ಟಿಕಾಯತ್ ಮೇಲೆ ಹಲ್ಲೆ, ರಾಜ್ಯಾದ್ಯಂತ ಪ್ರತಿಭಟನೆ: ಚುಕ್ಕಿ ನಂಜುಂಡಸ್ವಾಮಿ
ಬೆಂಗಳೂರು, ಮೇ 30: ಬೆಂಗಳೂರಿನ ಗಾಂಧಿ ಭವನದಲ್ಲಿ''ರೈತ ಚಳುವಳಿ ಆತ್ಮಾವಲೋಕನ ಮತ್ತು ಸ್ವಸ್ಟೀಕರಣ ಸಭೆ''ಯ ನಂತರ ನಡೆಯತ್ತಿದ್ದ ಪತ್ರಿಕಾ ಗೋಷ್ಠಿಯಲ್ಲಿ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡುತ್ತಿದ್ದ ರಾಕೇಶ್ ಟಿಕಾಯತ್ ಅವರ ಮೇಲೆ ಪತ್ರಕರ್ತರ ಸೋಗಿನಲ್ಲಿ ಕುಳಿತಿದ್ದ ಒಂದಿಬ್ಬರು ಏಕಾ ಏಕಿ ಮಸಿ ತೂರಿ ಹಲ್ಲೆ ನಡೆಸಲು ಮುಂದಾದರು. ನಂತರ ಪ್ರೇಕ್ಷಕರ ಗ್ಯಾಲರಿಯಲ್ಲಿದ್ದ ರೈತ ಸಂಘಟನೆಯ ಕಾರ್ಯಕರ್ತರ ಮೇಲೂ ಹಲ್ಲೆ ನಡೆಸಿದರು. ದಿಢೀರ್ ಉದ್ಭವವಾದ ಈ ಅಸಹಜ ಘಟನೆಯಿಂದ ರಾಷ್ಟ್ರೀಯ ರೈತ ಮುಖಂಡರು ಸೇರಿದಂತೆ ನೆರೆದಿದ್ದ ಎಲ್ಲರೂ ದಿಗ್ಪ್ರಮೆಗೊಳಗಾದರು.
ಹೀಗೆ ಹಲ್ಲೆಮಾಡಿದ ಅಪರಿಚಿತ ವ್ಯಕ್ತಿಗಳು "ಮೋದಿ ಮೋದಿ" ಎಂದು ಕೂಗುತ್ತಿದ್ದದ್ದು ಏನೂ ಅರ್ಥವಾಗದ ಸ್ಥಿತಿ ನಿರ್ಮಿಸಿತ್ತು. ದಿಲ್ಲಿ ರೈತ ಚಳುವಳಿಯನ್ನು ಮೊಟಕುಗೊಳಿಸಲು ಅನೇಕ ಪ್ರಯತ್ನಗಳನ್ನು ಸರ್ಕಾರ ಮಾಡಿತ್ತಾದರೂ ಅಲ್ಲಿ ಮೂರ್ನಾಕು ರಾಜ್ಯಗಳಲ್ಲಿ ನಡೆದ ರೈತ ಮಹಾ ಪಂಚಾಯತ್ಗಳಲ್ಲಿ ಇಂಥ ಕ್ಷುಲ್ಲಕ ಘಟನೆಗಳು ನಡೆದಿರಲಿಲ್ಲ. ಇಷ್ಟಾಗಿಯೂ ದಿಲ್ಲಿ ಹೋರಾಟದ ಫಲವಾಗಿ ಸರ್ಕಾರ ಮೂರು ಕೃಷಿ ಕಾಯ್ದೆಗಳನ್ನು ಹಿಂಪಡೆದದ್ದು ಆಯಿತು. ಇನ್ನು ಕೆಲವು ಬೇಡಿಕೆಗಳನ್ನು ಈಡೇರಿಸುವುದಾಗಿ ಮಾತು ಕೊಟ್ಟಿದ್ದು ಆಯಿತು. (ಬೇಡಿಕೆಗಳನ್ನು ಈಡೇರಿಸುತ್ತಾರೋ ಬಿಡುತ್ತಾರೋ ಅದು ಬೇರೆಯದೇ ಮಾತು.) ಆದರೆ ಈಗ ದಿಲ್ಲಿ ಚಳವಳಿ ಮುಂಚೂಣಿಯಲ್ಲಿದ್ದ ರೈತ ನಾಯಕ ರಾಕೇಶ್ ಟಿಕಾಯತ್ ಅವರ ಮೇಲೆ ಹಲ್ಲೆ ನಡೆಸಿರುವುದು ಅದೂ ಬೆಂಗಳೂರಿನಲ್ಲಿ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ಈ ಹಲ್ಲೆ ನಡೆಸಿದವರು ಯಾರು? ಅವರ ಉದ್ದೇಶವೇನು? ಅವರ ಹಿನ್ನೆಲೆ ಏನು? ಎಂಬುದು ಇನ್ನಷ್ಟೇ ತಿಳಿಯಬೇಕಿದೆ.

ಇಷ್ಟಕ್ಕೂ ಇಂದು ಗಾಂಧೀ ಭವನದಲ್ಲಿ ನಡೆದ ಸಭೆ ಹಾಗೂ ಪತ್ರಿಕಾ ಗೋಷ್ಠಿ ಇತ್ತೀಚೆಗೆ ಖಾಸಗಿ ಸುದ್ದಿವಾಹಿನಿಯಲ್ಲಿ ಪ್ರಸಾರವಾಗಿದ್ದ ಕೋಡಿಹಳ್ಳಿ ಚಂದ್ರಶೇಖರ್ ಅವರ ವಿರುದ್ಧ ಬಂದಿದ್ದ ಆರೋಪದ ಹಿನ್ನಲೆಯಲ್ಲಿ.
ದಿಲ್ಲಿಯ ಐತಿಹಾಸಿಕ ರೈತ ಚಳುವಳಿಯನ್ನು ಮುರಿಯಲು ಸಂಚು ರೂಪಿಸುವ ಹಾಗೆ ಮಾತುಗಳು ಆ ವಿಡಿಯೋ ತುಣುಕಿನಲ್ಲಿ ಕೇಳಿದ್ದು ಸ್ಪಷ್ಟ. ಅದರಲ್ಲಿ ರಾಷ್ಟ್ರೀಯ ಮುಖಂಡರಾದ ಯುದುವೀರ ಸಿಂಗ್, ರಾಕೇಶ್ ಟಿಕಾಯತ್ ಹಾಗೂ ಕವಿತಾ ಕುರುಗಂಟಿ ಅವರ ಹೆಸರುಗಳೂ ಪ್ರಸ್ತಾಪವಾಗಿದ್ದವು. ಈ ಹಿನ್ನೆಲೆಯಲ್ಲಿ ಈ ಮೂರು ಮಂದಿ ಹಾಗೂ ಇನ್ನಿತರ ರೈತ ಮುಖಂಡರು ಸ್ವಷ್ಟೀಕರಣ ನೀಡಲು ಪತ್ರಿಕಾ ಗೋಷ್ಠಿ ಕರೆಯಲಾಗಿತ್ತು.
ವಿಷಯ ಹೀಗಿರುವಾಗ, ರೈತ ಸಂಘಟನೆಗಳ ನಡುವೆಯೇ ಇರುವ ಸಮಸ್ಯೆಗಳ ಕುರಿತು ಪತ್ರಿಕಾ ಗೋಷ್ಠಿ ನಡೆಯುತ್ತಿರುವಾಗ "ಮೋದಿ ಮೋದಿ ಎಂದು ಯಾರೋ ಅಪರಿಚಿತ ಕಿಡಿಗೇಡಿಗಳು ಗೋಷ್ಠಿಯನ್ನು ಅಡ್ಡಿಪಡಿಸಿ ಟಿಕಾಯತ್ ಅವರ ಮೇಲೆ ಮಸಿ ಎರಿಚಿದ್ದು ಅತ್ಯಂತ ಸೋಜಿಗವೂ, ದಿಗ್ಪ್ರಮೆ ಮೂಡಿಸುವ ಸನ್ನಿವೇಶವೂ ಆಗಿರುವುದು ಇಡೀ ನಾಡು ಆತಂಕ ಪಡುವ ವಿಷಯವಾಗಿದೆ.

ಇದೀಗ ಕಿಡಿಗೇಡಿಗಳು ಪೊಲೀಸರ ವಶದಲ್ಲಿರುವುದು ತಿಳಿದು ಬಂದಿದೆ. ಕೂಡಲೆ ಅವರ ಉದ್ದೇಶ ಹಾಗೂ ಅವರಿಂದೆ ಇರುವ ಶಕ್ತಿಗಳ ಬಗ್ಗೆ ಪೊಲೀಸರು ತಿಳಿದುಕೊಂಡು ಸಾರ್ವಜನಿಕರಿಗೆ ತಿಳಿಸಬೇಕು ಎಂಬುದು ರೈತ ಹೋರಾಟಗಾರರ ಒತ್ತಾಯವಾಗಿದೆ. ಅಂತೆಯೇ ನಾಳೆ ಎಲ್ಲಾ ತಾಲ್ಲೂಕು ಜಿಲ್ಲಾ ಕೇಂದ್ರಗಳಲ್ಲಿ ಕಪ್ಪು ಪಟ್ಟಿ ಧರಿಸಿ ಕಿಡಿಗೇಡಿಗಳು ಮಾಡಿದ ಕೃತ್ಯವನ್ನು ಖಂಡಿಸುವ ಪ್ರತಿಭಟನಾ ಸಭೆ ಹಾಗೂ ಮೆರವಣಿಗೆಗಳು ನಡೆಯಲಿವೆ ಎಂದು ರೈತ ಮುಖಂಡರಾದ ಚುಕ್ಕಿ ನಂಜುಂಡಸ್ವಾಮಿ ಕರೆ ನೀಡಿದ್ದಾರೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ










Click it and Unblock the Notifications