Get Updates
Get notified of breaking news, exclusive insights, and must-see stories!

8 ದಿನಗಳ ಪೊಲೀಸ್ ಕಸ್ಟಡಿಗೆ ಎಟಿಎಂ ಹಲ್ಲೆಕೋರ ಮಧುಕರ್ ರೆಡ್ಡಿ

2013 ನವೆಂಬರ್ ನಲ್ಲಿ ಬ್ಯಾಂಕ್‌ ಉದ್ಯೋಗಿ ಜ್ಯೋತಿ ಉದಯ್‌ ಮೇಲೆ ಹಲ್ಲೆ ನಡೆಸಿದ್ದ ಮಧುಕರ್ ರೆಡ್ಡಿಯನ್ನು 8 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.

ಬೆಂಗಳೂರು, ಮಾರ್ಚ್ 7: 2013 ನವೆಂಬರ್ ನಲ್ಲಿ ಬ್ಯಾಂಕ್‌ ಉದ್ಯೋಗಿ ಜ್ಯೋತಿ ಉದಯ್‌ ಮೇಲೆ ಹಲ್ಲೆ ನಡೆಸಿದ್ದ ಮಧುಕರ್ ರೆಡ್ಡಿಯನ್ನು 8 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.

ಸೋಮವಾರವಷ್ಟೆ ಮಧುಕರ್ ರೆಡ್ಡಿಯನ್ನು ಕಡಪದಿಂದ ಬೆಂಗಳೂರಿಗೆ ಕರೆತರಲಾಗಿತ್ತು. ಇಂದು ರೆಡ್ಡಿಯನ್ನು ಬೆಂಗಳೂರಿನ ಆರನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಧೀಶ ಎ ರಾಘವೇಂದ್ರ ಮಧುಕರ್ ರೆಡ್ಡಿಯನ್ನು ಮಾರ್ಚ್ 14ರ ವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶ ನೀಡಿದರು.[ಎಟಿಎಂ ಹಲ್ಲೆ ಪ್ರಕರಣದ ಆರೋಪಿ ಮಧುಕರ್ ರೆಡ್ಡಿ ಬೆಂಗಳೂರಿಗೆ]

ATM attacker Madhukar Reddy sent to 8 days police custody for further inquiry

ಪೊಲೀಸರು ಮಧುಕರ್ ರೆಡ್ಡಿಯನ್ನು 14 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸುವಂತೆ ಕೇಳಿಕೊಂಡಿದ್ದರು. ಆದರೆ ನ್ಯಾಯಾಧೀಶರು 8 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶ ನೀಡಿದ್ದಾರೆ.

2013ರ ನವೆಂಬರಿನಲ್ಲಿ ಬೆಂಗಳೂರಿನಲ್ಲಿ ಎಟಿಎಂಗೆ ನುಗ್ಗಿ ಬ್ಯಾಂಕ್‌ ಉದ್ಯೋಗಿ ಜ್ಯೋತಿ ಉದಯ್‌ ಎಂಬುವರ ಮೇಲೆ ಮಧುಕರ್ ರೆಡ್ಡಿ ಹಲ್ಲೆ ಮಾಡಿ ಪರಾರಿಯಾಗಿದ್ದ. ಈತನನ್ನು ಫೆಬ್ರವರಿಯಲ್ಲಿ ಆಂಧ್ರಪ್ರದೇಶದ ಮದನಪಲ್ಲಿ ಪೊಲೀಸರು ಬಂಧಿಸಿದ್ದರು.[ಎಟಿಎಂನಲ್ಲಿ ಜ್ಯೋತಿ ಮೇಲೆ ಹಲ್ಲೆ ಮಾಡಿದ್ದ ವ್ಯಕ್ತಿಯ ಬಂಧನ]

ಇದೀಗ ಆರೋಪಿ ಬೆಂಗಳೂರಿನ ಹಲಸೂರು ಪೊಲೀಸರ ವಶದಲ್ಲಿದ್ದಾನೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸುವ ಮೊದಲು ಸೋಮವಾರ ಪೊಲೀಸರು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ ಮಾಡಿಸಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+