ನಿಗದಿತ ಪ್ರಯಾಣ ದರ ಪರಿಷ್ಕರಿಸುವಂತೆ ಕೋರಿದ ಆಟೋ ಚಾಲಕರು
ಬೆಂಗಳೂರು, ನವೆಂಬರ್ 27: ಸರ್ಕಾರ ನಿಗದಿಪಡಿಸಿರುವ ಆಟೋ ಪ್ರಯಾಣ ದರವನ್ನು ಪರಿಷ್ಕರಿಸಬೇಕು ಎಂದು ಕರ್ನಾಟಕ ಸಾರಿಗೆ ಇಲಾಖೆಯನ್ನು ಬೆಂಗಳೂರಿನ ಆಟೋ ಚಾಲಕರು ಒತ್ತಾಯಿಸಿದ್ದಾರೆ.
ಹೊಸ ದರಪಟ್ಟಿ ನೀಡುವುದರಿಂದ ನಗರದಲ್ಲಿನ ಪ್ರಯಾಣ ರದ್ದತಿ ಮತ್ತು ನಿರಾಕರಣೆ ಸಮಸ್ಯೆಗೆ ಪರಿಹಾರ ಸಿಗಲಿದೆ ಎಂದು ಒಕ್ಕೂಟ ತಿಳಿಸಿದೆ. ಕರ್ನಾಟಕ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ಬರೆದ ಪತ್ರದಲ್ಲಿ ಆಟೋರಿಕ್ಷಾ ಚಾಲಕರ ಒಕ್ಕೂಟವು, "ಕಳೆದ ಒಂದು ದಶಕದಲ್ಲಿ ಆಟೋ ದರವನ್ನು ಎರಡು ಬಾರಿ ಮಾತ್ರ ಹೆಚ್ಚಿಸಲಾಗಿದೆ.

ಇದರಿಂದಾಗಿ ಅನೇಕ ಚಾಲಕರು ಪ್ರಯಾಣಿಕರಿಂದ ಹೆಚ್ಚುವರಿ ಮೊತ್ತವನ್ನು ಕೇಳುತ್ತಿದ್ದಾರೆ. ಅಗತ್ಯ ವಸ್ತುಗಳ ಬೆಲೆಗಳು ವೇಗವಾಗಿ ಹೆಚ್ಚುತ್ತಿರುವ ಕಾರಣ ಸರ್ಕಾರ ನಿಗದಿಪಡಿಸಿದ ಬೆಲೆಗಳನ್ನು ಪರಿಷ್ಕರಿಸಬೇಕು ಮತ್ತು ಆಟೋ ಚಾಲಕರ ಮನವಿಯನ್ನು ಪರಿಗಣಿಸುವ ಅಗತ್ಯವಿದೆ ಎಂದು ತಿಳಿಸಿದೆ.
ಈ ಹಿಂದೆಯೂ ಬೆಂಗಳೂರಿನಲ್ಲಿ ಆಟೋ ಸಂಘಟನೆಗಳು ಸರ್ಕಾರಕ್ಕೆ ಬೇಡಿಕೆಗಳ ಪಟ್ಟಿಯೊಂದಿಗೆ ಪ್ರತಿಭಟನೆ ನಡೆಸಿದ್ದವು. ದ್ವಿಚಕ್ರ ವಾಹನ ಟ್ಯಾಕ್ಸಿ ಸೇವೆಗಳು ಪ್ರಯಾಣಿಕರಿಗೆ ಅಸುರಕ್ಷಿತವಾಗಿದೆ. ಆದ್ದರಿಂದ ಅದನ್ನು ನಿಷೇಧಿಸಬೇಕೆಂದು ಅವರು ಸರ್ಕಾರವನ್ನು ಒತ್ತಾಯಿಸಿದ್ದರು. ರಾಜ್ಯದ ಸಾರಿಗೆ ಇಲಾಖೆಗೂ ವಿವಿಧ ಬೇಡಿಕೆಗಳ ಪಟ್ಟಿಯನ್ನು ಸಲ್ಲಿಸಿದರು.
ಈ ಹಿಂದೆ ಓಲಾ, ಉಬರ್ ಮತ್ತು ರಾಪಿಡೋನಂತಹ ಅಗ್ರಿಗೇಟರ್ ಅಪ್ಲಿಕೇಶನ್ಗಳು ಪ್ರತಿ ಟ್ರಿಪ್ಗೆ ₹100 ಕ್ಕಿಂತ ಹೆಚ್ಚು ಶುಲ್ಕ ವಿಧಿಸಿದ್ದಕ್ಕಾಗಿ ಪ್ರಯಾಣಿಕರ ಆಕ್ರೋಶಕ್ಕೆ ಗುರಿಯಾದವು. ಬಳಿಕ ಸರ್ಕಾರ ನಿಗದಿಪಡಿಸಿದ ಬೆಲೆಗಳನ್ನು ವಿಧಿಸಲು ಮತ್ತು ಗ್ರಾಹಕರಿಂದ ಹೆಚ್ಚು ಶುಲ್ಕ ವಿಧಿಸದಂತೆ ಅವರಿಗೆ ನಿರ್ದೇಶನ ನೀಡಲಾಯಿತು.
ಏತನ್ಮಧ್ಯೆ, ನವೆಂಬರ್ 2021 ರಲ್ಲಿ ಕರ್ನಾಟಕ ಸರ್ಕಾರವು ರಾಜ್ಯದ ಆಟೋ ಚಾಲಕರ ಮೀಟರ್ ದರವನ್ನು ಹೆಚ್ಚಿಸಿತು. ಮೊದಲ ಎರಡು ಕಿಲೋಮೀಟರ್ಗಳಿಗೆ 25 ರೂ.ನಿಂದ 30 ರೂ.ಗೆ ಏರಿಕೆ ಮಾಡಲಾಯಿತು. ಪ್ರತಿ ಕಿಲೋಮೀಟರ್ಗೆ ಮೂಲ ಬೆಲೆಯನ್ನು 13 ರೂ. ನಿಂದ 15 ರೂ.ಗೆ ಹೆಚ್ಚಿಸಲಾಗಿದೆ.











Click it and Unblock the Notifications