ಜ್ಯೋತಿಷಿಯ ಎಡಬಿಡಂಗಿ ಜ್ಯೋತಿಷ್ಯದಿಂದ ಮೂರು ಮುಗ್ದ ಜೀವಗಳು ಬಲಿ
ಬೆಂಗಳೂರು, ಜನವರಿ 28: ಜ್ಯೋತಿಷಿ ಹೇಳಿದ ಜ್ಯೋತಿಷ್ಯದಿಂದ ಮೂರು ಮುಗ್ದ ಜೀವಗಳು ಮೃತಪಟ್ಟಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ.
ಮಗುವಿನ ಬಗ್ಗೆ ಜ್ಯೋತಿಷಿ ಹೇಳಿದ ಆತಂಕಕಾರಿ ಭವಿಷ್ಯದಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಗೃಹಿಣಿ ಇಬ್ಬರು ಮಕ್ಕಳು ಕೊಂದು ತಾನು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಎಪಿಎಂಸಿ ಸಮೀಪದ ಸರ್ ಎಂ ವಿ ಬಡಾವಣೆಯಲ್ಲಿರುವ ಉಷಾ(29) ಶಮಂತ್(8) ಮತ್ತು ಸಾನ್ವಿ (4) ಕೊಂದು ಸಾವಿಗೆ ಶರಣಾಗಿದ್ದಾರೆ.
ಶಿಡ್ಲಘಟ್ಟ ತಾಲೂಕು ಅಬ್ಲೂಡು ಗ್ರಾಮದ ಶಿಕ್ಷಕ ಅಶ್ವತ್ಥನಾರಾಯಣ್ ಮತ್ತು ಚಿಕ್ಕಬಳ್ಳಾಪುರದ ಕಂದವಾರಪೇಟೆ ನಿವಾಸಿ ಉಷಾ ಹತ್ತು ವರ್ಷಗಳ ಹಿಂದೆ ವಿವಾಹವಾಗಿದ್ದರು. ದಂಪತಿ ಎಂವಿ ಬಡಾವಣೆಯ ಬಾಡಿಗೆ ಮನೆಯಲ್ಲಿ ವಾಸವಿದ್ದರು.

ನಗರದ ಕೆವಿ ಆಂಗ್ಲ ಶಾಲೆಯಲ್ಲಿ ಮಗ ಶಮಂತ್ ಎರಡನೇ ತರಗತಿ ಓದುತ್ತಿದ್ದ, ಈ ನಡುವೆ ಮಕ್ಕಳ ಜಾತಕ ಬರೆಸಿದಾಗ ಜ್ಯೋತಿಷಿ ಗಂಡಾಂತರ ಎದುರಾಗುವ ಲಕ್ಷಣ ವಿದೆ ಎಂಉ ಭವಿಷ್ಯ ನುಡಿದಿದ್ದ. ಇದರಿಂದ ಉಷಾ ಖಿನ್ನತೆಗೆ ಒಳಗಾಗಿದ್ದರು, ಪತಿ ಈ ಬಗ್ಗೆ ಎಷ್ಟು ಮನವೊಲಿಸಲು ಯತ್ನಿಸಿದರೂ ಸಾಧ್ಯವಾಗಿರಲಿಲ್ಲ. ಭಾನುವಾರ ಬೆಳಗ್ಗೆ ಉಷಾ ಕರೆ ಸ್ವೀಕರಿಸದಿದ್ದಕ್ಕೆ ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಉಷಾ ಊಟದ ಜೊತೆಗೆ ಮಕ್ಕಳಿಬ್ಬರಿಗೆ ನಿದ್ರೆ ಮಾತ್ರೆ ತಿನ್ನಿಸಿದ್ದಾಳೆ. ಮಕ್ಕಳು ನಿದ್ದೆ ಹೋದ ಮೇಲೆ ಕತ್ತು ಹಿಸುಕಿ ಹಾಸಿಗೆ ಮೇಲೆ ಮಲಗಿಸಿದ್ದಾಳೆ. ಬಳಿಕ ಮಕ್ಕಳ ಪಕ್ಕದಲ್ಲೇ ನೇಣು ಬಿಗಿದುಕೊಂಡಿದ್ದಾಳೆ. ಎರಡೂವರೆ ವರ್ಷದ ಹಿಂದೆ ಉಷಾ ಸಹೋದರಿ ಕೂಡ ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆಗೆ ಶರಣಾಗಿದ್ದಳು. ಇತ್ತೀಚೆಗಷ್ಟೇ ಜ್ಯೋತಿಷಿ ಮಾತು ಕೇಳಿಕೊಂಡು ಹುಟ್ಟುವ ಮಗು ಹೆಣ್ಣೆಂದು ಭಾವಿಸಿ ಪತ್ನಿಗ ಗರ್ಭಪಾತ ಮಾಡಿಸಿದ್ದ ಘಟನೆಯೂ ಕೂಡ ನಡೆದಿತ್ತು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications