ಬೈಕ್ ಟ್ಯಾಕ್ಸಿ ನಿಷೇಧಿಸದಿದ್ದರೆ ಚುನಾವಣೆ ಬಹಿಷ್ಕಾರ: ಸರ್ಕಾರಕ್ಕೆ ಆಟೋ ಚಾಲಕರ ಬೆದರಿಕೆ, ವಿಡಿಯೋ
ಬೆಂಗಳೂರು, ಮಾರ್ಚ್. 27: ಬೆಂಗಳೂರಿನ ಆಟೋರಿಕ್ಷಾ ಚಾಲಕರು ಅಕ್ರಮ ಬೈಕ್ ಟ್ಯಾಕ್ಸಿ ಚಾಲಕರ ವಿರುದ್ಧ ಹೊಸ ಅಭಿಯಾನವನ್ನು ಪ್ರಾರಂಭಿಸಿದ್ದಾರೆ. ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳನ್ನು ನಿಷೇಧಿಸದಿದ್ದಲ್ಲಿ ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮತ ಚಲಾಯಿಸುವುದಿಲ್ಲ ಎಂದು ಹಲವು ಆಟೋರಿಕ್ಷಾ ಚಾಲಕರು ತಮ್ಮ ಕುಟುಂಬ ಸಮೇತ ಬೆದರಿಕೆ ಹಾಕಿದ್ದಾರೆ.
"ಈ ಸರ್ಕಾರ ಆಟೋರಿಕ್ಷಾ ಚಾಲಕರ ಜೊತೆ ನಿಲ್ಲದಿದ್ದರೆ ನಾವು ಚುನಾವಣೆ ಬಹಿಷ್ಕರಿಸುತ್ತೇವೆ. ನಾವು ಚುನಾವಣೆಯಲ್ಲಿ ಮತ ಹಾಕುವುದಿಲ್ಲ. ಬೆಂಗಳೂರಿನಲ್ಲಿ ಬೈಕ್ ಟ್ಯಾಕ್ಸಿಗಳನ್ನು ಬ್ಯಾನ್ ಮಾಡುವ ಮೂಲಕ ಆಟೋರಿಕ್ಷಾ ಚಾಲಕರನ್ನು ಉಳಿಸಿ" ಎಂದು ಹಲವು ಆಟೋ ಚಾಲಕರು ಮತ್ತು ಅವರ ಕುಟುಂಬದವರು ವಿಡಿಯೋಗಳನ್ನು ಮಾಡಿ ಸಾಮಾಜಿಕ ಮಾಧ್ಯಮಗಳಲ್ಲಿ ಅಪ್ಲೋಡ್ ಮಾಡಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಸಾರಿಗೆ ಸಚಿವ ಶ್ರೀರಾಮುಲು ಅವರು ಅಕ್ರಮ ಬೈಕ್ ಟ್ಯಾಕ್ಸಿಗಳ ವಿರುದ್ಧ ಕ್ರಮ ಕೈಗೊಳ್ಳಲು ವಿಫಲರಾಗಿದ್ದಾರೆ. ನಾವು ಅವರ ಆಶ್ವಾಸನೆಯನ್ನು ಕೇಳಿ ಸುಮ್ಮನೆ ಕುಳಿತಿದ್ದೇವೆ ಎಂದು ಭಾವಿಸಿರಬಹುದು. ಆದರೆ, ಈ ಬಾರಿ ಚುನಾವಣೆಗೆ ನಾವು ಮತ ಹಾಕುವುದಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.
#Bengaluru | #Autorickshaw drivers are threatening to boycott #KarnatakaAssemblyElection2023 if #biketaxis are not banned. #News9SouthDesk @BLRrocKS @NammaBengaluroo @CitizenKamran @BSBommai @sriramulubjp
— Prajwal D'Souza (@prajwaldza) March 27, 2023
Details 👉https://t.co/diRbAEAG9G pic.twitter.com/xnLKUwZBXL
ಹೊಂಗಸಂದ್ರದಲ್ಲಿ ಆಟೋರಿಕ್ಷಾ ಓಡಿಸುವ ಚಾಲಕ ಮಂಜು ಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. " ನನ್ನ ಕುಟುಂಬದಿಂದ 15 ಮತಗಳು ಮತ್ತು ನನ್ನ ಪತ್ನಿಯ ಕುಟುಂಬದಿಂದ ಸುಮಾರು 15 ಮತಗಳಿವೆ. ಅವರು ಕೂಡ ನನ್ನ ಕುಟುಂಬದವರಾಗಿರುವುದರಿಂದ ನಾನು ಹೇಳುವುದನ್ನು ಅವರೆಲ್ಲಾ ಕೇಳುತ್ತಾರೆ. ಈ ಬಾರಿ ಪ್ರತಿಭಟನೆ ಇನ್ನಷ್ಟು ತೀವ್ರವಾಗಲಿದೆ. ದಯವಿಟ್ಟು ನಮ್ಮ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಿ" ಎಂದು ಎಚ್ಚರಿಕೆ ನೀಡಿದ್ದಾರೆ.
ಬಿಜೆಪಿ ಅಥವಾ ಕಾಂಗ್ರೆಸ್ ಸರ್ಕಾರ ಆಗಿರಲಿ. ಆಟೋರಿಕ್ಷಾ ಚಾಲಕರು ಎದುರಿಸುತ್ತಿರುವ ತೊಂದರೆಗಳನ್ನು ನೀವು ಅರ್ಥಮಾಡಿಕೊಳ್ಳಬೇಕು ಎಂದು ಹಲವರು ಆಟೋ ಚಾಲಕರು ತಮ್ಮ ಕಷ್ಟ ತೊಡಿಕೊಂಡಿದ್ದಾರೆ. ಕಳೆದ ವಾರ, ರಾಪಿಡೋ, ಉಬರ್ ಮತ್ತು ಇತರ ಅಗ್ರಿಗೇಟರ್ಗಳು ನಿರ್ವಹಿಸುವ ಬೈಕ್ ಟ್ಯಾಕ್ಸಿಗಳನ್ನು ನಿಷೇಧಿಸುವಂತೆ ಒತ್ತಾಯಿಸಿ ಬೆಂಗಳೂರಿನಲ್ಲಿ ಹಲವಾರು ಆಟೋರಿಕ್ಷಾ ಚಾಲಕರ ಸಂಘಗಳಿಂದ ಪ್ರತಿಭಟನೆ ನಡೆಸಲಾಗಿತ್ತು.

ಪ್ರತಿಭಟನೆ ನಡೆಸಿದ್ದ ಹಲವಾರು ಆಟೋರಿಕ್ಷಾ ಚಾಲಕರನ್ನು ಬಂಧಿಸಲಾಗಿದೆ. ನಂತರ ಸಂಘದ ಸದಸ್ಯರು ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಅವರನ್ನು ಭೇಟಿ ಮಾಡಿ ತಮ್ಮ ಬೇಡಿಕೆಗಳ ಪಟ್ಟಿಯನ್ನು ಸಲ್ಲಿಸಿದ್ದರು. ಬೆಂಗಳೂರಿನಲ್ಲಿ ವೈಯಕ್ತಿಕ ದ್ವಿಚಕ್ರ ವಾಹನಗಳನ್ನು (ವೈಟ್ ಬೋರ್ಡ್ ಬೈಕ್ಗಳು) ಬೈಕ್ ಟ್ಯಾಕ್ಸಿಗಳಾಗಿ ಬಳಸುವುದನ್ನು ನಿಷೇಧಿಸಬೇಕೆಂದು ಆಟೋ ಚಾಲಕರ ಒಕ್ಕೂಟಗಳು ಒತ್ತಾಯಿಸಿವೆ.
2021 ರಲ್ಲಿ, ಕರ್ನಾಟಕ ಹೈಕೋರ್ಟ್ ರಾಪಿಡೋ ವಿರುದ್ಧ ಯಾವುದೇ ಬಲವಂತದ ಕ್ರಮವನ್ನು ತೆಗೆದುಕೊಳ್ಳದಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತು. ಈ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಮಾರ್ಚ್ 29 ಬುಧವಾರದಂದು ನಡೆಸಲಿದೆ.
ಹೈಕೋರ್ಟ್ ವಿಚಾರಣೆಗೆ ಪ್ರತಿಕ್ರಿಯಿಸಿದ ಆಟೋರಿಕ್ಷಾ ಚಾಲಕ ಮೋನಿಶ್, "ಬೈಕ್ ಟ್ಯಾಕ್ಸಿಗಳು ಆಕ್ರಮಣಕಾರಿ ಹುಳುಗಳಂತಿವೆ. ಬೈಕ್ ಟ್ಯಾಕ್ಸಿಗಳು ನಮ್ಮ ಜೀವನೋಪಾಯದ ಮೇಲೆ ಬೀರುವ ಪರಿಣಾಮದ ಬಗ್ಗೆ ಸರ್ಕಾರ ಅಥವಾ ಸಾರ್ವಜನಿಕರಿಗೆ ತಿಳಿದಿಲ್ಲ. ಮೊದಮೊದಲು ಮಾರ್ಚ್ 24ಕ್ಕೆ ವಿಚಾರಣೆ ಎಂದಿದ್ದರು ಈಗ ಮಾರ್ಚ್ 29ಕ್ಕೆ ಎಂದು ಹೇಳುತ್ತಿದ್ದಾರೆ. ಆದರೆ ನಮ್ಮ ಬಗ್ಗೆ ಯಾರು ಯೋಚಿಸುತ್ತಾರೆ..? ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರುತ್ತಿದೆ. ಸರ್ಕಾರಕ್ಕೆ ಮನವಿ ಸಲ್ಲಿಸಿ ಸುಸ್ತಾಗಿದ್ದೇವೆ' ಎಂದು ಸಂಕಟ ವ್ಯಕ್ತಪಡಿಸಿದ್ದಾರೆ.
(ಮಾಹಿತಿ ಕೃಪೆ- ನ್ಯೂಸ್ ನೈನ್)
-
Gen Z ಪ್ರತಿಭಟನೆಯಲ್ಲಿ 'ಪಾತ್ರ': ಬಲೆನ್ ಪ್ರಮಾಣ ವಚನ ಸ್ವೀಕರಿಸಿದ ಮರುದಿನವೇ ನೇಪಾಳ ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಬಂಧನ -
IPL Tickets: ನಾವು ವಿಐಪಿಗಳು; 5 ಫ್ರೀ ಟಿಕೆಟ್ ಕೊಡಲಿ: ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ











Click it and Unblock the Notifications