8 ದಿನಗಳ ಪೊಲೀಸ್ ಕಸ್ಟಡಿಗೆ ಎಟಿಎಂ ಹಲ್ಲೆಕೋರ ಮಧುಕರ್ ರೆಡ್ಡಿ
2013 ನವೆಂಬರ್ ನಲ್ಲಿ ಬ್ಯಾಂಕ್ ಉದ್ಯೋಗಿ ಜ್ಯೋತಿ ಉದಯ್ ಮೇಲೆ ಹಲ್ಲೆ ನಡೆಸಿದ್ದ ಮಧುಕರ್ ರೆಡ್ಡಿಯನ್ನು 8 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.
ಬೆಂಗಳೂರು, ಮಾರ್ಚ್ 7: 2013 ನವೆಂಬರ್ ನಲ್ಲಿ ಬ್ಯಾಂಕ್ ಉದ್ಯೋಗಿ ಜ್ಯೋತಿ ಉದಯ್ ಮೇಲೆ ಹಲ್ಲೆ ನಡೆಸಿದ್ದ ಮಧುಕರ್ ರೆಡ್ಡಿಯನ್ನು 8 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.
ಸೋಮವಾರವಷ್ಟೆ ಮಧುಕರ್ ರೆಡ್ಡಿಯನ್ನು ಕಡಪದಿಂದ ಬೆಂಗಳೂರಿಗೆ ಕರೆತರಲಾಗಿತ್ತು. ಇಂದು ರೆಡ್ಡಿಯನ್ನು ಬೆಂಗಳೂರಿನ ಆರನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಧೀಶ ಎ ರಾಘವೇಂದ್ರ ಮಧುಕರ್ ರೆಡ್ಡಿಯನ್ನು ಮಾರ್ಚ್ 14ರ ವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶ ನೀಡಿದರು.[ಎಟಿಎಂ ಹಲ್ಲೆ ಪ್ರಕರಣದ ಆರೋಪಿ ಮಧುಕರ್ ರೆಡ್ಡಿ ಬೆಂಗಳೂರಿಗೆ]

ಪೊಲೀಸರು ಮಧುಕರ್ ರೆಡ್ಡಿಯನ್ನು 14 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸುವಂತೆ ಕೇಳಿಕೊಂಡಿದ್ದರು. ಆದರೆ ನ್ಯಾಯಾಧೀಶರು 8 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶ ನೀಡಿದ್ದಾರೆ.
2013ರ ನವೆಂಬರಿನಲ್ಲಿ ಬೆಂಗಳೂರಿನಲ್ಲಿ ಎಟಿಎಂಗೆ ನುಗ್ಗಿ ಬ್ಯಾಂಕ್ ಉದ್ಯೋಗಿ ಜ್ಯೋತಿ ಉದಯ್ ಎಂಬುವರ ಮೇಲೆ ಮಧುಕರ್ ರೆಡ್ಡಿ ಹಲ್ಲೆ ಮಾಡಿ ಪರಾರಿಯಾಗಿದ್ದ. ಈತನನ್ನು ಫೆಬ್ರವರಿಯಲ್ಲಿ ಆಂಧ್ರಪ್ರದೇಶದ ಮದನಪಲ್ಲಿ ಪೊಲೀಸರು ಬಂಧಿಸಿದ್ದರು.[ಎಟಿಎಂನಲ್ಲಿ ಜ್ಯೋತಿ ಮೇಲೆ ಹಲ್ಲೆ ಮಾಡಿದ್ದ ವ್ಯಕ್ತಿಯ ಬಂಧನ]
ಇದೀಗ ಆರೋಪಿ ಬೆಂಗಳೂರಿನ ಹಲಸೂರು ಪೊಲೀಸರ ವಶದಲ್ಲಿದ್ದಾನೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸುವ ಮೊದಲು ಸೋಮವಾರ ಪೊಲೀಸರು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ಮಾಡಿಸಿದ್ದರು.












Click it and Unblock the Notifications