ಸಿಗದ 5,000.ರೂ ಪರಿಹಾರ: ಸಿಡಿದೆದ್ದ ಆಟೋ, ಟ್ಯಾಕ್ಸಿ ಚಾಲಕರಿಂದ ಪ್ರತಿಭಟನೆ
ಬೆಂಗಳೂರು, ಮೇ 18: ಕೊರೊನಾ ವೈರಸ್ ಸೋಂಕನ್ನು ಅನ್ನು ತಡೆಗಟ್ಟಲು ದೇಶದಾದ್ಯಂತ ಲಾಕ್ ಡೌನ್ ಘೋಷಣೆ ಆದ್ಮೇಲೆ ಸಂಕಷ್ಟಕ್ಕೆ ಸಿಲುಕಿದ್ದ ಕರ್ನಾಟಕ ರಾಜ್ಯದ ಆಟೋ ಮತ್ತು ಟ್ಯಾಕ್ಸಿ, ಕ್ಯಾಬ್ ಚಾಲಕರಿಗೆ 5 ಸಾವಿರ ರೂಪಾಯಿಯ ಪರಿಹಾರ ಕೊಡುತ್ತೇವೆ ಸಿಎಂ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದರು.
Recommended Video
ಸೇವಾ ಸಿಂಧು ಜಾಲತಾಣದ ಮೂಲಕ ಆಟೋ, ಟ್ಯಾಕ್ಸಿ, ಕ್ಯಾಬ್ ಚಾಲಕರು ಅರ್ಜಿ ಹಾಕಿ ಹಣವನ್ನು ಪಡೆಯಬಹುದಾಗಿತ್ತು.
ಇದೀಗ ಇದೇ ವಿಚಾರಕ್ಕೆ ಸಂಬಂಧಪಟ್ಟಂತೆ ''ಸುಳ್ಳು ಘೋಷಣೆ'' ಎಂದು ಹೇಳಿ 11ನೇ ದಿನದ ತಿಥಿ ಕಾರ್ಯ ಮಾಡಿ, ಎಳ್ಳು ನೀರು ಬಿಟ್ಟು.. ಆಟೋ, ಟ್ಯಾಕ್ಸಿ ಚಾಲಕ ಆಸೋಸಿಯೇಷನ್ ವಿನೂತನವಾಗಿ ಪ್ರತಿಭಟನೆ ನಡೆಸಿದೆ.

ಪರಿಹಾರ ಸಹಾಯ ಧನ ವಿಳಂಬವಾಗುತ್ತಿರುವ ಹಿನ್ನಲೆಯಲ್ಲಿ ಸಾರಿಗೆ ಇಲಾಖೆಯ ಬೇಜವಾಬ್ದಾರಿ ವಿರುದ್ಧ ಅಸಮಾಧಾನ ಹೊರಹಾಕಿ, ಶಾಂತಿನಗರದ ಸಾರಿಗೆ ಆಯುಕ್ತರ ಕಚೇರಿಯ ಮುಂದೆ ಚಾಲಕರು ಪ್ರತಿಭಟನೆ ನಡೆಸಿದರು.

''ಚಾಲಕರಿಗೆ 5,000 ಪರಿಹಾರ ನೀಡುತ್ತವೆ ಎಂದು ಘೋಷಣೆ ಮಾಡಿ 11 ದಿನ ಕಳೆದರೂ ಪರಿಹಾರ ಧನ ಸಿಗುವ ಯಾವುದೇ ಮುನ್ಸೂಚನೆ ಕಾಣುತ್ತಿಲ್ಲ. ಸಾರಿಗೆ ಇಲಾಖೆ ದಿನೇ ದಿನೇ ಹೊಸ ಹೊಸ ಮಾನದಂಡಗಳು, ನಿಬಂಧನೆಗಳನ್ನ ಚಾಲಕರ ಮೇಲೆ ಹೇರುತ್ತಲೇ ಇದೆ. 7 ಲಕ್ಷದ 75 ಸಾವಿರ ಚಾಲಕರಿಗೆ ತಲಾ 5 ಸಾವಿರ ರೂಪಾಯಿ ನೀಡುತ್ತೇವೆ ಎಂದು ಹೇಳಿ ಈಗ ಕೇವಲ 20 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದಾರೆ. ಪರಿಹಾರ ಘೋಷಣೆ ಮಾಡುವಾಗ 370 ಕೋಟಿ ಹೇಳಿದ್ದ ಸರ್ಕಾರ ಈಗ 20 ಕೋಟಿಗೆ ಇಳಿಸಿದೆ. ಇದರಿಂದ ಪ್ರತಿ ಚಾಲಕನಿಗೆ ಕೇವಲ 40 ರೂಪಾಯಿಗಳು ಮಾತ್ರ ಬರುತ್ತದೆ. ಚಾಲಕರಿಗೆ ಈ ಹಣ ಸೇರಲೇಬಾರದೆಂದು ಸರ್ಕಾರ ಕುತಂತ್ರವನ್ನು ನಡೆಸುತ್ತಿದೆ. ಇದನ್ನು ಖಂಡಿಸುತ್ತೇವೆ ಮತ್ತು ಮುಂದಿನ ದಿನಗಳಲ್ಲಿ ಉಗ್ರ ಹೋರಾಟವನ್ನು ಮಾಡುತ್ತೇವೆ'' ಎಂದು ಪ್ರತಿಭಟನಾಕಾರರು ಬೇಸರ ವ್ಯಕ್ತಪಡಿಸಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications