ಆಸ್ಪತ್ರೆಯಿಂದ ಮನೆ ಸೇರಿದ ಜ್ಯೋತಿ ಉದಯ್
ಬೆಂಗಳೂರು, ಡಿ.21: ನಗರ ಜೆ.ಸಿ.ರಸ್ತೆಯ ಕಾರ್ಪೊರೇಷನ್ ಬ್ಯಾಂಕ್ ಎಟಿಎಂ ಕೇಂದ್ರದಲ್ಲಿ ಹಲ್ಲೆಗೊಳಗಾಗಿದ್ದ ಜ್ಯೋತಿ ಉದಯ್ ಅವರು ಶನಿವಾರ ಬಿಜಿಎಸ್ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮನೆ ಸೇರಿದ್ದಾರೆ. ಆಸ್ಪತ್ರೆಯಿಂದ ಮನೆ ಸೇರುವ ಮುನ್ನ ಸುದ್ದಿಗಾರರೊಂದಿಗೆ ಹಲ್ಲೆ ಹಾಗೂ ನಂತರದ ಸಾವು ಬದುಕಿನ ನಡುವಿನ ಹೋರಾಟದ ಬಗ್ಗೆ ವಿವರಿಸಿದರು. ಮನೆ ತಲುಪಿದ ಮೇಲೆ ಮಗಳ ಮೂರನೇ ಹುಟ್ಟುಹಬ್ಬ ಆಚರಣೆ ಮಾಡುವ ಇಚ್ಛೆಯನ್ನು ವ್ಯಕ್ತಪಡಿಸಿದರು.
'ನಾನು ಎಂದಿನಂತೆ ಎಟಿಎಂ ನಿಂದ ಹಣ ತೆಗೆಯುತ್ತಿದ್ದೆ. ಆ ವೇಳೆಗೆ ಬಂದ ಅಪರಿಚಿತನೊಬ್ಬ ಹಣ ಕೊಡು ಎಂದು ಒತ್ತಾಯಿಸಿದ . ನಾನು ನಿರಾಕರಿಸಿ, ಕಿರುಚಲು ಯತ್ನಿಸಿದಾಗ ಅವನ ಕೈಯಿಂದ ನನ್ನ ಬಾಯಿಯನ್ನು ಮುಚ್ಚಿದ. ಗನ್ ಹಿಡಿದು ಹೆದರಿಸಿದಾಗ ನಾನು ಹೆದರಲಿಲ್ಲ. ಆದರೆ, ಬಳಿಕ ಅವನು ಬ್ಯಾಗ್ ನಿಂದ ಮಾರಕಸ್ತ್ರ ತೆಗೆದು ನನಗೆ ಬಡಿದ ಅನಂತರ ಏನಾಯಿತೆಂದು ನನಗೆ ತಿಳಿದಿಲ್ಲ' ಎಂದು ಗೋಷ್ಠಿಯಲ್ಲಿ ಕಣ್ಣಿರಿಟ್ಟರು.
ಆಸ್ಪತ್ರೆಯ ಉಪಾಧ್ಯಕ್ಷ ಡಾ.ವೆಂಕಟರಮಣ ಅವರು ಮಾತನಾಡಿ, 'ಜ್ಯೋತಿ ಉದಯ್ ಅವರು ಈಗ ಸಂಪೂರ್ಣ ಗುಣಮುಖರಾಗಿದ್ದಾರೆ. ಜನವರಿ 15ರ ನಂತರ ಅವರು ನಡೆದಾಡುವ ಸ್ಥಿತಿಗೆ ಬರಲಿದ್ದಾರೆ. ಜ್ಯೋತಿ ಅವರಿಗೆ ಫಿಸಿಯೋಥೆರಪಿ ಮಾಡಲಾಗಿದ್ದು, ಮತ್ತೊಮ್ಮೆ ಫಿಸಿಯೋಥೆರಪಿಗಾಗಿ ಅವರು ಆಸ್ಪತ್ರೆಗೆ ಭೇಟಿ ನೀಡಬೇಕಾಗುತ್ತದೆ' ಎಂದು ತಿಳಿಸಿದರು.

ಸುಮಾರು 2 ಅಥವಾ ಮೂರು ತಿಂಗಳ ಬಳಿಕ ಅವರು ತಮ್ಮ ಕೆಲಸಕ್ಕೆ ಮರಳಬಹುದು. ಆದರೆ, ದಿನಕ್ಕೆ ಎರಡರಿಂದ ಮೂರು ಗಂಟೆಗಳ ಕಾಲ ಮಾತ್ರ ಕಾರ್ಯ ನಿರ್ವಹಿಸಬಹುದಾಗಿದೆ ಎಂದು ಡಾ.ವೆಂಕಟರಮಣ ಹೇಳಿದರು.
ಎಟಿಎಂ ಕೇಂದ್ರಕ್ಕೆ ನ.19 ರಂದು ಬೆಳಗ್ಗೆ 7.15 ರ ಸುಮಾರಿಗೆ ಹಣ ಡ್ರಾ ಮಾಡಲು ಬಂದ ಕಾರ್ಪೊರೇಷನ್ ಬ್ಯಾಂಕ್ ನ ವ್ಯವಸ್ಥಾಪಕಿ ಜ್ಯೋತಿ ಉದಯ್ ಅವರ ಮೇಲೆ ಹಲ್ಲೆ ನಡೆದಿತ್ತು. ಕೆಂಗೇರಿ ಬಳಿ ಇರುವ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇನ್ನೂ ಕೆಲ ದಿನಗಳ ಕಾಲ ವಿಶ್ರಾಂತಿ ತೆಗೆದುಕೊಳ್ಳುವ ಅಗತ್ಯವಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಘಟನೆ ನಡೆದು ಸುಮಾರು ಒಂದು ತಿಂಗಳು ಕಳೆದಿದ್ದರೂ, ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ಆರೋಪಿಯ ಭಾವಚಿತ್ರ ಹೊರತುಪಡಿಸಿ ಆತನ ಬಗ್ಗೆ ಯಾವುದೇ ಮಾಹಿತಿ ಪೊಲೀಸರಿಗೆ ಲಭ್ಯವಾಗಿಲ್ಲ. ಹಿಂದೂಪುರದಲ್ಲಿ ಜ್ಯೋತಿ ಅವರ ಮೊಬೈಲ್ ಅನ್ನು ಮಾರಾಟ ಮಾಡಿ ಅಲ್ಲಿಂದ ಕಾಲ್ಕಿತ್ತ ನಂತರ ಆತನ ಯಾವುದೇ ಸುಳಿವು ಪೊಲೀಸರಿಗೆ ಲಭ್ಯವಾಗಿಲ್ಲ. ಈ ಮುಂಚೆ 1 ಲಕ್ಷ ರುಪಾಯಿ ಬಹುಮಾನ ಘೋಷಿಸಿದ್ದ ಪೊಲೀಸರು, ಇದೀಗ ಅದನ್ನು 5 ಲಕ್ಷ ರುಪಾಯಿಗೆ ಏರಿಸಲಾಗಿದೆ.
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications