ಕಂಟೋನ್ಮೆಂಟ್ ನಿಂದ ವೈಟ್ ಫೀಲ್ಡ್ ವರೆಗೆ ಆಟೋ ಸಿಗ್ನಲಿಂಗ್
ಬೆಂಗಳೂರು, ಜನವರಿ 05 : ಹೆಚ್ಚು ರೈಲು ಸಂಚಾರಕ್ಕೆ ಅನುಕೂಲವಾಗಲು ಕಂಟೋನ್ಮೆಂಟ್ ನಿಂದ ವೈಟ್ ಫೀಲ್ಡ್ ರೈಲು ನಿಲ್ದಾಣದವರೆಗೆ ಸ್ವಯಂ ಚಾಲಿತ ಸಿಗ್ನಲಿಂಗ್ ವ್ಯವಸ್ಥೆ ಅನುಷ್ಠಾನಗೊಳಿಸಲಾಗುವುದು ಇದರ ಪೂರ್ಣ ವರದಿಯನ್ನು ರೈಲ್ವೆ ಸುರಕ್ಷತಾ ಆಯುಕ್ತರ ಒಪ್ಪಿಗೆಗಾಗಿ ಕಳುಹಿಸಲಾಗಿದೆ ಎಂದು ನೈಋತ್ಯ ರೈಲ್ವೆ ಬೆಂಗಳೂರು ವಿಭಾಗ ತಿಳಿಸಿದೆ.
ಬೈಯಪ್ಪನಹಳ್ಳಿ-ವೈಟ್ ಫೀಲ್ಡ್ ಮೆಟ್ರೋ ಕಾಮಗಾರಿ ಪ್ರಾರಂಭವಾಗಿದೆ. ಈ ಹಿನ್ನೆಲೆಯಲ್ಲಿ ಟ್ರಾಫಿಕ್ ಸಮಸ್ಯೆ ಪರಿಹಾರಕ್ಕೆ ಕಂಟೋನ್ಮೆಂಟ್, ಬೈಯ್ಯಪ್ಪನಹಳ್ಳಿಯಿಂದ ಹೆಚ್ಚು ರೈಲು ಸೇವೆ ಆರಂಭಿಸಬೇಕು ಎಂದು ಬೆಂಗಳೂರು ವಿಭಾಗಕ್ಕೆ ವೈಟ್ ಫೀಲ್ಡ್ ರೈಸಿಂಗ್ ಸಂಘಟನೆ ಮನವಿ ಸಲ್ಲಿಸಿತ್ತು.
ಅದಕ್ಕೆ ಲಿಖಿತವಾಗಿ ಉತ್ತರಿಸಿರುವ ವಿಭಾಗ, 15.06 ಕೋಟಿ ರೂ. ವೆಚ್ಚದಲ್ಲಿ ಕಂಟೋನ್ಮೆಂಟ್-ವೈಟ್ ಫೀಲ್ಡ್ ನಡುವೆ ಆಟೋಮ್ಯಾಟಿಕ್ ಸಿಗ್ನಲಿಂಗ್ ಅನುಷ್ಠಾನಕ್ಕೆ ಮಂಜೂರಾತಿ ದೊರೆತಿದೆ. ಕಾಮಗಾರಿ ಒಪ್ಪಿಗೆ ಪಡೆಯಲು ಈ ಯೋಜನಾ ವರದಿಯನ್ನು ರೈಲ್ವೆ ಸುರಕ್ಷತಾ ಅಯುಕ್ತರಿಗೆ ಕಳುಹಿಸಿಕೊಲಾಗಿದೆ.

ಅದರಲ್ಲಿ ಕೊಂಚ ಬದಲಾವಣೆಯನ್ನು ಅಯುಕ್ತರು ಸೂಚಿಸಿದ್ದು, ಒಪ್ಪಿಗೆ ದೊರೆತ ತಕ್ಷಣವೇ ಕಾಮಗಾರಿ ಪ್ರಾರಂಭಿಸಲಾಗುತ್ತದೆ ಎಂದು ತಿಳಿಸಿದೆ. ಮಾರ್ಚ್ ಒಳಗೆ ಪ್ಲಾಟ್ ಫಾರ್ಮ್ ವಿಸ್ತರಣೆ: ಬೈಯಪ್ಪನಹಳ್ಳಿಯ 1 ಮತ್ತು 2ನೇ ಪ್ಲಾಟ್ ಫಾರಂ ವಿಸ್ತರಣಾ ಕಾಮಗಾರಿ ಪ್ರಾರಂವಾಗಿದ್ದು, ಮಾರ್ಚ್ ಒಳಗೆ ಪೂರ್ಣಗೊಳ್ಳಲಿದೆ.
ಈ ಮಾರ್ಗದಲ್ಲಿ ಸಂಚರಿಸುವ ಕೆಲ ರೈಲುಗಳಿಗೆ ಬೈಯಪ್ಪನಹಳ್ಳಿಯಲ್ಲಿ ನಿಲುಗಡೆ ನೀಡಲು ಸಾದ್ಯವಾಗುತ್ತಿಲ್ಲ. ಇಂತಹ ರೈಲುಗಳಲ್ಲಿ ೨೪ ಬೋಗಿಗಳಿದ್ದು, ಬೈಯಪ್ಪನಹಳ್ಳಿ ನಿಲ್ದಾಣದ ಪ್ಲಾಟ್ ಫಾರಂಗಳು ಇದಕ್ಕೆ ಪೂರಕವಾಗಿಲ್ಲ ಎಂದು ತಿಳಿಸಿವೆ.
-
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
Gold: ದುಬೈಯಿಂದ ಭಾರತಕ್ಕೆ ಚಿನ್ನದ ಪೂರೈಕೆ ಪುನರಾರಂಭ; ಗ್ರಾಹಕರ ನಿರ್ಧಾರದಿಂದ ಬೆದರಿದ ವ್ಯಾಪಾರಿಗಳು -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ












Click it and Unblock the Notifications