ವಿದ್ಯುತ್ ಕಂಬ ಸ್ಥಳಾಂತರಿಸಲು ಲಂಚ ಕೇಳಿ ಸಿಕ್ಕಿಬಿದ್ದ
ಬೆಂಗಳೂರು, ಫೆಬ್ರವರಿ 16 : ವಿದ್ಯುತ್ ಕಂಬ ಸ್ಥಳಾಂತರಿಸಲು 2 ಲಕ್ಷ ರು. ಲಂಚ ಕೇಳಿ, ಮೊದಲ ಕಂತಾಗಿ 75 ಸಾವಿರ ರು. ಇಸಿದುಕೊಳ್ಳುವಾಗ ಭ್ರಷ್ಟಾಚಾರ ನಿಗ್ರಹ ದಳಕ್ಕೆ ಸಹಾಯಕ ಇಂಜಿನಿಯರು ಗುರುವಾರ ಸಿಕ್ಕಿಬಿದ್ದಿದ್ದಾರೆ.
2 ಲಕ್ಷ ರು. ಲಂಚಕ್ಕೆ ಮಾರತಹಳ್ಳಿ ಬೆಸ್ಕಾಂನಲ್ಲಿ ಸಹಾಯಕ ಇಂಜಿನಿಯರ್ ಆಗಿರುವ ಶ್ರೀಮಾನ್ ನಾಗರಾಜ್ ಎನ್ ಅವರು ವಿದ್ಯುತ್ ಗುತ್ತಿಗೆದಾರರಿಂದ ಬೇಡಿಕೆ ಇಟ್ಟಿದ್ದರು. ನಂದರ ಒಂದೂ ಮುಕ್ಕಾಲು ಲಕ್ಷಕ್ಕೆ ಡೀಲ್ ಮಾಡಿಕೊಂಡು, ಮೊದಲ ಕಂತಾಗಿ 75 ಸಾವಿರಕ್ಕೆ ಕೈಚಾಚಿದಾಗ ರೆಡ್ ಹ್ಯಾಂಡಾಗಿ ಸಿಗ್ಹಾಕ್ಕಿಕೊಂಡಿದ್ದಾರೆ.
ವಿದ್ಯುತ್ ಗುತ್ತಿಗೆದಾರರೊಬ್ಬರು ಮಾರತಹಳ್ಳಿಯ ಆನಂದನಗರದಲ್ಲಿರುವ ತಾವು ಗುತ್ತಿಗೆ ಪಡಿದಿರುವ ನಿವೇಶನದ ಮುಂಭಾಗದಲ್ಲಿ ವಿದ್ಯುತ್ ಕಂಬ ಸ್ಥಳಾಂತರಿಸಬೇಕೆಂದು ಅರ್ಜಿ ಹಾಕಿದ್ದರು. ಈ ಅರ್ಜಿ ನಾಗರಾಜ್ ಅವರ ಬಳಿ ಬಂದಿದೆ. [ತರಕಾರಿ ಸರಬರಾಜಿಗೆ ಲಂಚ ಕೇಳಿದ ಸುಬ್ರಮಣ್ಯ ಎಸಿಬಿ ಬಲೆಗೆ]

ಮಾರತಹಳ್ಳಿ ಬೆಸ್ಕಾಂನ ಎಸ್ 7 ಉಪವಿಭಾಗದ ಸಹಾಯಕ ಇಂಜಿನಿಯರ್ ನಾಗರಾಜ್ ಅವರು, ವಿದ್ಯುತ್ ಕಂಬ ಸ್ಥಳಾಂತರಿಸಬೇಕಿದ್ದರೆ 2 ಲಕ್ಷ ರುಪಾಯಿ ಲಂಚ ನೀಡಲೇಬೇಕೆಂದು ಒತ್ತಾಯಿಸಿದ್ದಾರೆ. ಕಡೆಗೆ ಒಂದೂ ಮುಕ್ಕಾಲು ಲಕ್ಷಕ್ಕೆ ಡೀಲ್ ಕುದುರಿದೆ.
ವಿದ್ಯುತ್ ಗುತ್ತಿಗೆದಾರರು ನೇರವಾಗಿ ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಿದ್ದಾರೆ. ಭ್ರಷ್ಟ ಅಧಿಕಾರಿ ನಾಗರಾಜ್ ಅವರನ್ನು ಬಲೆಗೆ ಬೀಳಿಸಲು ಭ್ರಷ್ಟಾಚಾರ ನಿಗ್ರಹ ದಳ ತಂತ್ರ ಹೂಡಿದೆ. ಇದರ ಭಾಗವಾಗಿ ವಿದ್ಯುತ್ ಗುತ್ತಿಗೆದಾರರು ನಾಗರಾಜ್ ಅವರಿಗೆ 75 ಸಾವಿರ ರುಪಾಯಿ ನೀಡುವಾಗ ನಾಗರಾಜ್ ಅವರು ಬಲೆಗೆ ಬಿದ್ದಿದ್ದಾರೆ.
ನಾಗರಾಜ್ ಅವರನ್ನು ದಸ್ತಗಿರಿ ಮಾಡಲಾಗಿದೆ. ಅವರ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆ-1988ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿ, ಎಸಿಬಿ ಬೆಂಗಳೂರು ನಗರ ಪೊಲೀಸ್ ಠಾಣೆಯಲ್ಲಿ ತನಿಖೆ ನಡೆಸಲಾಗುತ್ತಿದೆ. [ನರೇಂದ್ರ ಮೋದಿ 'ಬಚ್ಚಲು' ಮಾತು : ಸೇರಿಗೆ ಸವ್ವಾಸೇರು]
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications