ತೇಜಸ್ವಿಸೂರ್ಯ - ಲೋಕಸಭೆಗೆ ಆಯ್ಕೆಯಾದ ಕಿರಿಯ ವಯಸ್ಸಿನ ಸಂಸದ
Recommended Video
ದಿವಂಗತ ಅನಂತ್ ಕುಮಾರ್ ಅವರು ಈ ಕ್ಷೇತ್ರದಲ್ಲಿ ಆರು ಬಾರಿ ಜಯ ಸಾಧಿಸಿ, ಬಿಜೆಪಿಗೆ ಸೇಫ್ ಎನಿಸುವ ವಾತಾವರಣ ಸೃಷ್ಟಿಸಿದ್ದ ಕ್ಷೇತ್ರದಲ್ಲಿ ಯುವ ಮುಖಂಡನೊಬ್ಬನನ್ನು ಕಣಕ್ಕಿಳಿಸಿದ್ದು ಅಚ್ಚರಿ ಮೂಡಿಸಿತ್ತು.
ಅನಂತ್ ಕುಮಾರ್ ಅವರ ನಿಧನ ನಂತರ ಅವರ ಪತ್ನಿ ಸಾಮಾಜಿಕ ಕಾರ್ಯಕರ್ತೆ ತೇಜಸ್ವಿನಿ ಅನಂತಕುಮಾರ್ ಅವರಿಗೆ ಟಿಕೆಟ್ ಸಿಗುವ ನಿರೀಕ್ಷೆಯಿತ್ತು. ಮಾಜಿ ಡಿಸಿಎಂ ಆರ್ ಅಶೋಕ್ ಅವರು ತೇಜಸ್ವಿನಿ ಅವರ ಹೆಸರನ್ನು ಶಿಫಾರಸು ಮಾಡಿದ್ದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಕೂಡಾ ಹೈಕಮಾಂಡಿಗೆ ತೇಜಸ್ವಿನಿ ಅವರ ಹೆಸರನ್ನು ಸೂಚಿಸಿದ್ದರು. ಆದರೆ, ಅಂತಿಮವಾಗಿ 28 ವರ್ಷ ವಯಸ್ಸಿನ ತೇಜಸ್ವಿ ಸೂರ್ಯ ಅವರಿಗೆ ಸ್ಪರ್ಧಿಸಲು ಟಿಕೆಟ್ ಸಿಕ್ಕಿತು.
ಇಂದು ಮೇ 23ರಂದು 17ನೇ ಲೋಕಸಭೆಗೆ ಕರ್ನಾಟಕದಿಂದ ಆಯ್ಕೆಯಾದ ಅತ್ಯಂತ ಕಿರಿಯ ವಯಸ್ಸಿನ ಸಂಸದರಲ್ಲಿ ಒಬ್ಬರಾಗಿ ತೇಜಸ್ವಿ ಸೂರ್ಯ ಹೊರ ಹೊಮ್ಮಿದ್ದಾರೆ. ಒಟ್ಟಾರೆ, ಭಾರತದಿಂದ ಆಯ್ಕೆಯಾದ ಅತಿ ಕಿರಿಯ ವಯಸ್ಸಿನ ಸಂಸದ/ದೆ ಎಂಬ ಕೀರ್ತಿ ಒಡಿಶಾದ ಬಿಜು ಜನತಾದಳದ ಕಿಯೋಹಾರ್ ಕ್ಷೇತ್ರದ ಸಂಸದೆ 25 ವರ್ಷದ ಚಂದ್ರಾಣಿ ಮುರ್ಮು ಅವರಿಗೆ ಸಲ್ಲುತ್ತದೆ.
ಗ್ಯಾಲರಿ: ಭರ್ಜರಿ ಜಯದೊಂದಿಗೆ ಸಂಭ್ರಮಾಚರಣೆಯಲ್ಲಿ ಬಿಜೆಪಿ
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರಕ್ಕೆ ಏಪ್ರಿಲ್ 18ರಂದು ಎರಡನೇ ಹಂತದ ಮತದಾನ ನಡೆಸಲಾಯಿತು. ಮೇ 23ರಂದು ಫಲಿತಾಂಶ ಹೊರ ಬಂದಿದೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ಸಿನಿಂದ ಹಿರಿಯ ಮುಖಂಡ ಬಿ.ಕೆ ಹರಿಪ್ರಸಾದ್ ಅವರು ಸ್ಪರ್ಧಿಸಿದ್ದರು.

