಕೊಡುತ್ತಿದೆ ಎಂದರು.
ಗೃಹರಕ್ಷಕ ದಳದ ಸಿಬ್ಬಂದಿಗಳು ನಿಷ್ಕ್ರಿಯರಾಗಿದ್ದು, ಅವರನ್ನು ಸಮರ್ಪಕವಾಗಿ ಬಳಸಿಕೊಳ್ಳುವುದರಲ್ಲಿ ಪೊಲೀಸ್ ಇಲಾಖೆ ವಿಫಲವಾಗಿದೆ. ಸಾವಿರಾರು ಸಂಖ್ಯೆಯಲ್ಲಿ ಕಂಡು ಬರುತ್ತಿದ್ದ ಟ್ರಾಫಿಕ್ ವಾರ್ಡನ್ಗಳು ಕೂಡ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ಕಾಣಿಸುತ್ತಿಲ್ಲ. ಗೂಗಲ್ ಮ್ಯಾಪ್ ಹಾಗೂ ಡ್ರೋನ್ಗಳನ್ನು ಬಳಸಿಕೊಂಡು ಸಂಚಾರ ದಟ್ಟಣೆ ಸಮಸ್ಯೆ ನಿವಾರಿಸುವ ಘೋಷಣೆಗಳು ಕೇವಲ ಘೋಷಣೆಗಳಾಗಿಯೇ ಉಳಿದಿವೆ ಎಂದು ಆರೋಪಿಸಿದರು.
ಅಧಿಕಾರಿಗಳನ್ನು ಅಮಾನತು ಕ್ರಮ ಕೈಗೊಳ್ಳಿ
ವಾಹನ ದಟ್ಟಣೆಯ ಪೀಕ್ ಅವರ್ ಗಳಲ್ಲಿ ಭಾರೀ ಸರಕು ವಾಹನಗಳನ್ನು ಲಂಚ ಪಡೆದು ಬೆಂಗಳೂರಿನ ಒಳಗೆ ಪ್ರವೇಶಿಸಲು ಇಲಾಖೆ ಅನುಮಿತಿ ನೀಡಿದೆ. ಎಸಿಪಿ ಅಧಿಕಾರಿಗಳು ಇನ್ಸಪೆಕ್ಟರ್ಗಳು ಹಾಗೂ ಪೊಲೀಸರ ವಿರುದ್ಧ ಈಗಾಗಲೇ ಭ್ರಷ್ಟಾಚಾರ ನಿಯಂತ್ರಣ ದಳದಲ್ಲಿ ಎಫ್ಐಆರ್ ಆಗಿವೆ. ಹೀಗಿದ್ದರೂ ಅವರ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳಲಾಗಿಲ್ಲ. ಈ ಕಳಂಕಿತ ಅಧಿಕಾರಿಗಳನ್ನು ಅಮಾನತು ಮಾಡಬೇಕು ಎಂದು ಅವರು ತಿಳಿಸಿದರು.
-
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು











Click it and Unblock the Notifications