Atul Subhash suicide case: ಬೆಂಗಳೂರು ಟೆಕ್ಕಿ ಅತುಲ್ ಸುಭಾಷ್ ಆತ್ಮಹ* ಕೇಸ್: ಇಬ್ಬರ ಬಂಧನ!
ಬೆಂಗಳೂರಿನಲ್ಲಿ ಟೆಕ್ಕಿ ಅತುಲ್ ಸುಭಾಷ್ ಅವರು ಕೇಸ್ಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ಆಗಿದೆ. ಬೆಂಗಳೂರಿನ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಅತುಲ್ ಸುಭಾಷ್ ಅವರು ಈಚೆಗೆ ಆತ್ಮಹ*ಗೆ ಶರಣಾಗಿದ್ದರು. ಇದರ ಬೆನ್ನಲ್ಲೇ ಅತುಲ್ ಅವರ ಸಾವಿಗೆ ಕಾರಣರಾದವರ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎನ್ನುವ ಆಗ್ರಹ ಹೆಚ್ಚಾಗಿತ್ತು. ಅತುಲ್ ಅವರು ಮಾಡಿರುವ ವಿಡಿಯೋ ಈಗಾಗಲೇ ಸೋಷಿಯಲ್ ಮೀಡಿಯಾದಲ್ಲಿ ಭಾರೀ ಸಂಚಲನವನ್ನೇ ಸೃಷ್ಟಿ ಮಾಡಿದೆ. ದೇಶದ ವಿವಿಧ ಭಾಗದಲ್ಲಿ ಈ ಕೇಸ್ಗೆ ಸಂಬಂಧಿಸಿದಂತೆ ಪ್ರತಿಭಟನೆಗಳು ನಡೆಯುತ್ತಿವೆ. ಇದೀಗ ಅತುಲ್ ಅವರ ಅತ್ತೆ ನಿಶಾ ಸಿಂಘಾನಿಯಾ ಮತ್ತು ಬಾಮೈದ ಅನುರಾಗ್ ಎನ್ನುವವರನ್ನು ಬೆಂಗಳೂರು ಪೊಲೀಸರು ಉತ್ತರ ಪ್ರದೇಶದ ಜೌನ್ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಂಗಳೂರಿನ ಟೆಕ್ಕಿ ಸುದೀರ್ಘ ಪುಟಗಳ ಡೆತ್ನೋಟ್ ಬರೆದು ಆತ್ಮಹ*ಗೆ ಶರಣಾಗಿದ್ದರು. ಅವರು ಸಾವನ್ನಪ್ಪುವುದಕ್ಕೂ ಮೊದಲು ನನ್ನ ಸಾವಿಗೆ ನನ್ನ ಪತ್ನಿ ನಿಖಿತಾ ಸಿಂಘಾನಿಯ ಹಾಗೂ ಅವರ ಕುಟುಂಬದವರೇ ಕಾರಣ ಎಂದು ದೂರಿದ್ದರು. ನಕಲಿ ದೂರು ದಾಖಲು ಮಾಡಿ ನನಗೆ ಕಿರುಕುಳ ನೀಡಲಾಗಿದೆ ಎಂದು ಅವರು ಆರೋಪಿಸಿದ್ದರು ಎನ್ನಲಾಗಿದೆ. ಈ ಪ್ರಕರಣವು ಇದೀಗ ದೇಶದಾದ್ಯಂತ ಚರ್ಚೆಗೆ ಕಾರಣವಾಗಿದ್ದು ಜಸ್ಟಿಸ್ ಫಾರ್ ಅತುಲ್ ಎನ್ನುವುದು ಭಾರೀ ಚರ್ಚೆಗೆ ಕಾರಣವಾಗಿದೆ. ತಪ್ಪಿತಸ್ಥರ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎನ್ನುವ ಆಗ್ರಹ ಕೇಳಿ ಬರುತ್ತಿದೆ.

ಈ ನಡುವೆ ಪ್ರಕರಣ ದಾಖಲಾಗುತ್ತಿದ್ದಂತೆಯೇ ನಿಶಾ ಸಿಂಘಾನಿಯಾ ಅವರು ಪರಾರಿಯಾಗಲು ಪ್ರಯತ್ನಿಸಿದ್ದರು ಎಂದು ವರದಿಯಾಗಿತ್ತು. ಇದಕ್ಕೆ ಸಂಬಂಧಿಸಿದ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಅಲ್ಲದೆ ಆತ್ಮಹ*ಗೆ ಶರಣಾದ ಅತುಲ್ ಅವರ ಪತ್ನಿ ನಿಖಿತಾ ಸಿಂಘಾನಿಯ ಸೇರಿದಂತೆ ನಾಲ್ವರಿಗೆ ಇದೀಗ ಬಂಧನದ ಭೀತಿ ಶುರುವಾಗಿದೆ.
ಈ ಕೇಸ್ಗೆ ಸಂಬಂಧಿಸಿದಂತೆ ಬೆಂಗಳೂರಿನ ಪೊಲೀಸರು ಪತ್ನಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದರು. ಆದರೆ, ಆಕೆ ಸಹಕರಿಸಿಲ್ಲ ಎಂದು ಹೇಳಲಾಗಿದೆ. ಹೀಗಾಗಿ, ನಿಖಿತಾ ಎನ್ನುವವರ ಮೇಲೆ ಬೆಂಗಳೂರು ಪೊಲೀಸರು ಕಾನೂನು ಕ್ರಮ ಜರುಗಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
ಅತುಲ್ ತಾಯಿ ಗಂಭೀರ ಆರೋಪ: ಇನ್ನು ಈ ಕೇಸ್ಗೆ ಸಂಬಂಧಿಸಿದಂತೆ ದೇಶದಾದ್ಯಂತ ಚರ್ಚೆ ಹಾಗೂ ಪ್ರತಿಭಟನೆಗಳು ನಡೆಯುತ್ತಿವೆ. ಪ್ರತಿಭಟನೆಯಲ್ಲಿ ಇದೇ ಪ್ರಕರಣದಂತೆ ಮನನೊಂದಿರುವ ಪುರುಷರು ಸಹ ಭಾಗವಹಿಸುತ್ತಿದ್ದು, ನಕಲಿ ಸ್ತ್ರೀವಾದ ತಡೆಯಬೇಕು ಹಾಗೂ ಇದರಿಂದ ಪುರುಷರನ್ನು ರಕ್ಷಿಸಬೇಕು ಎನ್ನುವ ಆಗ್ರಹ ಕೇಳಿ ಬಂದಿದೆ.
ಈ ನಡುವೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಅತುಲ್ ಅವರ ತಾಯಿ, ನನ್ನ ಮಗನಿಗೆ ಚಿತ್ರಹಿಂಸೆ ನೀಡಲಾಗಿದೆ. ಈ ರೀತಿ ಮಾಡಿರುವುದು ಕೊಲೆಗೆ ಸಮಾನವಾಗಿದೆ. ನನ್ನ ಮಗ ನಮಗೆ ನೋವಾಗುತ್ತೆ ಅಂತ ಯಾವುದನ್ನೂ ನಮ್ಮ ಬಳಿ ಹೇಳಿಕೊಳ್ಳುತ್ತಿರಲಿಲ್ಲ. ಅವನನ್ನು ಹಿಂಸೆ ಮಾಡಿಯೇ ಈ ರೀತಿ ಮಾಡಿಕೊಳ್ಳುವಂತೆ ಮಾಡಲಾಗಿದೆ ಎಂದಿದ್ದರು. ಅತುಲ್ ಅವರ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದ್ದು, ಈ ಕುಟುಂಬ ನ್ಯಾಯದ ನಿರೀಕ್ಷೆಯಲ್ಲಿ ಇದೆ. ಇನ್ನೊಂದು ಕಡೆ ಅತುಲ್ ಅವರ ಪತ್ನಿ ಕುಟುಂಬದವರು ಈ ಆರೋಪಗಳನ್ನು ನಿರಾಕರಿಸಿದ್ದಾರೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications