ಅವಿರತದಿಂದ ನಕ್ಕುನಗಿಸುವ ಶ್ರೀಕೃಷ್ಣ ಸಂಧಾನ ನಾಟಕ
ಭಾಷಾಶುದ್ಧಿ ಇಲ್ಲದಿದ್ದರೆ, 'ಅ'ಕಾರ 'ಹ'ಕಾರದ ವ್ಯತ್ಯಾಸ ಗೊತ್ತಿಲ್ಲದಿದ್ದರೆ, ಪೌರಾಣಿಕ ನಾಟಕ ಹೇಗೆ ಆಭಾಸವಾಗುತ್ತದೆ ಎಂದು ತೋರಿಸುವ ಅಪ್ಪಟ ಹಾಸ್ಯ ಕನ್ನಡ ನಾಟಕ 'ಶ್ರೀಕೃಷ್ಣ ಸಂಧಾನ'. ನಾಟಕಕಾರ ವಿಎನ್ ಅಶ್ವತ್ಥ್ ಅವರು ರಚಿಸಿರುವ ಈ ನಾಟಕ ದಶಕಗಳ ಹಿಂದೆ ದೂರದರ್ಶನದಲ್ಲಿ ಪ್ರಸಾರವಾಗಿದ್ದಾಗ ವೀಕ್ಷಕರನ್ನು ಎದ್ದುಬಿದ್ದು ನಗುವಂತೆ ಮಾಡಿತ್ತು.
ಈಗ ಇದೇ ಹಾಸ್ಯ ನಾಟಕವನ್ನು, ವರ್ಷದುದ್ದಕ್ಕೂ ನಾನಾ ಬಗೆಯ ಕಾರ್ಯಕ್ರಮಗಳ ಮೂಲಕ ಕನ್ನಡದ ವಾತಾವರಣವನ್ನು ಹಸಿರಾಗಿಡಲು ಬದ್ಧರಾದ 'ಅವಿರತ' ಸಂಸ್ಥೆಯ ಕಟ್ಟಾಳುಗಳು, ತಾವೇ ಬಣ್ಣ ಹಚ್ಚಿಕೊಂಡು ನೋಡುಗರನ್ನು ನಗೆಗಡಲಲ್ಲಿ ತೇಲಾಡಿಸಲು ಸಿದ್ಧರಾಗಿದ್ದಾರೆ.
ಈ ಪ್ರದರ್ಶನದ ವಿಶೇಷತೆಯೆಂದರೆ, ಈ ನಾಟಕದಲ್ಲಿ ನಟಿಸುತ್ತಿರುವ ಬಹುತೇಕ ಮಂದಿ ಐಟಿಬಿಟಿನಲ್ಲಿ ಕೆಲಸ ಮಾಡುತ್ತಿರುವುದು. ಬಹುಶಃ ನಾಟಕದ ತಾಲೀಮನ್ನು ಟೆಲಿಫೋನ್ ಕಾನ್ಫೆರೆನ್ಸ್ ಮೂಲಕ ಮಾಡಿದ ಮೊದಲ ನಾಟಕ ಇದೇ ಇರಬೇಕು ಎಂಬ ಅನುಮಾನವಿದೆ. ಈ ನಾಟಕದಿಂದ ಬಂದ ಹಣವನ್ನು ಸರ್ಕಾರಿ ಶಾಲಾ ಮಕ್ಕಳಿಗಾಗಿ ಉಪಯೋಗಿಸುತ್ತಿರುವುದು ಮತ್ತೊಂದು ವಿಶೇಷ. [ತಬ್ಲಾ ನಾಣಿ ಬದುಕಿಗೆ ತಿರುವು ನೀಡಿದ ನಾಟಕ ಶ್ರೀಕೃಷ್ಣ ಸಂಧಾನ]

ಬೆಂಗಳೂರಿನ ಬಸವೇಶ್ವರನಗರದ ಕರ್ನಾಟಕ ಎಂಜಿನಿಯರ್ಸ್ ಅಕಾಡೆಮಿಯ ಪ್ರಭಾತ್ ರಂಗಮಂದಿರದಲ್ಲಿ, 2016ರ ಫೆಬ್ರವರಿ 21, ಭಾನುವಾರ ಸಂಜೆ 5ಕ್ಕೆ ಈ ನಾಟಕ ಪ್ರದರ್ಶನ ಕಾಣಲಿದೆ. ಈ ನಾಟಕದ ತಿರುಳನ್ನು ಬಲ್ಲ ಪ್ರೇಕ್ಷಕರು ಟಿಕೇಟುಗಳನ್ನು ಮುಗಿಬಿದ್ದು ಕೊಂಡಿದ್ದಾರೆ. 200 ರು.ಗಳ ಎಲ್ಲ ಟಿಕೇಟ್ ಗಳು ಸೋಲ್ಡ್ ಔಟ್! ಟಿಕೇಟ್ ಸಿಗದವರು ಮತ್ತೊಂದು ಪ್ರದರ್ಶನಕ್ಕೆ ಕಾಯಬೇಕು.
ಅವಿರತ ಕುರಿತು : 'ಅವಿರತ' ತಂಡವು ತಾಯ್ನಾಡು ಹಾಗೂ ಮಾನವೀಯತೆಗಾಗಿ ಸತತವಾಗಿ ದುಡಿಯುವ ಅದಮ್ಯ ಉತ್ಸಾಹದ ಯುವಪಡೆ ಮತ್ತು ಸಾಮಾಜಿಕ ಕಳಕಳಿಯುಳ್ಳ ಉತ್ಸಾಹಿಗಳ ತಂಡ. 'ಅವಿರತ'ದಿಂದ ಹಲವಾರು ನಾಟಕ, ಕಲಾತ್ಮಕ ಚಿತ್ರಗಳ ವಿಶೇಷ ಪ್ರದರ್ಶನ, ಸಂಗೀತ ಸಂಜೆ ಹೀಗೆ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಆಯೋಜಿಸಲಾಗಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications