8 ದಿನಗಳ ಪೊಲೀಸ್ ಕಸ್ಟಡಿಗೆ ಎಟಿಎಂ ಹಲ್ಲೆಕೋರ ಮಧುಕರ್ ರೆಡ್ಡಿ
2013 ನವೆಂಬರ್ ನಲ್ಲಿ ಬ್ಯಾಂಕ್ ಉದ್ಯೋಗಿ ಜ್ಯೋತಿ ಉದಯ್ ಮೇಲೆ ಹಲ್ಲೆ ನಡೆಸಿದ್ದ ಮಧುಕರ್ ರೆಡ್ಡಿಯನ್ನು 8 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.
ಬೆಂಗಳೂರು, ಮಾರ್ಚ್ 7: 2013 ನವೆಂಬರ್ ನಲ್ಲಿ ಬ್ಯಾಂಕ್ ಉದ್ಯೋಗಿ ಜ್ಯೋತಿ ಉದಯ್ ಮೇಲೆ ಹಲ್ಲೆ ನಡೆಸಿದ್ದ ಮಧುಕರ್ ರೆಡ್ಡಿಯನ್ನು 8 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.
ಸೋಮವಾರವಷ್ಟೆ ಮಧುಕರ್ ರೆಡ್ಡಿಯನ್ನು ಕಡಪದಿಂದ ಬೆಂಗಳೂರಿಗೆ ಕರೆತರಲಾಗಿತ್ತು. ಇಂದು ರೆಡ್ಡಿಯನ್ನು ಬೆಂಗಳೂರಿನ ಆರನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಧೀಶ ಎ ರಾಘವೇಂದ್ರ ಮಧುಕರ್ ರೆಡ್ಡಿಯನ್ನು ಮಾರ್ಚ್ 14ರ ವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶ ನೀಡಿದರು.[ಎಟಿಎಂ ಹಲ್ಲೆ ಪ್ರಕರಣದ ಆರೋಪಿ ಮಧುಕರ್ ರೆಡ್ಡಿ ಬೆಂಗಳೂರಿಗೆ]

ಪೊಲೀಸರು ಮಧುಕರ್ ರೆಡ್ಡಿಯನ್ನು 14 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸುವಂತೆ ಕೇಳಿಕೊಂಡಿದ್ದರು. ಆದರೆ ನ್ಯಾಯಾಧೀಶರು 8 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶ ನೀಡಿದ್ದಾರೆ.
2013ರ ನವೆಂಬರಿನಲ್ಲಿ ಬೆಂಗಳೂರಿನಲ್ಲಿ ಎಟಿಎಂಗೆ ನುಗ್ಗಿ ಬ್ಯಾಂಕ್ ಉದ್ಯೋಗಿ ಜ್ಯೋತಿ ಉದಯ್ ಎಂಬುವರ ಮೇಲೆ ಮಧುಕರ್ ರೆಡ್ಡಿ ಹಲ್ಲೆ ಮಾಡಿ ಪರಾರಿಯಾಗಿದ್ದ. ಈತನನ್ನು ಫೆಬ್ರವರಿಯಲ್ಲಿ ಆಂಧ್ರಪ್ರದೇಶದ ಮದನಪಲ್ಲಿ ಪೊಲೀಸರು ಬಂಧಿಸಿದ್ದರು.[ಎಟಿಎಂನಲ್ಲಿ ಜ್ಯೋತಿ ಮೇಲೆ ಹಲ್ಲೆ ಮಾಡಿದ್ದ ವ್ಯಕ್ತಿಯ ಬಂಧನ]
ಇದೀಗ ಆರೋಪಿ ಬೆಂಗಳೂರಿನ ಹಲಸೂರು ಪೊಲೀಸರ ವಶದಲ್ಲಿದ್ದಾನೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸುವ ಮೊದಲು ಸೋಮವಾರ ಪೊಲೀಸರು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ಮಾಡಿಸಿದ್ದರು.
-
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು











Click it and Unblock the Notifications