ಎಟಿಎಂ ಪ್ರಕರಣ : ಮಧುಗಿರಿಯಲ್ಲಿ ಶಂಕಿತನ ವಿಚಾರಣೆ
ಬೆಂಗಳೂರು, ಡಿ. 7 : ಕಾರ್ಪೊರೇಷನ್ ಬ್ಯಾಂಕ್ ಎಟಿಎಂನಲ್ಲಿ ಜ್ಯೋತಿ ಉದಯ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ತುಮಕೂರಿನ ಮಧುಗಿರಿಯಲ್ಲಿ ಶಂಕಿತ ವ್ಯಕ್ತಿಯೊಬ್ಬರನ್ನು ಪೊಲೀಸರು ವಶಕ್ಕೆ ಪಡೆದು ತೀವ್ರವಾಗಿ ವಿಚಾರಣೆ ನಡೆಸಿದ್ದಾರೆ. ಆಂಧ್ರಪ್ರದೇಶದ ಮೂಲದ ವ್ಯಕ್ತಿಯನ್ನು ಶುಕ್ರವಾರ ರಾತ್ರಿ ಪೊಲೀಸರು ವಶಕ್ಕೆ ಪಡೆದ್ದಾರೆ.
ಸಾರ್ವಜನಿಕರು ನೀಡಿದ ಮಾಹಿತಿ ಅನ್ವಯ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ನಿವಾಸಿಯಾದ ವೇಣುಗೋಪಾಲ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೆಂಗಗಳೂರಿನಲ್ಲಿ ಸೆಕ್ಯೂರಿಟಿ ಏಜೆನ್ಸಿ ನಡೆಸುತ್ತಿದ್ದ ಈತ, ವಿಪರೀತ ನಷ್ಟ ಉಂಟಾದ ಕಾರಣ ಮಧುಗಿರಿಯಲ್ಲಿ ತಲೆ ಮರಿಸಿಕೊಂಡಿದ್ದ ಎಂದು ತಿಳಿದು ಬಂದಿದೆ. (ಎಟಿಎಂ ಪ್ರಕರಣ ಪೊಲೀಸರ ಎರಡನೇ ದೊಡ್ಡ ಕಾರ್ಯಾಚರಣೆ)

ನ.19ರಂದು ಬೆಂಗಳೂರಿನ ಎಟಿಎಂನಲ್ಲಿ ಕಾರ್ಪೋರೇಷನ್ ಬ್ಯಾಂಕ್ ವ್ಯವಸ್ಥಾಪಕಿ ಜ್ಯೋತಿ ಉದಯ್ ಮೇಲೆ ಹಲ್ಲೆ ಮಾಡಿದ ವ್ಯಕ್ತಿಗೂ, ವೇಣುಗೋಪಾಲ್ ಅವರಿಗೂ ಹೋಲಿಕೆ ಕಂಡುಬಂದ ಹಿನ್ನಲೆಯಲ್ಲಿ ಸಾರ್ವಜನಿಕರು ಪೊಲೀಸರಿಗೆ ಅವರ ಬಗ್ಗೆ ಮಾಹಿತಿ ನೀಡಿದ್ದಾರೆ. ಆದ್ದರಿಂದ ಪೊಲೀಸರು ಅವರ ವಿಚಾರಣೆ ನಡೆಸಿದ್ದಾರೆ.
ಸದ್ಯ ಪೊಲೀಸರು ವೇಣುಗೋಪಾಲ್ ಪೂರ್ವಪರಗಳ ಕುರಿತು ತೀವ್ರವಾಗಿ ವಿಚಾರಣೆ ನಡೆಸಿದ್ದಾರೆ. ಕೆಲವು ದಿನಗಳ ಹಿಂದೆ ತಿಪಟೂರಿನಲ್ಲಿಯೂ ಪೊಲೀಸರು ಶಂಕಿತ ವ್ಯಕ್ತಿಯೊಬ್ಬರ ವಿಚಾರಣೆ ನಡೆಸಿ ಬಿಡುಗಡೆ ಮಾಡಿದ್ದರು. ನಂತರ ಆಂಧ್ರಪ್ರದೇಶದಲ್ಲಿಯೂ ಒಬ್ಬರ ವಿಚಾರಣೆ ನಡೆದಿತ್ತು. ಪೊಲೀಸರು ಹಲ್ಲೆ ಆರೋಪಿಯ ರೇಖಾಚಿತ್ರ ಬಿಡುಗಡೆ ಮಾಡಿರುವುದರಿಂದ ಅನುಮಾನ ಬಂದರೆ ಸಾರ್ವಜನಿಕರು ಪೊಲೀಸರಿಗೆ ಕರೆ ಮಾಡುತ್ತಿದ್ದಾರೆ. (ತುಮಕೂರಿನಲ್ಲಿ ಶಂಕಿತನ ಬಂಧನ)
ಜ್ಯೋತಿ ಉದಯ್ ಮೇಲೆ ಹಲ್ಲೆ ಮಾಡಿದ ಆರೋಪಿ ಪತ್ತೆಗಾಗಿ 400ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ. ಧರ್ಮಾವರಂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರ ಪೊಲೀಸರು ರಾಜ್ಯ ಪೊಲೀಸರೊಂದಿಗೆ ಕೈ ಜೋಡಿಸಿದ್ದಾರೆ. ಕಳೆದ 18 ದಿನಗಳಿಂದ ಪೊಲೀಸರು ಅನಂತಪುರ, ಚಿತ್ತೂರು, ಧರ್ಮವರಂ, ಪೆನುಕೊಂಡ ಸುತ್ತಮುತ್ತಲ ಹಳ್ಳಿಗಳಲ್ಲಿ ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ. (ಹಂತಕನ ತಲೆಗೆ ಆಂಧ್ರದಲ್ಲೂ ಬಹುಮಾನ)
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications