ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನ: ಅದಮ್ಯ ಚೇತನದಿಂದ ಅನ್ನದಾನ, ಸಂಗೀತ ನಮನ
ಬೆಂಗಳೂರು, ಡಿಸೆಂಬರ್ 25: ಧೀಮಂತ ನಾಯಕ, ಕವಿ ಹೃದಯಿ, ಅಜಾತ ಶತ್ರು, ಮಾಜಿ ಪ್ರಧಾನಮಂತ್ರಿ ಭಾರತರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ರವರ ಜನ್ಮ ದಿನಾಚರಣೆಯನ್ನು ಅದಮ್ಯ ಚೇತನ ಹಾಗೂ ಅನಂತಕುಮಾರ್ ಪ್ರತಿಷ್ಠಾನದಿಂದ ವಿಶೇಷವಾಗಿ ಆಚರಿಸಲಾಯಿತು.
Recommended Video
ಅದಮ್ಯ ಚೇತನ ಸಂಸ್ಥೆಯ ಪಕ್ಕದಲ್ಲಿರುವ ಕನ್ನಡ ಕಟ್ಟೆಯಲ್ಲಿ ಮತ್ತು ಜಯನಗರದ 4ನೇ ಹಂತದ ಜೈನ ಮಂದಿರದ ಬಳಿ ಅದಮ್ಯ ಚೇತನ ಸಂಸ್ಥೆಯ ಬಳಿ ಪ್ರತಿನಿತ್ಯ ಉಚಿತವಾಗಿ ನೀಡಲಾಗುತ್ತಿರುವ ನಿತ್ಯ ಅನ್ನದಾನದಲ್ಲಿ ಸಿಹಿ ಊಟವನ್ನೂ ಬಡಿಸಿ ಸಂಭ್ರಮಿಸಲಾಯಿತು.
ಸಂಜೆ ಅನಂತಕುಮಾರ್ ಪ್ರತಿಷ್ಠಾನದಿಂದ ಅಟಲ್ ಬಿಹಾರಿ ವಾಜಪೇಯಿ ವಿರಚಿತ ಆಯ್ದ ಹಾಡುಗಳ ಸಂಗೀತ ನಮನವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಅಟಲ್ ಜಿ ವಿರಚಿತ ಹಾಡುಗಳನ್ನು ಡಾ.ಪದ್ಮಿನಿ ಓಕ್ ಅವರು ಸುಶ್ರಾವ್ಯವಾಗಿ ಹಾಡಿದರು.

ಕ್ಯಾ ಖೋಯಾ ಕ್ಯಾ ಪಾಯಾ ಜಗಮೇ, ಭಾರತ್ ಜಮೀನ್ ಕ ತುಕಡಾ ನಹೀ ಹೀಗೆ ಹಲವು ಹಾಡುಗಳನ್ನು ಹಾಡಲಾಯಿತು. ಹಾಗೂ ಅವುಗಳ ಭಾವಾರ್ಥವನ್ನು ತಿಳಿಸಿಕೊಡಲಾಯಿತು. ಐಶ್ವರ್ಯ ಅನಂತಕುಮಾರ್ ಅವರು ನಡೆಸಿಕೊಟ್ಟ ಈ ಕಾರ್ಯಕ್ರಮವನ್ನು ಫೇಸ್ಬುಕ್ ಲೈವ್ ಮೂಲಕ ಲಕ್ಷಾಂತರ ಜನರು ದೇಶಾದ್ಯಂತ ವೀಕ್ಷಿಸಿದರು.

ದಿ.ಅನಂತಕುಮಾರ್ ಅವರು ಅಟಲ್ ಬಿಹಾರಿ ವಾಜಪೇಯಿ ಅವರ ಸಚಿವ ಸಂಪುಟದಲ್ಲಿ ಮೊದಲ ಬಾರಿಗೆ ಕೇಂದ್ರದ ಮಂತ್ರಿಗಳಾಗಿದ್ದನ್ನು ಅದಮ್ಯ ಚೇತನ ಸಂಸ್ಥೆಯ ಮುಖ್ಯಸ್ಥೆ ಡಾ.ತೇಜಸ್ವಿನಿ ಅನಂತಕುಮಾರ್ ನೆನೆಪಿಸಿಕೊಂಡರು. ಮೊದಲ ಬಾರಿ ಪ್ರಮಾಣವಚನ ಸ್ವೀಕಾರ ಹಾಗೂ ಖಾತೆ ಹಂಚಿಕೆಯ ವೇಳೆ ಅಟಲ್ ಜಿ ಅವರೊಂದಿಗಿನ ಒಡನಾಟವನ್ನು ಅವರು ಮೆಲುಕು ಹಾಕಿದರು.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications