BBMP e-Khata: ಗ್ರಾಮ ಪಂಚಾಯಿತಿಯ 2500 ಸತ್ತುಗಳಿಗೆ ಬಿಬಿಎಂಪಿ ಇ-ಖಾತಾ ರಚನೆ
ಬೆಂಗಳೂರು, ಸೆಪ್ಟಂಬರ್ 13: ಬೆಂಗಳೂರು ವ್ಯಾಪ್ತಿಯಲ್ಲಿನ ಗ್ರಾಮ ಪಂಚಾಯಿತಿಯನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಯೊಂದಿಗೆ ವಿಲೀನಗೊಳಿಸುವ ಮೊದಲು ಪಂಚಾಯಿತಿಯಿಂದ ಇ-ಖಾತಾ ಹೊಂದಿದ್ದ ಆಸ್ತಿಗಳಿಗೆ ಇದೀಗ ಬಿಬಿಎಂಪಿಯು ಸ್ವಯಂಚಾಲಿತ ಇ-ಖಾತಾ ರಚನೆ ಮಾಡಿದೆ. ಇದನ್ನು ಪಡೆಯುವಂತೆ ಆಸ್ತಿ ಮಾಲೀಕರಿಗೆ ಕೋರಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ರಾಜರಾಜೇಶ್ವರಿ ನಗರ ವಲಯ ಯಶವಂತಪುರ ವಿಧಾನಸಭಾ ಕ್ಷೇತ್ರದ ಹೆಮ್ಮಿಗೆಪುರ ವಾರ್ಡ್ ವ್ಯಾಪ್ತಿಯ ಇ-ಸ್ವತ್ತು ತಂತ್ರಾಂಶದಿಂದ ಹಳೆಯ ಗ್ರಾಮ ಪಂಚಾಯಿತಿಯ ಇ-ಖಾತಾ ಹೊಂದಿರುವ ಆಸ್ತಿಗಳಿಗೆ ಸ್ವಯಂಚಾಲಿತವಾಗಿ ಬಿಬಿಎಂಪಿ ಇ-ಖಾತಾ ಪಡೆಯಬಹುದು. ಈ ಕುರಿತು ಬಿಬಿಎಂಪಿ ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ಅಧಿಕೃತ ಮಾಹಿತಿ ನೀಡಿದ್ದಾರೆ.

2500 ಸ್ವತ್ತುಗಳಿಗೆ ಪಾಲಿಕೆಯಿಂದ ಇ-ಖಾತಾ
ಬಿಬಿಎಂಪಿಯೊಂದಿಗೆ ವಿಲೀನಗೊಳಿಸುವ ಮೊದಲು ಗ್ರಾಮ ಪಂಚಾಯಿತಿಯಿಂದ ಇ-ಖಾತಾ ಹೊಂದಿದ್ದ ಮಲ್ಲಸಂದ್ರ ಮತ್ತು ಕಾವಲ್ ಗ್ರಾಮಗಳಲ್ಲಿನ ಸುಮಾರು 2500 ಸ್ವತ್ತುಗಳಿದ್ದವು. ಅವುಗಲಿಗೆ ಬಿಬಿಎಂಪಿಯು ಸ್ವಯಂಚಾಲಿತವಾಗಿ ಎಸ್.ಎ.ಎಸ್. ಆಸ್ತಿತೆರಿಗೆ ಅರ್ಜಿ ಸಂಖ್ಯೆಗಳು ಮತ್ತು ಬಿಬಿಎಂಪಿ ಇ-ಖಾತಾಗಳನ್ನು ರಚನೆ ಮಾಡಿದೆ. ಈ ಮಲ್ಲಸಂದ್ರ ಮತ್ತು ಕಾವಲ್ ಗ್ರಾಮಗಳ ಆಸ್ತಿ ಮಾಲೀಕರು ಪಾಲಿಕೆ ಇ-ಖಾತಾ ಪಡೆಯಬಹುದಾಗಿದೆ.
ಸದರಿ ಗ್ರಾಮಗಳ ಸ್ವತ್ತುಗಳಿಗೆ ಪಂಚಾಯಿತಿ ವತಿಯಿಂದ ಈಗಾಗಲೇ ನೀಡಿರುವ ಇ-ಸ್ವತ್ತು (ಇ-ಖಾತಾ) ಸಂಖ್ಯೆಯನ್ನು ಬಳಸಿಕೊಂಡು ತಮ್ಮ ಸ್ವತ್ತಿನ ಆಸ್ತಿತೆರಿಗೆಯ ಎಸ್.ಎ.ಎಸ್. ಅರ್ಜಿ ಸಂಖ್ಯೆಯನ್ನು ಹುಡುಕಿಕೊಂಡು ಪಾಲಿಕೆಯ ಆಸ್ತಿತೆರಿಗೆಯನ್ನು ಪಾವತಿಸಲು ಅವಕಾಶ ನೀಡಲಾಗಿದೆ ಎಂದು ತಿಳಿಸಿದರು.

ಒಮ್ಮೆ ನೀವು ಪ್ರಸ್ತುತ ಸಾಲಿನವರೆಗಿನ ಆಸ್ತಿ ತೆರಿಗೆಯನ್ನು ಪಾವತಿಸಿದ ನಂತರ ತಾವು ಬಿಬಿಎಂಪಿಯಿಂದ ಇ-ಖಾತಾವನ್ನು ಪಡೆಯಬಹುದಾಗಿರುತ್ತದೆ. ಒಂದು ಬಾರಿ ಪರಿಹಾರ ಯೋಜನೆ ಅಡಿಯಲ್ಲಿ ನೀವು ಸಂಪೂರ್ಣ ಬಡ್ಡಿ ಮನ್ನಾವನ್ನು ಪಡೆಯುತ್ತೀರಿ ಎಂದು ಅವರು ವಿವರಿಸಿದರು.
ಹೊಸಬರು ಇ-ಖಾತಾ ಹೇಗೆ ಪಡೆಯಬೇಕು
ಇ-ಖಾತಾ ರಚನೆಯ ಮಾಹಿತಿಯನ್ನು ನೀವು ಅಕ್ಕಪಕ್ಕದವರಿಗೂ ತಿಳಿಸಬೇಕು. ಪ್ರತಿಯೊಬ್ಬರಿಗೂ ಈ ಮಾಹಿತಿ ಆಧರಿಸಿಪ್ರಸ್ತುತ ಸಾಲಿನವರೆಗೆ ಆಸ್ತಿ ತೆರಿಗೆಯನ್ನು (bbmptax.karnataka.gov.in) ಪಾವತಿಸುವ ಮೂಲಕ ತಮ್ಮ ಬಿಬಿಎಂಪಿ ಇ-ಖಾತಾವನ್ನು ಸ್ವಯಂಚಾಲಿತವಾಗಿ ಪಡೆದುಕೊಳ್ಳಬಹುದಾಗಿದೆ.
ಒಂದು ವೇಳೆ ಸದರಿ ಪಟ್ಟಿಯಲ್ಲಿ ಸ್ವತ್ತುಗಳು ಇಲ್ಲದಿರುವವರು ಹೊಸ ಇ-ಖಾತಾಗೆ ಅರ್ಜಿ ಸಲ್ಲಿಸಬೇಕಾಗುತ್ತದೆ. ಸದರಿ ಅರ್ಜಿಯನ್ನು ತ್ವರಿತಗತಿಯಲ್ಲಿ ವಿಲೇಮಾಡಿ ಇ-ಖಾತಾವನ್ನು ನೀಡಲಾಗುತ್ತದೆ. ಇದರೊಂದಿಗೆ ಆಸ್ತಿ ತೆರಿಗೆ ಪಾವತಿಸಬೇಕಾದವರು, ಶೀಘ್ರವೇ ಪಾವತಿಸಿ, ಇ-ಖಾತಾ ಕುರಿತು ಖಚಿತತೆ ಪಡೆದುಕೊಳ್ಳಬೇಕು ಎಂದು ಅವರು ತಿಳಿಸಿದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications