ಕೇಂದ್ರ ಬಜೆಟ್ 2021; ಆಟೋ, ಟ್ಯಾಕ್ಸಿ ಚಾಲಕರ ಉಪವಾಸ
ಬೆಂಗಳೂರು, ಫೆಬ್ರವರಿ 01; ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2021ನೇ ಸಾಲಿನ ಬಜೆಟ್ ಮಂಡನೆ ಮಾಡಲಿದ್ದಾರೆ. ಬಜೆಟ್ ದಿನವೇ ಆಟೋ ಮತ್ತು ಟ್ಯಾಕ್ಸಿ ಚಾಲಕರು ಬೆಂಗಳೂರು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ.
ಸೋಮವಾರ ಸುಮಾರು 10 ಸಾವಿರ ಆಟೋ ಮತ್ತು ಟ್ಯಾಕ್ಸಿ ಚಾಲಕರು ಬೆಂಗಳೂರು ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದ್ದು, ಉಪವಾಸ ಸತ್ಯಾಗ್ರಹವನ್ನು ನಡೆಸಲಿದ್ದಾರೆ. ಕರ್ನಾಟಕ ಚಾಲಕರ ಒಕ್ಕೂಟ ಈ ಬೃಹತ್ ಪ್ರತಿಭಟನೆಗೆ ಕರೆ ನೀಡಿದೆ.

ವಿಮಾನ ನಿಲ್ದಾಣದ ಟ್ಯಾಕ್ಸಿ ಸಂಘ, ಓಲಾ-ಉಬರ್ ಚಾಲಕರ ಸಂಘ, ಟ್ರಾವೆಲ್ಸ್ ಅಸೋಸಿಯೇಷನ್ ಈ ಪ್ರತಿಭಟನೆಗೆ ಬೆಂಬವನ್ನು ನೀಡಿವೆ. ಮೈಸೂರು ಬ್ಯಾಂಕ್ ಸರ್ಕಲ್ನಿಂದ ಫ್ರೀಡಂ ಪಾರ್ಕ್ ತನಕ ಅರೆ ಬೆತ್ತಲೆ ಮೆರವಣಿಗೆಯನ್ನು ನಡೆಸಲಿದ್ದು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಿದ್ದಾರೆ.
ಚಾಲಕರ ಬೇಡಿಕೆಗಳು
* ನಿರ್ದಿಷ್ಟವಾಗಿ ಒಂದೇ ದರ ನಿಗದಿ ಮಾಡುವ ಮೂಲಕ ಅಪ್ಲಿಕೇಶನ್ ಆಧಾರಿತ ಸೇವೆಗಳಿಗಳನ್ನು ನಿಯಂತ್ರಿಸುವುದು.
* ಸರ್ಕಾರ ನಿಗದಿಪಡಿಸಿದ ದರವನ್ನು ಬಿಟ್ಟು ಹೆಚ್ಚು ಅಥವ ಕಡಿಮೆ ದರವನ್ನು ಯಾವುದೇ ಅಪ್ಲಿಕೇಶನ್ ಆಧಾರಿತ ಸೇವೆಗಳಿಗೆ ನೀಡಬಾರದು
* ಖಾಸಗಿ ಫೈನಾನ್ಸ್ಗಳು ಚಾಲಕರಿಗೆ ಕಿರುಕುಳವನ್ನು ನೀಡುತ್ತಿವೆ. ಅವುಗಳನ್ನು ನಿಯಂತ್ರಣ ಮಾಡಲು ಕಾನೂನನ್ನು ಮಾರ್ಪಾಡು ಮಾಡುವುದು
* ಸರ್ಕಾರ ಚಾಲಕರಿಗೆ ನೀಡುವ ವಿಮೆ ಅಪಘಾತಕ್ಕೆ ಮಾತ್ರ ಸೀಮಿತವಾಗಿದೆ. ಹೃದಯಾಘಾತ, ಆಕಸ್ಮಿಕ ಮರಣ ಹೊಂದಿದರೂ ನೀಡಬೇಕು
* ಚಾಲಕರಿಗಾಗಿ ನಿಗಮ/ಮಂಡಳಿ ಸ್ಥಾಪನೆಯನ್ನು ತುರ್ತಾಗಿ ಮಾಡುವುದು
* ಚಾಲಕರ ದಿನಾಚರಣೆಯನ್ನು ಸರ್ಕಾರದ ವತಿಯಿಂದ ಮಾಡಲು ದಿನ ನಿಗದಿ ಮಾಡುವುದು












Click it and Unblock the Notifications