Namma Metro: ಮೆಟ್ರೋ ಕಾಮಗಾರಿ ನಿರ್ಲಕ್ಷ್ಯದಿಂದ ಆಟೋ ಚಾಲಕ ಸಾವು
ಬೆಂಗಳೂರು ಏಪ್ರಿಲ್ 16: ಬೆಂಗಳೂರಿನಲ್ಲಿ ಅಲ್ಲಲ್ಲಿ ಮೆಟ್ರೋ ಕಾಮಗಾರಿ ಮುಂದುವರೆದಿದೆ. ಆದರೆ ಇದರಿಂದಾಗಿ ವಾಹನ ಸವಾರರು ಜೀವವನ್ನೇ ಗಟ್ಟಿ ಹಿಡಿದುಕೊಂಡು ಸಂಚಾರ ಮಾಡುವ ಪರಸ್ಥಿತಿ ನಿರ್ಮಾಣವಾಗಿದೆ. ಬೆಂಗಳೂರಿನಲ್ಲಿ ಮೆಟ್ರೋ ಕಾಮಗಾರಿ ವೇಳೆ ತೋರಿದ ನಿರ್ಲಕ್ಷ್ಯಕ್ಕೆ ಆಟೋ ಚಾಲಕ ಬಲಿಯಾಗಿದ್ದಾನೆ.
ಮೆಟ್ರೋ ಕಾಮಗಾರಿಗಾಗಿ ಕೊಂಡೊಯ್ಯುತ್ತಿದ್ದ ವಯಾಡೆಕ್ಟ್ (ಬೃಹತ್ ಗಾತ್ರದ ಸಿಮೆಂಟ್ ಗೋಡೆ) ಆಟೋದ ಮೇಲೆ ಉರುಳಿ ಬಿದ್ದ ಪರಿಣಾಮ ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಬೆಂಗಳೂರಿನ ಕೋಗಿಲು ಕ್ರಾಸ್ ಬಳಿ ಈ ದುರಂತ ಸಂಭವಿಸಿದೆ. ಹೆಗಡೆನಗರದ ನಿವಾಸಿ ಖಾಸಿಂ ಸಾಬ್ ಮೃತ ದುರ್ದೈವಿ.

ಆಟೋ ಚಾಲಕ ಖಾಸಿಂ ಸಾಬ್ ಗ್ರಾಹಕರನ್ನು ಪಿಕ್ ಮಾಡಿಕೊಂಡು ನಾಗವಾರದ ಕಡೆಗೆ ಹೋಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಆಟೋದಲ್ಲಿ ಕುಳಿತಿದ್ದ ಪ್ಯಸೆಂಜರ್ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ವಯಾಡೆಕ್ಟ್ ಬಿದ್ದ ಬಳಿಕ ಆಟೋ ಚಾಲಕನನ್ನು ಆಸ್ಪತ್ರೆಗೆ ರವಾನೆ ಮಾಡಲಾಯಿತು. ಆದರೆ ಅಷ್ಟರಲ್ಲಾಗಲೇ ಚಾಲಕ ಸಾವನ್ನಪ್ಪಿದ್ದನು.
ಮೆಟ್ರೋ ತಡೆಗೋಡೆ ನಿರ್ಮಾಣಕ್ಕಾಗಿ ಕಳೆದದಿನ ತಡರಾತ್ರಿ 12:5 ಸುಮಾರಿಗೆ ಬೃಹತ್ ಗಾತ್ರದ ಸಿಮೆಂಟ್ ಗೋಡೆ (ವಾಯಾಡೆಕ್ಟ್) ಯನ್ನು ಏಪೋರ್ಟ್ ಮಾರ್ಗದ ಮೆಟ್ರೋ ಕಾಮಗಾರಿಗಾಗಿ ಹದಿನೆಂಟು ಚಕ್ರದ ಲಾರಿಯಲ್ಲಿ ಕೊಂಡೊಯ್ಯಲಾಗುತ್ತಿತ್ತು. ಕೋಗಿಲು ಕ್ರಾಸ್ನಲ್ಲಿ ತಿರುವು ತೆಗೆದುಕೊಳ್ಳುವ ವೇಳೆ ಲಾರಿಯೇ ಎರಡು ಭಾಗವಾಗಿ ಹೋಗಿದೆ. ಇದರಿಂದಾಗಿ ಬೃಹತ್ ಸಿಮೆಂಟ್ ಗೋಡೆ ನೆಲಕ್ಕೆ ಬಿದ್ದಿದೆ.
ಈ ವೇಳೆ ಲಾರಿ ಪಕ್ಕದಲ್ಲಿ ಇದ್ದ ಆಟೋದ ಮೇಲೆ ಬೃಹತ್ ಸಿಮೆಂಟ್ ಗೋಡೆ ಬಿದ್ದ ಪರಿಣಾಮ ಆಟೋ ಚಾಲಕ ಮೃತಪಟ್ಟಿದ್ದಾನೆ. ಅದೃಷ್ಟವಶಾತ್ ಪ್ಯಾಸೆಂಜರ್ ಬೃಹತ್ ಸಿಮೆಂಟ್ ಗೋಡೆ ಬೀಳುತ್ತಿದ್ದಂತೆ ಹೊರ ಓಡಿ ಬಂದಿದ್ದಾರೆ. ಆದರೆ ಚಾಲಕ ಇಳಿಯಲು ಆಗಿಲ್ಲ. ಆಟೋ ಕೂಡ ಸಂಪೂರ್ಣವಾಗಿ ಅಪ್ಪಚ್ಚಿಯಾಗಿದೆ. ಘಟನೆ ನಡೆದ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದಾನೆ.
ಇಂತಹ ಘಟನೆ ನಡೆದಿರುವುದು ಇದೇ ಮೊದಲು ಅಲ್ಲ. ಎರಡು ವರ್ಷದ ಹಿಂದೆ ಇದೇ ರೀತಿ ಘಟನೆಯೊಂದು ನಡೆದಿತ್ತು. ನಾಗವಾರ ಮುಖ್ಯ ರಸ್ತೆಯಲ್ಲಿ ಹೋಗುವಾಗ ಏಕಾಏಕಿ ಬೃಹತ್ ಗಾತ್ರದ ವಯಾಡೆಕ್ಟ್ ಕುಸಿದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಯಲಹಂಕ ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದೆ. ಮೆಟ್ರೋ ಕಾಮಗಾರಿ ನಿರ್ಲಕ್ಷ್ಯದಿಂದ ನಿರಂತರವಾಗಿ ಜೀವಗಳು ಬಲಿಯಾಗಿರುತ್ತಿರುವುದಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹೀಗಾಗಿ ಮೆಟ್ರೋ ಕಾಮಗಾರಿ ನಿರ್ಲಕ್ಷ್ಯದಿಂದಾಗಿ ಇನ್ನೂ ಅದೆಷ್ಟು ಜೀವಗಳು ಬಲಿಯಾಗಬೇಕು ಎಂದು ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಸಂಬಂಧಿಕರು ಆಗ್ರಹಿಸಿದ್ದಾರೆ. ಜೊತೆಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
-
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ












Click it and Unblock the Notifications