ಬ್ರಿಟನ್ ಪಾರ್ಲಿಮೆಂಟಿಗೆ ತೆರಳಿದ್ದ ಕಿರಿಯ ಸಂಸದರು
ಬ್ರಿಟನ್ ಪಾರ್ಲಿಮೆಂಟ್ನಲ್ಲಿ ಭಾಗವಹಿಸಲು ಆಯ್ಕೆಯಾದವರ ಕಿರಿಯ ಮುಖಂಡರ ಪೈಕಿ ತೇಜಸ್ವಿ ಸೂರ್ಯ ಕೂಡಾ ಒಬ್ಬರಾಗಿದ್ದರು. ಜೆಡಿಎಸ್ ನಿಂದ ಪ್ರಜ್ವಲ್ ರೇವಣ್ಣ, ಕಾಂಗ್ರೆಸ್ಸಿನಿಂದ ರಿಜ್ವಾನ್ ಅರ್ಷದ್ ಅವರು ಆಯ್ಕೆಯಾಗಿದ್ದರು. ಬ್ರಿಟನ್ ಸಂಸತ್ತಿನ ಕಾರ್ಯ ನಿರ್ವಹಣೆ ಬಗ್ಗೆ ಅರಿವು ಮೂಡಿಸುವ ಪ್ರವಾಸ ಇದಾಗಿತ್ತು. ಇಂದು ಈ ಮೂವರು ಯುವ ನಾಯಕರು ಲೋಕಸಭೆ ಚುನಾವಣೆಯಲ್ಲಿ ಅಭ್ಯರ್ಥಿಗಳಾಗಿರುವುದು ಗಮನಾರ್ಹ. ಈ ಪೈಕಿ ಪ್ರಜ್ವಲ್ ಹಾಗೂ ತೇಜಸ್ವಿ ಇಬ್ಬರು ಗೆಲುವು ಸಾಧಿಸಿದ ಅತ್ಯಂತ ಕಿರಿಯ ಸಂಸದರಾಗಿದ್ದಾರೆ. ರಿಜ್ವಾನ್ ಅವರು ಪಿಸಿ ಮೋಹನ್ ವಿರುದ್ಧ ಸೋಲು ಕಂಡಿದ್ದಾರೆ. ಮಾಧ್ಯಮಗಳಲ್ಲಿ ದೇಶ, ಪಕ್ಷದ ಪರವಾಗಿ ಚರ್ಚೆಗಳಲ್ಲಿ ಭಾಗವಹಿಸಿ ತೇಜಸ್ವಿ ಸೂರ್ಯ ಅವರು ಸೈ ಎನಿಸಿಕೊಂಡಿದ್ದಾರೆ.

ಉಪ ಚುನಾವಣೆಗೂ ಹೆಸರು ಕೇಳಿ ಬಂದಿತ್ತು
ಈ ಹಿಂದೆ ಜಯನಗರದ ಶಾಸಕ ಬಿಎನ್ ವಿಜಯ್ ಕುಮಾರ್ ಅವರ ಅಕಾಲಿಕ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ನಡೆದ ಉಪ ಚುನಾವಣೆಗಾಗಿ ಅಭ್ಯರ್ಥಿ ಆಯ್ಕೆ ಹುಡುಕಾಟದಲ್ಲಿದ್ದಾಗಲೂ ತೇಜಸ್ವಿ ಸೂರ್ಯ ಅವರ ಹೆಸರು ಕೇಳಿಬಂದಿತ್ತು.ಆದರೆ, ಸ್ಪರ್ಧೆ ನಿರಾಕರಿಸಿದ್ದರೂ ಪಕ್ಷ ನೀಡುವ ಯಾವುದೇ ಕಾರ್ಯವನ್ನು ಅಚ್ಚುಕಟ್ಟಾಗಿ ನಿಭಾಯಿಸುವೆ ಎಂದಿದ್ದರು. ಅಂದು ವಿಜಯ್ ಕುಮಾರ್ ಅವರ ಸಹೋದರ ಪ್ರಹ್ಲಾದ್ ಬಾಬು ಅವರಿಗೆ ಟಿಕೆಟ್ ನೀಡಲಾಗಿತ್ತು. ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ವಿರುದ್ಧ ಪ್ರಹ್ಲಾದ್ ಸೋಲು ಕಂಡಿದ್ದರು.

ಬಿಜೆಪಿ ಶಾಸಕರೇ ಇರುವ ಕ್ಷೇತ್ರ
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ಸಿನಿಂದ ಹಿರಿಯ ಮುಖಂಡ ಬಿ.ಕೆ ಹರಿಪ್ರಸಾದ್ ಅವರು ಸ್ಪರ್ಧಿಸಿದ್ದರು. ಒಟ್ಟು 8 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ, ಬೆಂಗಳೂರು ನಗರದ ಪ್ರಖ್ಯಾತ ಬಡಾವಣೆಗಳನ್ನು ತನ್ನ ಒಡಲಿನಲ್ಲಿ ಇಟ್ಟುಕೊಂಡಿರುವ ಕ್ಷೇತ್ರ ಇದಾಗಿದೆ. ಬಿ.ಟಿ.ಎಂ ಲೇಔಟ್, ಜಯನಗರ ಹೊರತು ಪಡಿಸಿ ಉಳಿದ ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಶಾಸಕರಿದ್ದಾರೆ.

ಬಿಜೆಪಿ ಅಭ್ಯರ್ಥಿಗಳ ಪ್ರಾಬಲ್ಯದ ಕ್ಷೇತ್ರ
1996 ರಿಂದ 2014ರ ತನಕ ಬಿಜೆಪಿ ಅಭ್ಯರ್ಥಿಗಳೇ ಗೆದ್ದ ಕ್ಷೇತ್ರವಿದು. ಬ್ರಾಹ್ಮಣ ಮತದಾರರೇ ಇಲ್ಲಿ ನಿರ್ಣಾಯಕ ಪಾತ್ರವಹಿಸಲಿದ್ದಾರೆ. 1999ರ ನಂತರ ಮತ್ತೆ ಈ ಕ್ಷೇತ್ರಕ್ಕೆ ಮರಳಿರುವ ಹರಿಪ್ರಸಾದ್ ಅವರನ್ನು ಸೋಲಿಸಿ ಯುವ ಮುಖಂಡ ತೇಜಸ್ವಿ ಸೂರ್ಯ ವಿಜಯ ಮಾಲೆ ಧರಿಸಿದ್ದಾರೆ.

2019ರ ಬೆಂಗಳೂರು ದಕ್ಷಿಣ ಕ್ಷೇತ್ರದ ಫಲಿತಾಂಶ
ಬಿಜೆಪಿಯ ಅಭ್ಯರ್ಥಿ ತೇಜಸ್ವಿ ಸೂರ್ಯ 7,39,229 ಮತ(62.2%)ಗಳನ್ನು ಗಳಿಸಿದರೆ, ಕಾಂಗ್ರೆಸ್ಸಿನ ಬಿ.ಕೆ ಹರಿಪ್ರಸಾದ್ ಅವರು 4,08,037(34.33%) ಮಾತ್ರ ಗಳಿಸಿ ಸೋಲು ಕಂಡಿದ್ದಾರೆ.
ಎಣಿಕೆಯಾದ 11,88,491 ಮತಗಳ ಪೈಕಿ 11,85,137 ಇವಿಎಂ ಮತ, 3354 ಅಂಚೆ ಮತಗಳು ಹಾಗೂ 9938 ನೋಟಾ ಮತಗಳು ಬಿದ್ದಿವೆ.
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications