ಬೆಂಗಳೂರು ಎಟಿಎಂ ಹಂತಕನ ವಿವರಗಳು ಲಭ್ಯ
ಬೆಂಗಳೂರು, ಡಿ.4 : ನ.19ರಂದು ಬೆಂಗಳೂರಿನ ಎಟಿಎಂ ಕೇಂದ್ರದಲ್ಲಿ ಜ್ಯೋತಿ ಉದಯ್ ಮೇಲೆ ಹಲ್ಲೆ ಮಾಡಿದ ಆರೋಪಿಯ ವಿವರಗಳನ್ನು ಪೊಲೀಸರ ಕಲೆಹಾಕಿದ್ದಾರೆ. ಪೊಲೀಸರ ಶಂಕೆ ನಿಜವಾಗಿದ್ದು, ಆರೋಪಿಯ ಮೂಲ ಆಂಧ್ರಪ್ರದೇಶವಾಗಿದೆ. ತನ್ನ ಸ್ವಗ್ರಾಮ ಚರಮಲ ವಾಂಡ್ಲದಲ್ಲಿಯೇ 2008ರಲ್ಲಿ ಮಹಿಳೆಯೊಬ್ಬಳನ್ನು ಕೊಲೆ ಮಾಡಿದ ಆರೋಪವೂ ಇವನ ಮೇಲಿದೆ.
ಜ್ಯೋತಿ ಉದಯ್ ಮೇಲಿನ ಹಲ್ಲೆ ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿರುವ ಬೆಂಗಳೂರು ಪೊಲೀಸರು ಆರೋಪಿಯ ವಿವರ ಪತ್ತೆ ಹಚ್ಚಿದ್ದಾರೆ. ಆರೋಪಿ ಹೆಸರು ನಾರಾಯಣ ರೆಡ್ಡಿ ಎಂಬ ಮಾಹಿತಿ ಲಭ್ಯವಾಗಿದೆ. ಚರಮಲ ವಾಂಡ್ಲದಲ್ಲಿ ಆರೋಪಿ ವಾಸವಾಗಿದ್ದ ಮತ್ತು ಅಲ್ಲಿ 2008ರಲ್ಲಿ ಮಹಿಳೆಯನ್ನು ಕೊಲೆ ಮಾಡಿದ ನಂತರ ಗ್ರಾಮಕ್ಕೆ ಆಗಮಿಸಿರಲಿಲ್ಲ ಎಂದು ತಿಳಿದುಬಂದಿದೆ.

ಆರೋಪಿ ವಿವರಗಳು : ಎಟಿಎಂ ಹಲ್ಲೆ ಪ್ರಕರಣದ ಆರೋಪಿ ನಾರಾಯಣ ರೆಡ್ಡಿ ಮೂಲತಃ ಆಂಧ್ರಪ್ರದೇಶದ ಕದರಿಯ ಚರಮಲ ವಾಂಡ್ಲ ಗ್ರಾಮಕ್ಕೆ ಸೇರಿದವನು. ತಂದೆ-ತಾಯಿಗಳನ್ನು ಕಳೆದುಕೊಂಡಿದ್ದ ಈತ ಏಕಾಂಗಿಯಾಗಿ ವಾಸಿಸುತ್ತಿದ್ದ. ತಂದೆ-ತಾಯಿ ಮರಣದ ನಂತೆ ಮಾನಸಿಕ ಅಸ್ವಸ್ಥನಂತೆ ವರ್ತಿಸುತ್ತಿದ್ದ ಎಂದು ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. (ಎಟಿಎಂ ಪ್ರಕರಣ : ಪಾತಕಿ ಆಂಧ್ರದಲ್ಲೂ ಕೊಲೆ ಮಾಡಿದ್ದ)
2008ರಲ್ಲಿ ಆರೋಪಿ ನಾರಾಯಣ ರೆಡ್ಡಿ ಸ್ವ ಗ್ರಾಮ ಚರಮಲ ವಾಂಡ್ಲದಲ್ಲಿ ಕ್ಲುಲ್ಲಕ ಕಾರಣಕ್ಕೆ ಮಹಿಳೆಯೊಬ್ಬಳನ್ನು ಹತ್ಯೆ ಮಾಡಿದ್ದ, ನಂತರ ಗ್ರಾಮದಲ್ಲಿ ಕಾಣಿಸಿಕೊಂಡಿಲ್ಲ ಎಂದು ಗ್ರಾಮಸ್ಥರು ಪೊಲೀಸರಿಗೆ ನೀಡಿರುವ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಆರೋಪಿಯ ಮೂಲ ಆಂಧ್ರಪ್ರದೇಶವಿರಬಹುದು ಎಂದು ಪೊಲೀಸರು ಮೊದಲು ಶಂಕೆ ವ್ಯಕ್ತಪಡಿಸಿದ್ದರು. ಸದ್ಯ ಅದು ನಿಜವಾಗಿದ್ದು, ಆತನಿಗಾಗಿ ಹುಡುಕಾಟ ಆರಂಭಿಸಿದ್ದಾರೆ. (ಎಟಿಎಂ ಹಲ್ಲೆ : ಆರೋಪಿ ಮೂಲ ಆಂಧ್ರಪ್ರದೇಶ)
ಪೊಲೀಸರಿಗೆ ಇಷ್ಟು ಮಾಹಿತಿ ದೊರಕಿರುವುದು ಅವರ ತನಿಖೆಗೆ ಬಹಳ ಸಹಕಾರಿಯಾಗಿದೆ. ಸದ್ಯ ಆಂಧ್ರಪ್ರದೇಶ ಪೊಲೀಸರ ಸಹಕಾರದೊಂದಿಗೆ ಆರೋಪಿಗಾಗಿ ಪೊಲೀಸರು ಹುಡುಕಾಟ ಮುಂದುವರೆಸಿದ್ದಾರೆ. ಇತ್ತ ಹಲ್ಲೆಗೊಳಗಾದ ಜ್ಯೋತಿ ಉದಯ್ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications