ಜ್ಯೋತಿಷಿಯ ಎಡಬಿಡಂಗಿ ಜ್ಯೋತಿಷ್ಯದಿಂದ ಮೂರು ಮುಗ್ದ ಜೀವಗಳು ಬಲಿ
ಬೆಂಗಳೂರು, ಜನವರಿ 28: ಜ್ಯೋತಿಷಿ ಹೇಳಿದ ಜ್ಯೋತಿಷ್ಯದಿಂದ ಮೂರು ಮುಗ್ದ ಜೀವಗಳು ಮೃತಪಟ್ಟಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ.
ಮಗುವಿನ ಬಗ್ಗೆ ಜ್ಯೋತಿಷಿ ಹೇಳಿದ ಆತಂಕಕಾರಿ ಭವಿಷ್ಯದಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಗೃಹಿಣಿ ಇಬ್ಬರು ಮಕ್ಕಳು ಕೊಂದು ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಎಪಿಎಂಸಿ ಸಮೀಪದ ಸರ್ ಎಂ ವಿ ಬಡಾವಣೆಯಲ್ಲಿರುವ ಉಷಾ(29) ಶಮಂತ್(8) ಮತ್ತು ಸಾನ್ವಿ (4) ಕೊಂದು ಸಾವಿಗೆ ಶರಣಾಗಿದ್ದಾರೆ.
ಶಿಡ್ಲಘಟ್ಟ ತಾಲೂಕು ಅಬ್ಲೂಡು ಗ್ರಾಮದ ಶಿಕ್ಷಕ ಅಶ್ವತ್ಥನಾರಾಯಣ್ ಮತ್ತು ಚಿಕ್ಕಬಳ್ಳಾಪುರದ ಕಂದವಾರಪೇಟೆ ನಿವಾಸಿ ಉಷಾ ಹತ್ತು ವರ್ಷಗಳ ಹಿಂದೆ ವಿವಾಹವಾಗಿದ್ದರು. ದಂಪತಿ ಎಂವಿ ಬಡಾವಣೆಯ ಬಾಡಿಗೆ ಮನೆಯಲ್ಲಿ ವಾಸವಿದ್ದರು.

ನಗರದ ಕೆವಿ ಆಂಗ್ಲ ಶಾಲೆಯಲ್ಲಿ ಮಗ ಶಮಂತ್ ಎರಡನೇ ತರಗತಿ ಓದುತ್ತಿದ್ದ, ಈ ನಡುವೆ ಮಕ್ಕಳ ಜಾತಕ ಬರೆಸಿದಾಗ ಜ್ಯೋತಿಷಿ ಗಂಡಾಂತರ ಎದುರಾಗುವ ಲಕ್ಷಣ ವಿದೆ ಎಂಉ ಭವಿಷ್ಯ ನುಡಿದಿದ್ದ. ಇದರಿಂದ ಉಷಾ ಖಿನ್ನತೆಗೆ ಒಳಗಾಗಿದ್ದರು, ಪತಿ ಈ ಬಗ್ಗೆ ಎಷ್ಟು ಮನವೊಲಿಸಲು ಯತ್ನಿಸಿದರೂ ಸಾಧ್ಯವಾಗಿರಲಿಲ್ಲ. ಭಾನುವಾರ ಬೆಳಗ್ಗೆ ಉಷಾ ಕರೆ ಸ್ವೀಕರಿಸದಿದ್ದಕ್ಕೆ ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಉಷಾ ಊಟದ ಜೊತೆಗೆ ಮಕ್ಕಳಿಬ್ಬರಿಗೆ ನಿದ್ರೆ ಮಾತ್ರೆ ತಿನ್ನಿಸಿದ್ದಾಳೆ. ಮಕ್ಕಳು ನಿದ್ದೆ ಹೋದ ಮೇಲೆ ಕತ್ತು ಹಿಸುಕಿ ಹಾಸಿಗೆ ಮೇಲೆ ಮಲಗಿಸಿದ್ದಾಳೆ. ಬಳಿಕ ಮಕ್ಕಳ ಪಕ್ಕದಲ್ಲೇ ನೇಣು ಬಿಗಿದುಕೊಂಡಿದ್ದಾಳೆ. ಎರಡೂವರೆ ವರ್ಷದ ಹಿಂದೆ ಉಷಾ ಸಹೋದರಿ ಕೂಡ ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆಗೆ ಶರಣಾಗಿದ್ದಳು. ಇತ್ತೀಚೆಗಷ್ಟೇ ಜ್ಯೋತಿಷಿ ಮಾತು ಕೇಳಿಕೊಂಡು ಹುಟ್ಟುವ ಮಗು ಹೆಣ್ಣೆಂದು ಭಾವಿಸಿ ಪತ್ನಿಗ ಗರ್ಭಪಾತ ಮಾಡಿಸಿದ್ದ ಘಟನೆಯೂ ಕೂಡ ನಡೆದಿತ್ತು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications