Bengaluru Auto Strike: ಬೈಕ್ ಟ್ಯಾಕ್ಸಿ ವಿರುದ್ಧದ ಆಟೋ ಚಾಲಕರ ಮುಷ್ಕರಕ್ಕೆ ಮಿಶ್ರ ಪ್ರತಿಕ್ರಿಯೆ
ಆಟೋ ಮುಷ್ಕರದ ಕಾರಣಕ್ಕೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ನಗರದಲ್ಲಿ ಹೆಚ್ಚುವರಿ ಬಸ್ಗಳನ್ನು ಬಿಟ್ಟಿದೆ.
ಬೆಂಗಳೂರು, ಮಾರ್ಚ್ 20: ಬೆಂಗಳೂರಿನಲ್ಲಿ ಕೆಲವು ಆಟೋ ಸಂಘಟನೆಗಳು ಕರೆ ನೀಡಿರುವ ಆಟೋ ಮುಷ್ಕರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆ ನಿಷೇಧಿಸಬೇಕು ಮತ್ತು ವೈಯಕ್ತಿಕ ದ್ವಿಚಕ್ರ ವಾಹನಗಳನ್ನು ಬೈಕ್ ಟ್ಯಾಕ್ಸಿಯಾಗಿ ಬಳಸುವುದನ್ನು ನಿಷೇಧಿಸಬೇಕು ಎಂದು ಒಕ್ಕೂಟಗಳು ಒತ್ತಾಯಿಸಿವೆ.
ಆಟೋ ಚಾಲಕರ ಮುಷ್ಕರಕ್ಕೆ ಬೆಂಗಳೂರಿನಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಗರದ ಹಲವು ಭಾಗಗಳಲ್ಲಿ ಆಟೋಗಳು ಓಡಾಡುತ್ತಿವೆ. ಕೆಲವು ಆಟೋ ಚಾಲಕರು ಮಾತ್ರ ತಮ್ಮ ವಾಹನಗಳನ್ನು ರಸ್ತೆಗೆ ಇಳಿಸಿಲ್ಲ. ಉಳಿದಂತೆ ಹಲವು ಮಂದಿ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ. ಭಾನುವಾರ ಮಧ್ಯರಾತ್ರಿಯಿಂದ ಆರಂಭವಾಗಿರುವ ಮುಷ್ಕರ ಸೋಮವಾರ ಮಧ್ಯರಾತ್ರಿಗೆ ಕೊನೆಗೊಳ್ಳಲಿದೆ.

ಬೆಂಗಳೂರು ನಗರದಲ್ಲಿ 21 ಆಟೋ ಚಾಲಕರ ಸಂಘಟನೆಗಳಿವೆ. ಸುಮಾರು 2.10 ಲಕ್ಷ ಆಟೋಗಳಿವೆ. ಕೊರೊನಾ ಸಮಯದಲ್ಲಿ ಆಟೋ ಚಾಲಕರು ಭಾರೀ ನಷ್ಟವನ್ನು ಅನುಭವಿಸಿದ್ದು, ಈಗ ಸರ್ಕಾರ ಬೈಕ್ ಟ್ಯಾಕ್ಸಿಗಳಿಗೆ ಅನುಮತಿ ನೀಡಿರುವ ಕಾರಣ ಮತ್ತಷ್ಟು ಸಂಕಷ್ಟಕ್ಕೆ ಒಳಗಾಗಿದ್ದಾರೆ ಎಂಬ ಅಸಮಾಧಾನ ಅಟೋ ಚಾಲಕರದ್ದು. ಇದರ ಜೊತೆಗೆ ಜನರು ತಮ್ಮ ವೈಯಕ್ತಿಕ ದ್ವಿಚಕ್ರ ವಾಹನಗಳನ್ನು ಬೈಕ್ ಟ್ಯಾಕ್ಸಿಯಾಗಿ ಬಳಸುತ್ತಿದ್ದು, ಆಟೋ ಚಾಲಕರ ಅದಾಯಕ್ಕೆ ಮತ್ತಷ್ಟು ಹೊಡೆತ ನೀಡಿದೆ.
ದೇಶದ ದೆಹಲಿ, ಮಹಾರಾಷ್ಟ್ರ, ತೆಲಂಗಾಣ ರಾಜ್ಯಗಳಲ್ಲಿ ಬೈಕ್ ಟ್ಯಾಕ್ಸಿ ನಿಷೇಧಿಸಲಾಗಿದೆ. ಇದೇ ಮಾದರಿಯಲ್ಲಿ ರಾಜ್ಯದಲ್ಲಿಯೂ ಬೈಕ್ ಟ್ಯಾಕ್ಸಿ ಸೇವೆ ನಿಷೇಧಿಸಬೇಕು. ಇನ್ನೇನು ವಿಧಾನಸಭಾ ಚುನಾವಣೆಗೆ ದಿನಾಂಕ ಘೊಷಣೆಯಾಗಲಿದ್ದು, ಅಷ್ಟರಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಬೇಕು ಎಂದು ಆಗ್ರಹಿಸಿ ಬೆಂಗಳೂರು ಆಟೋ ರಿಕ್ಷಾ ಚಾಲಕರ ಸಂಘಟನೆಗಳ ಒಕ್ಕೂಟ ಸೋಮವಾರ ಬೃಹತ್ ಹೋರಾಟ ನಡೆಸುತ್ತಿದೆ.
ಆಟೋ ಮುಷ್ಕರಕ್ಕೆ ಓಲಾ ಆಟೋ ಮತ್ತು ಟ್ಯಾಕ್ಸಿ ಡ್ರೈವರ್ಸ್ ಅಸೋಸಿಯೇಷನ್ ಕೂಡ ಬೆಂಬಲ ನೀಡಿದ್ದು, ಸ್ವಯಂಪ್ರೇರಿತವಾಗಿ ಬಂದ್ಗೆ ಬೆಂಬಲ ನೀಡಲು ಆಟೋ ಚಾಲಕರಿಗೆ ಒತ್ತಾಯಿಸಿದೆ. ಈ ಬಗ್ಗೆ ಸಂಘದ ಅಧ್ಯಕ್ಷ ತನ್ವೀರ್ ಪಾಷಾ ಹೇಳಿಕೆ ನೀಡಿದ್ದು, "ಪ್ರತಿಭಟನೆಗೆ ನಮ್ಮ ಸಂಘಟನೆಯ ಬೆಂಬಲ ಕೂಡ ಇದೆ. ಆದರೆ, ಯಾವ ಚಾಲಕರಿಗೂ ಒತ್ತಾಯ ಮಾಡಲಾಗಿಲ್ಲ. ಸ್ವಯಂ ಪ್ರೇರಿತವಾಗಿ ಬಂದ್ಗೆ ಬೆಂಬಲ ನೀಡಲು ತಿಳಿಸಿದ್ದೇವೆ. ಸರ್ಕಾರ ಅನಧಿಕೃತ ಬೈಕ್ ಟ್ಯಾಕ್ಸಿ ಸೇವೆಯನ್ನು ನಿಲ್ಲಿಸಬೇಕು. ಇಲ್ಲದಿದ್ದರೇ ಲಕ್ಷಾಂತರ ಚಾಲಕರು ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ" ಎಂದಿದ್ದಾರೆ.

ಇನ್ನು, ಆಟೋ ಮುಷ್ಕರದ ಕಾರಣಕ್ಕೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಹೆಚ್ಚುವರಿ ಬಸ್ಗಳನ್ನು ಬಿಟ್ಟಿದೆ. ನಗರದ ಪ್ರಮುಖ ಸ್ಥಳಗಳಿಗೆ ತೆರಳುವ ಪ್ರಯಾಣಿಕರಿಗೆ ತೊಂದರೆಯಾಗಬಾರದು ಎಂದು ಶಿವಾಜಿನಗರ, ಮೆಜೆಸ್ಟಿಕ್, ಕೆ.ಆರ್.ಮಾರುಕಟ್ಟೆ , ಶಾಂತಿನಗರ, ಯಶವಂತಪುರ ನಿಲ್ದಾಣಗಳಿಂದ ಹೆಚ್ಚುವರಿಯಾಗಿ ಬಸ್ಗಳನ್ನು ಹಲವು ಭಾಗಗಳಿಗೆ ನಿಗದಿ ಮಾಡಲಾಗಿದೆ.
ಇನ್ನು, ಕೆಲವು ಭಾಗಗಳಲ್ಲಿ ಆಟೋ ಚಾಲಕರು ಹೆಚ್ಚುವರಿ ಹಣ ವಸೂಲಿ ಮಾಡಿರುವ ಘಟನೆಗಳು ವರದಿಯಾಗಿವೆ. ಮೀಟರ್ ಹಾಕದಿರುವುದು, ಮೀಟರ್ ಮೇಲೆ ಇಷ್ಟು ಕೊಡಿ, ಅಲ್ಲಿಂದ ಖಾಲಿ ಬರಬೇಕು ಎಂದು ಹೆಚ್ಚುವರಿ ಹಣ ಕೇಳುತ್ತಾರೆ ಎಂದು ಆಟೋ ಚಾಲಕರ ಮೇಲೆ ಹಲವು ಆರೋಪಗಳು ಸಾರ್ವಜನಿಕರಿಂದ ಕೇಳಿ ಬರುತ್ತವೆ.
ಆಟೋ ಚಾಲಕರು ನಿಗದಿತ ಮೀಟರ್ ಶುಲ್ಕದಲ್ಲಿ ಟ್ರಿಪ್ಗಳನ್ನು ತೆಗೆದುಕೊಳ್ಳುವತ್ತ ಗಮನಹರಿಸಿದರೆ, ಸಭ್ಯರಾಗಿದ್ದರೆ ಮತ್ತು ಟ್ರಿಪ್ಗಳನ್ನು ನಿರಾಕರಿಸದಿದ್ದರೆ ಅವರಿಗೆ ಇನ್ನು ಹೆಚ್ಚಿನ ಆದಾಯ ಸಿಗುತ್ತದೆ. ಆದರೆ, ಅವರು ಸರಿಯಾಗಿ ಮುಖ ಕೊಟ್ಟು ಮಾತನಾಡುವುದಿಲ್ಲ. ಏರಿದ ಧ್ವನಿಯಲ್ಲಿ ಮಾತನಾಡುತ್ತಾರೆ. ನಿಗದಿತ ಬೆಲೆ , ಮೀಟರ್ ಇಲ್ಲ , ಮೀಟರ್ನ ಮೇಲೆ, ಮೀಟರ್ ಹೆಚ್ಚುವರಿ ದರ, ಡ್ರಾಪಿಂಗ್ ಅಥವಾ ಪಿಕಪ್ ಸ್ಥಳದಲ್ಲಿ ಸುಮ್ಮನೆ ವಾದ ಮಾಡುತ್ತಾರೆ. ಇದು ಓಲಾ/ಉಬರ್/ಬೈಕ್ ಟ್ಯಾಕ್ಸಿಗೆ ಕಾರಣವಾಗಿದೆ. ಇದನ್ನು ಅವರು ಅರ್ಥ ಮಾಡಿಕೊಂಡರೇ ಸಾಕು ಎಂದು ನೆಟ್ಟಿಗರು ಹೇಳುತ್ತಾರೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications