Auto Strike : ಪ್ರಯಾಣಿಕರೇ ಗಮನಿಸಿ: ಮಾರ್ಚ್ 20ಕ್ಕೆ ಮುಷ್ಕರಕ್ಕೆ ಕರೆ ನಿಡಿದ ಆಟೋ ಚಾಲಕರು, ಸೇವೆ ಸ್ಥಗಿತ
'ಭಾನುವಾರ ಮಧ್ಯರಾತ್ರಿಯಿಂದ ಸೋಮವಾರ ಮಧ್ಯರಾತ್ರಿಯವರೆಗೆ ಮುಷ್ಕರ ನಡೆಸುತ್ತೇವೆ. ಈ ಅವಧಿಯಲ್ಲಿ, ಆಟೋರಿಕ್ಷಾ ಸೇವೆಗಳು ನಗರದಲ್ಲಿ ಲಭ್ಯವಿರುವುದಿಲ್ಲ'
ಬೆಂಗಳೂರು, ಮಾರ್ಚ್ 15: ನಗರದಲ್ಲಿ ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಒತ್ತಾಯಿಸಿ ಆಟೋ ಚಾಲಕರ ಸಂಘಟನೆಗಳು ಮಾರ್ಚ್ 20 ರಂದು ಪ್ರತಿಭಟನೆಗೆ ಕರೆ ನೀಡಿರುವುದರಿಂದ ಬೆಂಗಳೂರಿನಲ್ಲಿ ಆಟೋರಿಕ್ಷಾ ಸೇವೆ ಸ್ಥಗಿತಗೊಳ್ಳುವ ಸಾಧ್ಯತೆ ಇದೆ. ಹೀಗಾಗಿ ಆಟೋಗಳ ಮೇಲೆ ಅವಲಂಭಿಸಿರುವವ ಪ್ರಯಾಣಿಕರು ಬೇರೆ ವ್ಯವಸ್ಥೆ ಮಾಡಿಕೊಳ್ಳುವುದು ಒಳಿತು.
ಬೆಂಗಳೂರಿನ ಪ್ರೆಸ್ ಕ್ಲಬ್ನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಆದರ್ಶ ಆಟೋ ಮತ್ತು ಟ್ಯಾಕ್ಸಿ ಚಾಲಕರ ಒಕ್ಕೂಟದ ಅಧ್ಯಕ್ಷ ಎಂ ಮಂಜುನಾಥ್, ರಾಜ್ಯ ಸರ್ಕಾರದ ವಿರುದ್ಧ ಮೂರು ದಿನಗಳ ಧರಣಿ ನಡೆಸುವುದಾಗಿ ಘೋಷಿಸಿದ್ದಾರೆ. ''ನಗರದಲ್ಲಿ ಅಕ್ರಮ ಬೈಕ್ ಟ್ಯಾಕ್ಸಿಗಳ ಓಡಾಟಕ್ಕೆ ಸಾರಿಗೆ ಇಲಾಖೆ ಅನುಮತಿ ನೀಡಿದೆ. ಆಟೋರಿಕ್ಷಾ ಚಾಲಕರ ಜೀವನೋಪಾಯಕ್ಕೆ ಧಕ್ಕೆಯಾಗುತ್ತಿದೆ. ಸಾರಿಗೆ ಸಚಿವರೂ ಈ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಾರೆ" ಎಂದು ಹೇಳಿದ್ದಾರೆ.

"ಬೈಕ್ ಟ್ಯಾಕ್ಸಿಗಳನ್ನು ಓಡಿಸಲು ಅಗ್ರಿಗೇಟರ್ಗಳಿಗೆ ನೀಡಿರುವ ಅನುಮತಿಯನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕು. ನಾವು ನಾಳೆ ಆಟೋರಿಕ್ಷಾಗಳಿಗೆ ಕಪ್ಪು ಬಾವುಟಗಳನ್ನು ಕಟ್ಟಿ ಮೂರು ದಿನಗಳ ಪ್ರತಿಭಟನೆಯನ್ನು ಪ್ರಾರಂಭಿಸುತ್ತೇವೆ. ಸರ್ಕಾರಕ್ಕೆ ಮೂರು ದಿನಗಳ ಗಡುವು ನೀಡುತ್ತಿದ್ದೇವೆ. ಭಾನುವಾರ ಮಧ್ಯರಾತ್ರಿಯಿಂದ ಸೋಮವಾರ ಮಧ್ಯರಾತ್ರಿಯವರೆಗೆ ಮುಷ್ಕರ ನಡೆಸುತ್ತೇವೆ" ಎಂದು ಮಾಹಿತಿ ನೀಡಿದ್ದಾರೆ.
'ಭಾನುವಾರ ಮಧ್ಯರಾತ್ರಿಯಿಂದ ಸೋಮವಾರ ಮಧ್ಯರಾತ್ರಿಯ ಈ ಅವಧಿಯಲ್ಲಿ, ಆಟೋರಿಕ್ಷಾ ಸೇವೆಗಳು ನಗರದಲ್ಲಿ ಲಭ್ಯವಿರುವುದಿಲ್ಲ. ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಸೋಮವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಸಂಘಗಳು ಯೋಜಿಸಿವೆ" ಎಂದು ಆದರ್ಶ ಆಟೋ ಮತ್ತು ಟ್ಯಾಕ್ಸಿ ಚಾಲಕರ ಒಕ್ಕೂಟದ ಅಧ್ಯಕ್ಷ ಎಂ ಮಂಜುನಾಥ್ ಹೇಳಿದ್ದಾರೆ.

ಬೆಂಗಳೂರು ಆಟೋ ಚಾಲಕರ ಸಂಘಟನೆಗಳ ಒಕ್ಕೂಟದ ಅಡಿಯಲ್ಲಿ ಸುಮಾರು 21 ಒಕ್ಕೂಟಗಳು ಪ್ರತಿಭಟನೆಯಲ್ಲಿ ಭಾಗವಹಿಸಲಿವೆ. ಸೋಮವಾರ ಮುಷ್ಕರದ ವೇಳೆ ಬೆಂಗಳೂರಿನಲ್ಲಿ ಸುಮಾರು 2.1 ಲಕ್ಷ ಆಟೋರಿಕ್ಷಾಗಳು ಸೇವೆಯಿಂದ ಹೊರಗುಳಿಯುವ ನಿರೀಕ್ಷೆಯಿದೆ. ಹೀಗಾಗಿ ಪ್ರಯಾಣಿಕರು ಬೇರೆ ವ್ಯವಸ್ಥೆಯನ್ನು ಮಾಡಿಕೊಳ್ಳಬೇಕಾಗುತ್ತದೆ.
-
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ?












Click it and Unblock the Notifications