ಅವಿನಾಶ್ ಯಾರು? ಪ್ರಭಾವಿ ವ್ಯಕ್ತಿಗಳು ರಕ್ಷಣೆಗೆ ನಿಂತಿದ್ದೇಕೆ?
ಬೆಂಗಳೂರು, ಜು.24: ಬೌರಿಂಗ್ ಇನ್ಸ್ಟಿಟ್ಯೂಟ್ ಕ್ಲಬ್ ಲಾಕರ್ ಪ್ರಕರಣಕ್ಕೆ ಮತ್ತಷ್ಟು ತಿರುವು ಸಿಕ್ಕಿದೆ. ಅವಿನಾಶ್ ಅಮರ್ಲಾಲ್ ಕುಕ್ರೇಜಾ ಲಾಕರ್ನಲ್ಲಿ ಪತ್ತೆಯಾದ ಆಸ್ತಿಪತ್ರ ಪ್ರಮಾಣದ ಮೊತ್ತ ಈ ಮುಂದೆ 550 ಕೋಟಿಯಲ್ಲ 800 ಕೋಟಿಗೂ ಅಧಿಕವೆನ್ನುವ ಮಾಹಿತಿ ಲಭ್ಯವಾಗಿದೆ.
ಬೆಂಗಳೂರಿನ ಬೌರಿಂಗ್ ಕ್ಲಬ್ ಮೇಲೆ ಶನಿವಾರ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು, ಅಲ್ಲಿ ಅವಿನಾಶ್ ಕುಕ್ರೇಜಾ ಅವರಿಗೆ ಸಂಬಂಧಿಸಿದ್ದ ಲಾಕರ್ನಲ್ಲಿ 800 ಕೋಟಿಗೂ ಅಧಿಕ ಮೊತ್ತದ ಆಸ್ತಿಪತ್ರಗಳು, ಹಣ, ಆಭರಣಗಳು ದೊರೆತಿದ್ದವು.
ಮತ್ತೊಂದೆಡೆ ಲಾಕರ್ ರಹಸ್ಯದ ಹಿಂದೆ ಪ್ರಮುಖ ರಾಜಕೀಯ ಪಕ್ಷಗಳ ಮುಖಂಡರ ಕುಟುಂಬಸ್ಥರ ಹೆಸರೂ ಕೂಡ ಕೇಳಿಬರುತ್ತಿದೆ. ಕೆಲವರು ಅವಿನಾಶ್ ರಕ್ಷಣೆಗೆ ಒತ್ತಡ ಹಾಕುತ್ತಿದ್ದಾರೆ ಎನ್ನುವ ಮಾತುಗಳೂ ಕೇಳಿಬರುತ್ತಿದೆ. ಆಸ್ತಿಪತ್ರದಲ್ಲಿ ಕೆಲ ಪ್ರಭಾವಿ ರಾಜಕಾರಣಿಗಳು, ಅವರ ಮಕ್ಕಳ ಹಾಗೂ ಸಂಬಂಧಿಕರ ಹೆಸರು ಉಲ್ಲೇಖವಾಗಿದೆ.
ಅವಿನಾಶ್ನ ಯಾರು, ವೃತ್ತಿ ಏನು? ಅವಿನಾಶ್ ಹೆಸರಿಗೆ ಮಾತ್ರ ಟಯರ್ ಅಂಗಡಿ ಇಟ್ಟುಕೊಂಡಿದ್ದು, ರಿಯಲ್ ಎಸ್ಟೇಟ್ ಉದ್ಯಮ ಮತ್ತು ಬಡ್ಡಿಗೆ ಸಾಲ ನೀಡುತ್ತಿದ್ದರು ಎನ್ನಲಾಗಿದೆ. ಬೌರಿಂಗ್ ಕ್ಲಬ್ ಲಾಕರ್ ರಹಸ್ಯ ಬಯಲಾಗುತ್ತಿದ್ದಂತೆ ನಗರದಲ್ಲಿರುವ ಇತರೆ ಕೆಲ ಪ್ರತಿಷ್ಠಿತ ಕ್ಲಬ್ಗಳ ಆಡಳಿತ ಮಂಡಳಿಗಳೂ ಎಚ್ಚೆತ್ತುಕೊಂಡಿದ್ದು, ಲಾಕರ್ಗಳನ್ನು ಪರಿಶೀಲಿಸಲು ಮುಂದಾಗಿದೆ ಎಂದು ತಿಳಿದುಬಂದಿದೆ.

ಸಮನ್ಸ್ ನೀಡಿದರೂ ಬರಲಿಲ್ಲ: ವಿಚಾರಣೆಗೆ ಹಾಜರಾಗುವಂತೆ ಅವಿನಾಶ್ಗೆ ಐಟಿ ಅಧಿಕಾರಿಗಳು ಸಮನ್ಸ್ ನೀಡಿದ್ದರೂ ವಿಚಾರಣೆ ಹಾಜರಾಗಲಿಲ್ಲ. ವಶಪಡಿಸಿಕೊಂಡ ಆಸ್ತಿ ಪತ್ರಗಳನ್ನು ತನಿಖಾಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದು, ಆಸ್ತಿಪತ್ರದಲ್ಲಿ ಉಲ್ಲೇಖಿಸಿರುವ ವ್ಯಕ್ತಿಗಳನ್ನು ವಿಚಾರಣೆ ಮಾಡಲು ಮುಂದಾಗಿದ್ದಾರೆ.

ಅವಿನಾಶ್ ಅವರ ಸದಸ್ಯತ್ವದಿಂದ ವಜಾಗೊಳಿಸಲು ಸಾಧ್ಯವಿಲ್ಲ ಏಕೆಂದರೆ ಅವರದ್ದು ಯಾಕೆಂದರೆ ಲೈಫ್ಟೈಂ ಮೆಂಬರ್ಶಿಪ್ ಹಾಗಾಗಿ ಅವರನ್ನು ವಜಾಗೊಳಿಸಲು ಸಾಧ್ಯವಿಲ್ಲ ಎಂದು ಕ್ಲಬ್ ಅಧಿಕಾರಿಗಳು ಹೇಳುತ್ತಿದ್ದಾರೆ.
-
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate March 23: ಚಿನ್ನ - ಬೆಳ್ಳಿ ದರ ಭಾರೀ ಕುಸಿತ: ಒಂದೇ ದಿನದಲ್ಲಿ ಶೇ. 4% ಇಳಿಕೆ, ಬಂಗಾರ ಪ್ರಿಯರಿಗೆ ಸಿಹಿ ಸುದ್ದಿ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
ದುಬೈಗೂ ಮೊದಲೇ ನಟಿ ರನ್ಯಾ ರಾವ್ಗೆ ಉಗಾಂಡಾ ಏಜೆಂಟ್ ಕೋಟ್ಯಂತರ ರೂಪಾಯಿ ವಂಚನೆ: ಚಾರ್ಜ್ಶೀಟ್ನಲ್ಲಿ ಸ್ಫೋಟಕ ಮಾಹಿತಿ -
Money Saving Vastu Tips: ವಾಸ್ತು ಪ್ರಕಾರ ಹಣ ಉಳಿಯುತ್ತಿಲ್ಲವೇ? ಈ ಸರಳ ಉಪಾಯಗಳನ್ನು ಅನುಸರಿಸಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು










Click it and Unblock the Notifications