ನಮ್ಮ ವ್ಯಾಪಾರ ಕಸಿಯುತ್ತಿದ್ದೀರ ಎಂದು ಟೆಕ್ಕಿ ಮೇಲೆ ಕೈಮಾಡಿದ ಆಟೋ ಚಾಲಕ
ಬೆಂಗಳೂರು, ಜುಲೈ 11: ರೈಡ್ ಶೇರಿಂಗ್ ಬೈಕ್ ಗಳನ್ನು ಬಳಸಿ ನಮ್ಮ ವ್ಯಾಪಾರ ಕಸಿಯುತ್ತಿದ್ದೀರ ಎಂದು ಆಟೋ ಚಾಲಕನೊಬ್ಬ ಟೆಕ್ಕಿಯೊಬ್ಬರ ಮೇಲೆ ಹಲ್ಲೆ ಮಾಡಿರುವ ಘಟನೆ ವೈಟ್ ಫೀಲ್ಡ್ ನಲ್ಲಿ ನಡೆದಿದೆ. ಆತನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ವೈಟ್ ಫೀಲ್ಡ್ ನಲ್ಲಿನ ದಿವ್ಯಶ್ರೀ ಟೆಕ್ನೋ ಪಾರ್ಕ್ ಬಳಿ ಈ ಘಟನೆ ನಡೆದಿದೆ. ಟೆಕ್ನೋ ಪಾರ್ಕ್ ಬಳಿ ಸಂಜೆ ಸುಮಾರು 4.30ರ ವೇಳೆಗೆ ಟೆಕ್ಕಿ ರಾಹುಲ್, ಯೂಲು ಬೈಕನ್ನು ಆ ಬೈಕಿನ ಪಾರ್ಕಿಂಗ್ ಗೆ ಮೀಸಲಿಟ್ಟ ಯೂಲು ಝೋನ್ ನಲ್ಲಿ ಪಾರ್ಕ್ ಮಾಡುತ್ತಿದ್ದ ಸಂದರ್ಭ ಹಿಂದಿನಿಂದ ಬಂದ ಆಟೊ ಡ್ರೈವರ್ ಏಕಾಏಕಿ ಕುತ್ತಿಗೆ ಪಟ್ಟಿ ಹಿಡಿದುಕೊಂಡಿದ್ದಾನೆ. ಏಕೆ ಇಲ್ಲಿ ಪಾರ್ಕ್ ಮಾಡುತ್ತಿದ್ದೀಯ ಎಂದು ಜಗಳ ತೆಗೆದಿದ್ದಾನೆ. ಇದಕ್ಕೆ ಹಿಂದಿಯಲ್ಲಿ ರಾಹುಲ್ ಪ್ರತಿಕ್ರಿಯಿಸಿದ್ದನ್ನು ಕಂಡು ಕೋಪಗೊಂಡ ಚಾಲಕ, ಈ ರೈಡ್ ಶೇರಿಂಗ್ ಬೈಕ್ ಬಳಸಿ, ನಮ್ಮ ವ್ಯಾಪಾರ ಕಸಿದುಕೊಳ್ಳುತ್ತಿದ್ದೀರ ಎಂದು ಆಕ್ರೋಶದಿಂದ ಮಾತನಾಡಿದ್ದಾನೆ.
ಇದು ಯೂಲು ಬೈಕ್ ಪಾರ್ಕ್ ಮಾಡುವ ಜಾಗ ಹೌದೋ ಅಲ್ಲವೊ ಎಂಬುದನ್ನು ಖಾತ್ರಿಪಡಿಸಿಕೊಳ್ಳಲು ರಾಹುಲ್ ಬೈಕ್ ಕಂಪನಿ ಪ್ರತಿನಿಧಿಗೆ ಕರೆ ಮಾಡಲು ಮುಂದಾದಾಗ, ಕೆನ್ನೆಗೆ ಹೊಡೆದು, ಮೊಬೈಲ್ ಕಿತ್ತೆಸೆದು ಕೆಳಗೆ ತಳ್ಳಿದ್ದಾನೆ. ದಾರಿಯಲ್ಲಿ ಬರುತ್ತಿದ್ದ ಇಬ್ಬರು ಮಹಿಳೆಯರು ರಾಹುಲ್ ಸಹಾಯಕ್ಕೆ ಬಂದು ಪೊಲೀಸರಿಗೆ ಕರೆ ಮಾಡಲು ಮುಂದಾದಾಗ, ಅವರನ್ನು ಬೆದರಿಸಿ ದೂರ ಸರಿಯುವಂತೆ ಮಾಡಿದ್ದಾನೆ. ಇದೇ ಸಂದರ್ಭ ಟೆಕ್ ಪಾರ್ಕ್ ನ ಭದ್ರತಾ ಸಿಬ್ಬಂದಿ ಬಂದು ರಾಹುಲ್ ಅವರನ್ನು ಒಳಗೆ ಕರೆದುಕೊಂಡು ಹೋಗಿದ್ದಾರೆ.

ಘಟನೆಯಿಂದ ಆತಂಕಗೊಂಡಿರುವ ಟೆಕ್ಕಿ, ನಗರವನ್ನು ಬಿಟ್ಟುಹೋಗುವುದಾಗಿ ಹೇಳಿಕೊಂಡಿದ್ದಾರೆ. ಈ ಘಟನೆಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ವೈಟ್ ಫೀಲ್ಡ್ ಪೊಲೀಸರು ಗಮನಿಸಿ ಪ್ರಕರಣವನ್ನು ಕೈಗೆತ್ತಿಕೊಂಡಿದ್ದಾರೆ.
ಪೊಲೀಸರು ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಈ ರೀತಿಯ ಘಟನೆಗಳು ಮುಂದೆ ನಡೆಯದಂತೆ ತಡೆಯಬೇಕು. ಇದು ಬೆಂಗಳೂರು ನಗರಕ್ಕೆ ಕೆಟ್ಟ ಹೆಸರು ತರುತ್ತದೆ ಎಂದು ಯೂಲು ಬೈಕ್ ನ ಸಹಸಂಸ್ಥಾಪಕ ಆರ್ ಕೆ ಮಿಶ್ರಾ ಪ್ರತಿಕ್ರಿಯಿಸಿದ್ದಾರೆ.
ವೈಟ್ ಫೀಲ್ಡ್ ಪೊಲೀಸರು ಆಟೋ ಚಾಲಕನಿಗಾಗಿ ಹುಡುಕಾಟ ನಡೆಸಿದ್ದಾರೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications