ಬೆಂಗಳೂರಲ್ಲಿ ಎಎಸ್ಐ ಮೇಲೆ ಕಾರು ಹರಿಸಿ ಕೊಲೆಗೆ ಯತ್ನ
ಬೆಂಗಳೂರು, ಡಿಸೆಂಬರ್ 13: ವಂಚನೆ ಪ್ರಕರಣವೊಂದರಲ್ಲಿ ಬಂಧಿಸಲು ತೆರಳಿದ್ದ ಎಎಸ್ಐ ಮೇಲೆ ದುಷ್ಕರ್ಮಿಗಳು ಕಾರು ಹರಿಸಿರುವ ಘಟನೆ ಅರಮನೆ ರಸ್ತೆಯ ಪ್ರತಿಷ್ಠಿತ ಹೋಟೆಲ್ನ ಆವರಣವೊಂದರಲ್ಲಿ ನಡೆದಿದೆ.
ಕಬ್ಬನ್ ಪಾರ್ಕ್ ಠಾಣೆ ಸಬ್ ಇನ್ಸ್ಪೆಕ್ಟರ್ ಹನುಮಂತರಾಜು(50) ಅವರ ತಲೆ, ಎಡಗಣ್ಣು ಹಾಗೂ ಎಡಗಾಲಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ.
ಪ್ರಕರಣದ ಸಂಬಂಧ ಕೇರಳ ಮೂಲದ ಎಂ. ಶರೂನ್, ರಿಬಿನ್ ಹಾಗೂ ಸೈಯದ್ ಅಹಮದ್ನನ್ನು ಬಂಧಿಸಲಾಗಿದೆ.
ಇತ್ತೀಚೆಗೆ ಮಹಿಳೆಗೆ ಸಾಲ ಕೊಡಿಸುವುದಾಗಿ ನಂಬಿಸಿ 3 ಲಕ್ಷ ರೂ. ಪಡೆದು ಆರೋಪಿಗಳು ವಂಚಿಸಿದ್ದರು. ಈ ಪ್ರಕರಣದ ತನಿಖೆ ನಡೆಸುತ್ತಿದ್ದ ಕಬ್ಬನ್ ಪಾರ್ಕ್ ಪೊಲೀಸರಿಗೆ ಅರಮನೆ ರಸ್ತೆಯಲ್ಲಿರುವ ಹೋಟೆಲ್ ಒಂದಕ್ಕೆ ಅರವಿಂದ್ ತಂಡ ಬರುವ ಕುರಿತು ಮಾಹಿತಿ ದೊರೆತಿತ್ತು. ಅವರನ್ನು ಬಂಧಿಸಲು ತೆರಳಿದ್ದಾಗ ಕೊಲೆ ಯತ್ನ ನಡೆದಿದೆ.

ಕೇರಳ ಮೂಲದ ಸುಮಾ ಎಂಬುವವರು ಸ್ನೇಹಿತೆ ಮೊಬೈಲ್ಗೆ ಅಪರಿಚಿತ ಸಂಖ್ಯೆಯಿಂದ ಕಡಿಮೆ ಬಡ್ಡಿದರದಲ್ಲಿ ಸಾಲ ಕೊಡಿಸುವುದಾಗಿ ಸಂದೇಶ ಬಂದಿತ್ತು. ಆಗ ಸಾಲಕ್ಕಾಗಿ ಸುಮಾ ಅವರು, ತಕ್ಷಣವೇ ಸ್ನೇಹಿತೆ ಪರವಾಗಿ ಸಂದೇಶ ಕಳುಹಿಸಿದ್ದ ನಂಬರ್ಗೆ ಕರೆ ಮಾಡಿದ್ದರು.
ಕರೆ ಸ್ವೀಕರಿಸಿದ ಅರವಿಂದ್ ನಿಮಗೆ 25 ಲಕ್ಷ ರೂ. ಸಾಲ ಕೊಡಿಸುತ್ತೇನೆ, ಇದಕ್ಕೆ ಪ್ರತಿಯಾಗಿ 1.87 ಲಕ್ಷ ಕಮಿಷನ್ ಕೊಡಬೇಕೆಂದು ಹೇಳಿದ್ದರು.
ಈ ಮಾತಿನಿಂದ ಖುಷಿಯಾಗಿದ್ದ ಸುಮಾ 50ಲಕ್ಷ ರೂ ಸಾಲ ಕೊಡುವಂತೆ ಕೇಳಿದ್ದರು. ಮತ್ತೊಂದು ದಿನ ಕರೆ ಮಾಡಿ ಸಾಲ ಮಂಜೂರಾಗಿದೆ ಬೆಂಗಳೂರಿಗೆ ಬಂದು ತೆಗೆದುಕೊಳ್ಳುವಂತೆ ತಿಳಿಸಿದ್ದ, ಅಂತೆಯೇ ಆಕೆ ಬೆಂಗಳೂರಿಗೆ ಬಂದು ಅವರನ್ನು ಭೇಟಿಯಾಗಿದ್ದರು. ಛಾಪಾ ಕಾಗದ ಶುಲ್ಕವೆಂದು ಮೂರು ಲಕ್ಷ ರೂ ಪಡೆದು ಆರವಿಂದ್ ತಂಡ ಪರಾರಿಯಾಗಿತ್ತು.
ಈ ಬಗ್ಗೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಅವರನ್ನು ಹಿಡಿಯಲು ಹೋಟೆಲ್ಗೆ ತೆರಳಿದ್ದ ಎಎಸ್ಐಮೇಲೆ ಕಾರಿನಿಂದ ಗುದ್ದಿಸಿ ಹಲ್ಲೆ ಮಾಡಿ ಪರಾರಿಯಾಗಿತ್ತು.
-
Moodbidri: ಮಹಿಳೆಯರನ್ನು ಮಂಚಕ್ಕೆ ಕರೆದಿದ್ದ ಆರೋಪ: ಮೂಡುಬಿದರೆ ಇನ್ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ ತನಿಖೆ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ಆಂಧ್ರಪ್ರದೇಶದಲ್ಲಿ ಕಲಬೆರಕೆ ಹಾಲು ಸೇವಿಸಿ 16 ಮಂದಿ ಸಾವು: ಹಲವು ರಾಜ್ಯಗಳಲ್ಲಿ ಅಧಿಕಾರಿಗಳಿಂದ ದಾಳಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ












Click it and Unblock the Notifications