ಟೆಕ್ಕಿ ಮೇಲೆ ಲೈಂಗಿಕ ದೌರ್ಜನ್ಯ, ಜ್ಯೋತಿಷಿ ಬಂಧನ
ಬೆಂಗಳೂರು, ನ. 22 : ಮದುವೆ ಬಗ್ಗೆ ಭವಿಷ್ಯ ಕೇಳಲು ಹೋದ ಸಾಫ್ಟ್ವೇರ್ ಇಂಜಿನಿಯರ್ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಜ್ಯೋತಿಷಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಹೊಯ್ಸಳ ನಗರದಲ್ಲಿ ಘಟನೆ ನಡೆದಿದ್ದು, ಜ್ಯೋತಿಷಿಯ ವಿಚಾರಣೆಯನ್ನು ಪೊಲೀಸರು ನಡೆಸುತ್ತಿದ್ದಾರೆ.
ನಗರದ ಎಲೆಕ್ಟ್ರಾನಿಕ್ ಸಿಟಿಯ ಸಾಫ್ಟ್ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಪಶ್ಚಿಮ ಬಂಗಾಳದ ಯುವತಿ ಮೇಲೆ ಜ್ಯೋತಿಷಿ ದಾಮೋಧರನ್ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಬುಧವಾರ ಯುವತಿ ಮತ್ತು ಆಕೆಯ ಸ್ನೇಹಿತೆ ದಾಮೋಧರನ್ ಮನೆಗೆ ತೆರಳಿದ್ದಾಗ ಈ ಘಟನೆ ನಡೆದಿದ್ದು, ಈ ಕುರಿತು ಯುವತಿ ದೂರು ನೀಡಿದ್ದಾಳೆ. [ಕೊಪ್ಪಳದಲ್ಲಿ ಸಿಕ್ಕಿಬಿದ್ದ ನಕಲಿ ಕಾಮಿ ಸ್ವಾಮಿ]

ಯುವತಿಗೆ ಕುಡಿಯಲು ತೀರ್ಥದಂತಹ ಪದಾರ್ಥ ನೀಡಿದ ಜ್ಯೋತಿಷಿ ನಂತರ ಆಕೆಯನ್ನು ಕೊಠಡಿಯೊಂದಕ್ಕೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಯುವತಿ ಜೊತೆ ಬಂದಿದ್ದ ಸ್ನೇಹಿತೆಯನ್ನು ಹೊರಗೆ ಕಳಿಸಿದ್ದ ಆತ ಈ ಕೃತ್ಯ ನಡೆಸಿದ್ದಾನೆ ಎಂದು ಯುವತಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾಳೆ. [ಯೂಟ್ಯೂಬಲ್ಲಿ ಹೊಸ ಅಲೆ ಎಬ್ಬಿಸಿದ ಇನ್ಫಿ ಹುಡುಗ್ರು]
ದೌರ್ಜನ್ಯ ನಡೆಯುವ ಸಂದರ್ಭದಲ್ಲಿ ಜ್ಯೋತಿಷಿ ಮನೆಯಲ್ಲಿ ಯಾರೂ ಇರಲಿಲ್ಲ ಎಂದು ಯುವತಿ ಪೊಲೀಸರಿಗೆ ತಿಳಿಸಿದ್ದಾಳೆ. ದೌರ್ಜನ್ಯ ನಡೆಸಿದ ನಂತರ ಯುವತಿಗೆ ಮರುದಿನ ಪುನಃ ಬರುವಂತೆ ಆತ ಒತ್ತಾಯ ಮಾಡಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಸುಮಾರು ಮೂರು ಗಂಟೆಗಳ ಕಾಲ ಕೊಠಡಿಯಲ್ಲಿ ಯುವತಿಯನ್ನು ಕೂಡಿ ಹಾಕಿದ್ದ ಜ್ಯೋತಿಷಿ, ಒಂದು ಗಂಟೆ ಆಕೆಯ ಭವಿಷ್ಯದ ಬಗ್ಗೆ ಮಾತನಾಡಿ, ಆಕೆಯಲ್ಲಿ ನಂಬಿಕೆ ಬರುವಂತೆ ಮಾಡಿ ನಂತರ ದೌರ್ಜನ್ಯ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.
ಜ್ಯೋತಿಷಿ ಮನೆಯಿಂದ ಹೊರಗೆ ಬಂದ ಯುವತಿ ಸ್ನೇಹಿತೆಗೆ ಈ ಬಗ್ಗೆ ಮಾಹಿತಿ ನೀಡಿದ್ದು, ನಂತರ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ಯುವತಿ ದೂರಿನ ಅನ್ವಯ ಪೊಲೀಸರು ದಾಮೋಧರ್ನನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
-
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ












Click it and Unblock the Notifications