ಮಾದಕ ವ್ಯಸನಿಗಳಾಗಬೇಡಿ, ಆರೋಗ್ಯವಂತರಾಗಿ:ಪರಮೇಶ್ವರ್
Recommended Video

ಬೆಂಗಳೂರು, ಜೂನ್ 26: ಆರೋಗ್ಯಕರ ಜೀವನ ನಡೆಸಬೇಕಾದರೆ ಮಾದಕ ಸೇವನೆಯನ್ನು ತ್ಯಜಿಸಬೇಕು, ಮಾದಕ ವಸ್ತುಗಳ ಬಳಕೆಯನ್ನು ನಿಯಂತ್ರಣಕ್ಕೆ ತರಬೇಕು ಈ ಬಗ್ಗೆ ಶಾಲಾ ಕಾಲೇಜುಗಳಲ್ಲಿ ಅರಿವು ಮೂಡಿಸುವ ಅಗತ್ಯವಿದೆ ಎಂದು ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಮಾದಕ ವಸ್ತು ವಿರೋಧಿ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಅಂತಾರಾಷ್ಟ್ರೀಯ ಮಾದಕ ವಸ್ತುಗಳ ವಿರೋಧಿ ದಿನವನ್ನು ಜನರಲ್ಲಿ ಅರಿವು ಮೂಡಿಸುವ ಮೂಲಕ ಆಚರಿಸಬೇಕು. ಇಡೀ ವಿಶ್ವದಲ್ಲಿ ಮಾದಕ ವಸ್ತುಗಳನ್ನು ಕಾನೂನು ಬಾಹಿರವಾಗಿ ಬಳಕೆ ಮಾಡುತ್ತಿದ್ದಾರೆ. ಇದು ಅಪರಾಧವಾಗಿದ್ದು ಅವರಿಗೆ ಶಿಕ್ಷೆಯಾಗಲಿದೆ ಎಂದರು.
ಯುವಜನ, ಮಕ್ಕಳು ಮಾದಕ ವ್ಯಸನಿಗಳಾಗುತ್ತಿದ್ದು, ತಮ್ಮ ಸುಂದರ ಜೀವನವನ್ನೇ ಬಲಿಕೊಡುತ್ತಿದ್ದಾರೆ. ಇದರಿಂದ ಅವರ ಇಡೀ ಕುಟುಂಬ ಕೂಡ ನೋವಿನಲ್ಲಿ ನರಳುವಂತೆ ಮಾಡುತ್ತಿದ್ದಾರೆ. ಕೆಲವೇ ನಿಮಿಷದ ಸುಖಕ್ಕಾಗಿ ಇಡೀ ಜೀವನವನ್ನು ಹಾಳು ಮಾಡಿಕೊಳ್ಳುವ ಕೆಲಸಕ್ಕೆ ಯುವಕರು ಮುಂದಾಗಬಾರದು ಎಂದು ಕಿವಿಮಾತು ಹೇಳಿದ್ದಾರೆ.

ಶಾಲಾ ಕಾಲೇಜುಗಳಲ್ಲಿ ಕಾನೂನು ಬಾಹಿರವಾಗಿ ಯಾರಾದರೂ ಮಾದಕ ವಸ್ತುಗಳ ಮಾರಾಟದಲ್ಲಿ ತೊಡಗಿದ್ದರೆ ಅಂಥವರ ಬಗ್ಗೆ ಸಾರ್ವಜನಿಕರು ದೂರು ನೀಡಲಿ. ಇದರಿಂದ ಯುವಕರ ಭವಿಷ್ಯ ಹಾಳಾಗುವುದನ್ನು ತಡೆಯುವುದರ ಜತೆಗೆ , ಆರೋಪಿಗಳಿಗೆ ಶಿಕ್ಷೆಯಾಗಲಿದೆ.
ನೇರ ಬಂದು ದೂರು ನೀಡಲು ಸಾಧ್ಯವಾಗದಿದ್ದರೆ ನಗರ ಸಂಚಾರ ಪೊಲೀಸರು ತೆರೆದಿರುವ 1908 ಟೋಲ್ ಫ್ರೀ ಸಂಖ್ಯೆಗೆ ಕರೆ ಮಾಡಿ, ಮಾಹಿತಿ ನೀಡಬಹುದು ಎಂದರು.
ಪ್ರತಿ ವರ್ಷ ಮಾದಕ ವಸ್ತು ವಿರೋಧಿ ದಿನವನ್ನು ಕೇವಲ ಆಚರಿಸಿ ಸುಮ್ಮನಾದರೆ ಯಾವುದೇ ಪ್ರಯೋಜನವಾಗುವುದಿಲ್ಲ. ಈ ಬಗ್ಗೆ ದೊಡ್ಡ ಮಟ್ಟದಲ್ಲಿ ಜಾಗೃತಿ ಮೂಡಿಸುವ ಆಂದೋಲನವಾಗಬೇಕು. ಯಾರೂ ಕೂಡ ಮಾದಕ ವ್ಯಸನಿಗಳಾಗದಂತೆ ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲರೂ ಕೈ ಜೋಡಿಸಬೇಕು ಎಂದು ಸಲಹೆ ನೀಡಿದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
CBSE ಶಾಲೆಗಳಲ್ಲಿ ಋತುಚಕ್ರ ನೈರ್ಮಲ್ಯ ಕಡ್ಡಾಯ: ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ಹೊಸ ನಿಯಮ ಜಾರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್












Click it and Unblock the Notifications