ನಾಡಗೀತೆಗೆ ಮೈಸೂರು ಅನಂತಸ್ವಾಮಿಯವರ ರಾಗ ಸಂಯೋಜನೆ ಅಧಿಕೃತಗೊಳಿಸಿ
ಬೆಂಗಳೂರು, ಜನವರಿ 29: ನಾಡಗೀತೆಗೆ ಮೈಸೂರು ಅನಂತಸ್ವಾಮಿಯವರ ರಾಗ ಸಂಯೋಜನೆಯನ್ನು ಅಧಿಕೃಗೊಳಿಸಿ ಎಂದು ಅನಂತಸ್ವಾಮಿಯವರ ಕುಟುಂಬ ಮನವಿ ಮಾಡಿದೆ.
ನಾಡಗೀತೆಗೆ ಮೈಸೂರು ಅನಂತಸ್ವಾಮಿ ಅವರ ರಾಗ ಸಂಯೋಜನೆಯನ್ನು ಅಧಿಕೃತ ಎಂದು ಇನ್ನೂ ಘೋಷಿಸದಿರುವ ಬಗ್ಗೆ ಮೈಸೂರು ಅನಂತಸ್ವಾಮಿ ಕುಟುಂಬ ತೀವ್ರ ಬೇಸರವನ್ನು ವ್ಯಕ್ತಪಡಿಸಿದೆ.
'ಅವಧಿ' ಅಂತರ್ಜಾಲ ತಾಣ ಇಂದು ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ 'ಬಹುರೂಪಿ' ಪ್ರಕಾಶನ ಪ್ರಕಟಿಸಿರುವ 'ನನ್ನ ಅಣ ಮೈಸೂರು ಅನಂತಸ್ವಾಮಿ' ಕೃತಿ ಬಿಡುಗಡೆ ಸಮಾರಂಭದಲ್ಲಿ ಈ ಬೇಸರ ವ್ಯಕ್ತವಾಯಿತು. ಕೃತಿಯ ಲೇಖಕಿ, ಅನಂತಸ್ವಾಮಿಯವರ ಮಗಳಾದ ಸುನೀತಾ ಅನಂತಸ್ವಾಮಿ ಹಾಗೂ ಪತ್ನಿ ಶಾಂತ ಅನಂತಸ್ವಾಮಿ ಅವರು ಈ ಬೇಸರ ವ್ಯಕ್ತಪಡಿಸಿದರು.

2006ರಲ್ಲಿಯೇ ನಾಡಗೀತೆಗೆ ಯಾವ ರಾಗ ಸಂಯೋಜನೆಯನ್ನು ಉಳಿಸಿಕೊಳ್ಳಬೇಕು ಎಂದು ನಿರ್ಧರಿಸಲು ಸರ್ಕಾರ ರಚಿಸಿದ್ದ ಸಮಿತಿಯು ಮೈಸೂರು ಅನಂತಸ್ವಾಮಿಯವರ ರಾಗವನ್ನು ಶಿಫಾರಸು ಮಾಡಿತ್ತು. ಆದರೂ ಸಹಾ ಅದನ್ನು ಸರ್ಕಾರ ಅಧಿಕೃತವಾಗಿ ಘೋಷಿಸಿಲ್ಲ. ಇದರಿಂದ ನಾಡಗೀತೆಯ ರಾಗ ವಿವಾದಕ್ಕೆ ತುತ್ತಾಗಿದೆ ಎಂದರು.
ಮೈಸೂರು ಅನಂತಸ್ವಾಮಿಯವರು 'ಜಯ ಭಾರತ ಜನನಿಯ ತನುಜಾತೆ' ಹಾಡಿಗೆ ಸಂಯೋಜಿಸಿದ ರಾಗವನ್ನು ಸ್ವತಃ ಕುವೆಂಪುರವರೇ ಮೆಚ್ಚಿದ್ದರು. ಸರ್ಕಾರ ಈ ಗೀತೆಯನ್ನು ನಾಡಗೀತೆ ಎಂದು ಪರಿಗಣಿಸುವ ಸಾಕಷ್ಟು ಮುಂಚೆಯೇ ಅನಂತಸ್ವಾಮಿಯವರು ಇದನ್ನು ನಾಡಿನ ಎಲ್ಲೆಡೆ ಹಾಡಿ ಜನಪ್ರಿಯಗೊಳಿಸಿದ್ದರು. ಖ್ಯಾತ ಹಾಡುಗಾರರಾದ ಪಿ ಕಾಳಿಂಗರಾಯರೂ ಸಹಾ ತಮ್ಮ ದಾಟಿಯನ್ನು ಬಿಟ್ಟು ಮೈಸೂರು ಅನಂತಸ್ವಾಮಿಯವರ ಸಂಯೋಜನೆಯನ್ನು ಮೆಚ್ಚಿ ಅದನ್ನು ಅಳವಡಿಸಿಕೊಂಡಿದ್ದರು.
ಅನಂತಸ್ವಾಮಿ ಅವರು ಭಾವಗೀತೆಯ ಲೋಕಕ್ಕೆ ಕೊಟ್ಟ ಕೊಡುಗೆ ಅಪಾರ. ನಾಡಗೀತೆಯ ರಾಗವನ್ನು ವಿವಾದಗೊಳಿಸುವ ಮೂಲಕ ಅವರಿಗೆ ಅವಮಾನ ಮಾಡಬೇಡಿ ಎಂದು ಅವರ ಕುಟುಂಬದವರು ಮನವಿ ಮಾಡಿದರು.
ಮೈಸೂರು ಅನಂತಸ್ವಾಮಿಯವರನ್ನು ಆಪ್ತವಾಗಿ ಚಿತ್ರಿಸುವ ಈ ಕೃತಿಯನ್ನು ಪ್ರಸ್ತುತ ಅಮೆರಿಕಾದಲ್ಲಿರುವ ಸುನೀತಾ ಅನಂತಸ್ವಾಮಿ ರಚಿಸಿದ್ದು ಅಪರೂಪದ ಛಾಯಾಚಿತ್ರಗಳನ್ನು ಹೊಂದಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications