ವಿದ್ಯುತ್ ಕಂಬ ಸ್ಥಳಾಂತರಿಸಲು ಲಂಚ ಕೇಳಿ ಸಿಕ್ಕಿಬಿದ್ದ
ಬೆಂಗಳೂರು, ಫೆಬ್ರವರಿ 16 : ವಿದ್ಯುತ್ ಕಂಬ ಸ್ಥಳಾಂತರಿಸಲು 2 ಲಕ್ಷ ರು. ಲಂಚ ಕೇಳಿ, ಮೊದಲ ಕಂತಾಗಿ 75 ಸಾವಿರ ರು. ಇಸಿದುಕೊಳ್ಳುವಾಗ ಭ್ರಷ್ಟಾಚಾರ ನಿಗ್ರಹ ದಳಕ್ಕೆ ಸಹಾಯಕ ಇಂಜಿನಿಯರು ಗುರುವಾರ ಸಿಕ್ಕಿಬಿದ್ದಿದ್ದಾರೆ.
2 ಲಕ್ಷ ರು. ಲಂಚಕ್ಕೆ ಮಾರತಹಳ್ಳಿ ಬೆಸ್ಕಾಂನಲ್ಲಿ ಸಹಾಯಕ ಇಂಜಿನಿಯರ್ ಆಗಿರುವ ಶ್ರೀಮಾನ್ ನಾಗರಾಜ್ ಎನ್ ಅವರು ವಿದ್ಯುತ್ ಗುತ್ತಿಗೆದಾರರಿಂದ ಬೇಡಿಕೆ ಇಟ್ಟಿದ್ದರು. ನಂದರ ಒಂದೂ ಮುಕ್ಕಾಲು ಲಕ್ಷಕ್ಕೆ ಡೀಲ್ ಮಾಡಿಕೊಂಡು, ಮೊದಲ ಕಂತಾಗಿ 75 ಸಾವಿರಕ್ಕೆ ಕೈಚಾಚಿದಾಗ ರೆಡ್ ಹ್ಯಾಂಡಾಗಿ ಸಿಗ್ಹಾಕ್ಕಿಕೊಂಡಿದ್ದಾರೆ.
ವಿದ್ಯುತ್ ಗುತ್ತಿಗೆದಾರರೊಬ್ಬರು ಮಾರತಹಳ್ಳಿಯ ಆನಂದನಗರದಲ್ಲಿರುವ ತಾವು ಗುತ್ತಿಗೆ ಪಡಿದಿರುವ ನಿವೇಶನದ ಮುಂಭಾಗದಲ್ಲಿ ವಿದ್ಯುತ್ ಕಂಬ ಸ್ಥಳಾಂತರಿಸಬೇಕೆಂದು ಅರ್ಜಿ ಹಾಕಿದ್ದರು. ಈ ಅರ್ಜಿ ನಾಗರಾಜ್ ಅವರ ಬಳಿ ಬಂದಿದೆ. [ತರಕಾರಿ ಸರಬರಾಜಿಗೆ ಲಂಚ ಕೇಳಿದ ಸುಬ್ರಮಣ್ಯ ಎಸಿಬಿ ಬಲೆಗೆ]

ಮಾರತಹಳ್ಳಿ ಬೆಸ್ಕಾಂನ ಎಸ್ 7 ಉಪವಿಭಾಗದ ಸಹಾಯಕ ಇಂಜಿನಿಯರ್ ನಾಗರಾಜ್ ಅವರು, ವಿದ್ಯುತ್ ಕಂಬ ಸ್ಥಳಾಂತರಿಸಬೇಕಿದ್ದರೆ 2 ಲಕ್ಷ ರುಪಾಯಿ ಲಂಚ ನೀಡಲೇಬೇಕೆಂದು ಒತ್ತಾಯಿಸಿದ್ದಾರೆ. ಕಡೆಗೆ ಒಂದೂ ಮುಕ್ಕಾಲು ಲಕ್ಷಕ್ಕೆ ಡೀಲ್ ಕುದುರಿದೆ.
ವಿದ್ಯುತ್ ಗುತ್ತಿಗೆದಾರರು ನೇರವಾಗಿ ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಿದ್ದಾರೆ. ಭ್ರಷ್ಟ ಅಧಿಕಾರಿ ನಾಗರಾಜ್ ಅವರನ್ನು ಬಲೆಗೆ ಬೀಳಿಸಲು ಭ್ರಷ್ಟಾಚಾರ ನಿಗ್ರಹ ದಳ ತಂತ್ರ ಹೂಡಿದೆ. ಇದರ ಭಾಗವಾಗಿ ವಿದ್ಯುತ್ ಗುತ್ತಿಗೆದಾರರು ನಾಗರಾಜ್ ಅವರಿಗೆ 75 ಸಾವಿರ ರುಪಾಯಿ ನೀಡುವಾಗ ನಾಗರಾಜ್ ಅವರು ಬಲೆಗೆ ಬಿದ್ದಿದ್ದಾರೆ.
ನಾಗರಾಜ್ ಅವರನ್ನು ದಸ್ತಗಿರಿ ಮಾಡಲಾಗಿದೆ. ಅವರ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆ-1988ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿ, ಎಸಿಬಿ ಬೆಂಗಳೂರು ನಗರ ಪೊಲೀಸ್ ಠಾಣೆಯಲ್ಲಿ ತನಿಖೆ ನಡೆಸಲಾಗುತ್ತಿದೆ. [ನರೇಂದ್ರ ಮೋದಿ 'ಬಚ್ಚಲು' ಮಾತು : ಸೇರಿಗೆ ಸವ್ವಾಸೇರು]
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications