ನಿಗದಿತ ಪ್ರಯಾಣ ದರ ಪರಿಷ್ಕರಿಸುವಂತೆ ಕೋರಿದ ಆಟೋ ಚಾಲಕರು
ಬೆಂಗಳೂರು, ನವೆಂಬರ್ 27: ಸರ್ಕಾರ ನಿಗದಿಪಡಿಸಿರುವ ಆಟೋ ಪ್ರಯಾಣ ದರವನ್ನು ಪರಿಷ್ಕರಿಸಬೇಕು ಎಂದು ಕರ್ನಾಟಕ ಸಾರಿಗೆ ಇಲಾಖೆಯನ್ನು ಬೆಂಗಳೂರಿನ ಆಟೋ ಚಾಲಕರು ಒತ್ತಾಯಿಸಿದ್ದಾರೆ.
ಹೊಸ ದರಪಟ್ಟಿ ನೀಡುವುದರಿಂದ ನಗರದಲ್ಲಿನ ಪ್ರಯಾಣ ರದ್ದತಿ ಮತ್ತು ನಿರಾಕರಣೆ ಸಮಸ್ಯೆಗೆ ಪರಿಹಾರ ಸಿಗಲಿದೆ ಎಂದು ಒಕ್ಕೂಟ ತಿಳಿಸಿದೆ. ಕರ್ನಾಟಕ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ಬರೆದ ಪತ್ರದಲ್ಲಿ ಆಟೋರಿಕ್ಷಾ ಚಾಲಕರ ಒಕ್ಕೂಟವು, "ಕಳೆದ ಒಂದು ದಶಕದಲ್ಲಿ ಆಟೋ ದರವನ್ನು ಎರಡು ಬಾರಿ ಮಾತ್ರ ಹೆಚ್ಚಿಸಲಾಗಿದೆ.

ಇದರಿಂದಾಗಿ ಅನೇಕ ಚಾಲಕರು ಪ್ರಯಾಣಿಕರಿಂದ ಹೆಚ್ಚುವರಿ ಮೊತ್ತವನ್ನು ಕೇಳುತ್ತಿದ್ದಾರೆ. ಅಗತ್ಯ ವಸ್ತುಗಳ ಬೆಲೆಗಳು ವೇಗವಾಗಿ ಹೆಚ್ಚುತ್ತಿರುವ ಕಾರಣ ಸರ್ಕಾರ ನಿಗದಿಪಡಿಸಿದ ಬೆಲೆಗಳನ್ನು ಪರಿಷ್ಕರಿಸಬೇಕು ಮತ್ತು ಆಟೋ ಚಾಲಕರ ಮನವಿಯನ್ನು ಪರಿಗಣಿಸುವ ಅಗತ್ಯವಿದೆ ಎಂದು ತಿಳಿಸಿದೆ.
ಈ ಹಿಂದೆಯೂ ಬೆಂಗಳೂರಿನಲ್ಲಿ ಆಟೋ ಸಂಘಟನೆಗಳು ಸರ್ಕಾರಕ್ಕೆ ಬೇಡಿಕೆಗಳ ಪಟ್ಟಿಯೊಂದಿಗೆ ಪ್ರತಿಭಟನೆ ನಡೆಸಿದ್ದವು. ದ್ವಿಚಕ್ರ ವಾಹನ ಟ್ಯಾಕ್ಸಿ ಸೇವೆಗಳು ಪ್ರಯಾಣಿಕರಿಗೆ ಅಸುರಕ್ಷಿತವಾಗಿದೆ. ಆದ್ದರಿಂದ ಅದನ್ನು ನಿಷೇಧಿಸಬೇಕೆಂದು ಅವರು ಸರ್ಕಾರವನ್ನು ಒತ್ತಾಯಿಸಿದ್ದರು. ರಾಜ್ಯದ ಸಾರಿಗೆ ಇಲಾಖೆಗೂ ವಿವಿಧ ಬೇಡಿಕೆಗಳ ಪಟ್ಟಿಯನ್ನು ಸಲ್ಲಿಸಿದರು.
ಈ ಹಿಂದೆ ಓಲಾ, ಉಬರ್ ಮತ್ತು ರಾಪಿಡೋನಂತಹ ಅಗ್ರಿಗೇಟರ್ ಅಪ್ಲಿಕೇಶನ್ಗಳು ಪ್ರತಿ ಟ್ರಿಪ್ಗೆ ₹100 ಕ್ಕಿಂತ ಹೆಚ್ಚು ಶುಲ್ಕ ವಿಧಿಸಿದ್ದಕ್ಕಾಗಿ ಪ್ರಯಾಣಿಕರ ಆಕ್ರೋಶಕ್ಕೆ ಗುರಿಯಾದವು. ಬಳಿಕ ಸರ್ಕಾರ ನಿಗದಿಪಡಿಸಿದ ಬೆಲೆಗಳನ್ನು ವಿಧಿಸಲು ಮತ್ತು ಗ್ರಾಹಕರಿಂದ ಹೆಚ್ಚು ಶುಲ್ಕ ವಿಧಿಸದಂತೆ ಅವರಿಗೆ ನಿರ್ದೇಶನ ನೀಡಲಾಯಿತು.
ಏತನ್ಮಧ್ಯೆ, ನವೆಂಬರ್ 2021 ರಲ್ಲಿ ಕರ್ನಾಟಕ ಸರ್ಕಾರವು ರಾಜ್ಯದ ಆಟೋ ಚಾಲಕರ ಮೀಟರ್ ದರವನ್ನು ಹೆಚ್ಚಿಸಿತು. ಮೊದಲ ಎರಡು ಕಿಲೋಮೀಟರ್ಗಳಿಗೆ 25 ರೂ.ನಿಂದ 30 ರೂ.ಗೆ ಏರಿಕೆ ಮಾಡಲಾಯಿತು. ಪ್ರತಿ ಕಿಲೋಮೀಟರ್ಗೆ ಮೂಲ ಬೆಲೆಯನ್ನು 13 ರೂ. ನಿಂದ 15 ರೂ.ಗೆ ಹೆಚ್ಚಿಸಲಾಗಿದೆ.
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ?












Click it and Unblock the Notifications