ಬೇಸಿಗೆ ರಜೆ ಬಂತು ಅಂತ ಪ್ರವಾಸ ಹೋಗುವ ಮುನ್ನ ಇರಲಿ ಎಚ್ಚರ- ಬೆಂಗಳೂರು ಪೊಲೀಸ್ ಸಲಹೆ
ಬೆಂಗಳೂರು ಏಪ್ರಿಲ್ 9: ಬೇಸಿಗೆ ಬಂತು ಅಂತ ಪ್ರವಾಸಕ್ಕೆ ಹೋಗುವ ಮುನ್ನ ಮನೆ ಮಾಲೀಕರು ಎಚ್ಚರದಿಂದ ಇರಬೇಕು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತರು ಸಲಹೆ ನೀಡಿದ್ದಾರೆ. ಇದೀಗ ಮಕ್ಕಳಿಗೆ ಬೇಸಿಗೆ ಕಾಲದ ರಜೆಗಳು ಆರಂಭವಾಗಿವೆ. ಇದರಿಂದಾಗಿ ಪ್ರವಾಸಕ್ಕೆ ಹೋಗುವವರ ಸಂಖ್ಯೆ ಈ ಸಮಯದಲ್ಲಿ ಹೆಚ್ಚಾಗಿರುತ್ತದೆ. ಇದೇ ಸಮಯವನ್ನಿಟ್ಟುಕೊಂಡು ಕಳ್ಳರು ತಮ್ಮ ಕೈಚಳಕ ತೋರಿಸುತ್ತಾರೆ. ಹೀಗಾಗಿ ಇಂತಹ ಘಟನೆಗಳನ್ನು ತಡೆಯಲು ಮುಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ತಿಳಿಸಿದ್ದಾರೆ.
ಹೌದು ಇದೀಗ ಮಕ್ಕಳಿಗೆ ಬೇಸಿಗೆ ಕಾಲದ ರಜೆ ಶುರುವಾಗಿವೆ. ಈ ದಿನಗಳಲ್ಲಿ ಪೋಷಕರು ಮಕ್ಕಳೊಂದಿಗೆ ಪ್ರವಾಸ ಅಥವಾ ಸಂಬಂಧಿಕರ ಮನೆಗಳಿಗೆ ತೆರಳುವುದು ಹೆಚ್ಚು. ಈ ಸಮಯದಲ್ಲಿ ಕಳ್ಳತನದ ಪ್ರಕರಣಗಳು ಹೆಚ್ಚಾಗಿ ನಡೆಯುತ್ತವೆ. ಹೀಗಾಗಿ ಮನೆ ಮಾಲೀಕರು ಕೆಲ ಮುಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವುದು ಸೂಕ್ತ ಎಂದು ಬಿ ದಯಾನಂದ್ ಅವರು ಹೇಳಿದ್ದಾರೆ.

ಒಂದಕ್ಕಿಂತ ಹೆಚ್ಚು ದಿನ ಮನೆಯಲ್ಲಿ ಇಲ್ಲದೇ ಇದ್ದರೆ, ಮನೆಯ ಬಾಗಿಲನ್ನು ಭದ್ರವಾಗಿ ಮುಚ್ಚುವುದು ಮಾತ್ರವಲ್ಲದೆ ಮನೆಯ ಕಿಟಕಿಗಳನ್ನು ಭದ್ರವಾಗಿ ಮುಚ್ಚಿ. ಅಲ್ಲದೆ ಮನೆಯ ಅಕ್ಕಪಕ್ಕದ ವಿಶ್ವಾಸವಿರುವ ಜನರಿಗೆ ನೀವು ಮನೆಯಲ್ಲಿ ಇಲ್ಲದೇ ಇರುವುದನ್ನು ತಿಳಿಸಿರಿ. ಮನೆಗೆ ಗಟ್ಟಿಯಾದ ಬೀಗವನ್ನು ಹಾಕುವುದು ಒಳ್ಳೆಯದು.
ಮುಖ್ಯವಾಗಿ ಒಂದಕ್ಕಿಂತ ಹೆಚ್ಚು ದಿನ ಪ್ರವಾಸಕ್ಕೆ ಹೋಗುವವರು ಮನೆಯಲ್ಲಿ ಚಿನ್ನಾಭರಣಗಳನ್ನು ಹಾಗೂ ಹೆಚ್ಚು ಹಣವನ್ನು ಇಡಬಾರದು ಎಂದಿದ್ದಾರೆ. ಮನೆಯಲ್ಲಿ ಬೆಲೆಬಾಳುವ ಚಿನ್ನಾಭರಣಗಳು ಹಾಗೂ ಹೆಚ್ಚು ಹಣ ಇದ್ದರೆ ಬ್ಯಾಂಕ್ ಖಾತೆಗಳಲ್ಲಿ ಅದನ್ನು ಭದ್ರವಾಗಿ ಇಡಿ. ಸಾಧ್ಯವಾದರೆ ಮನೆಗೆ ಸಿಸಿಟಿವಿ ಕ್ಯಾಮರಾವನ್ನು ಅಳವಡಿಸಿ ಎಂದು ಸಲಹೆ ನೀಡಿದ್ದಾರೆ.
ಜೊತೆಗೆ ಮನೆಯ ಬೀಗವನ್ನು ಮನೆಯ ಪಕ್ಕದಲ್ಲಿ, ಶೂಗಳಲ್ಲಿ, ಇನ್ನಿತರ ಯಾವುದೇ ಸ್ಥಳದಲ್ಲಿ ಇಟ್ಟು ಹೊರ ಹೋಗುವ ಅಭ್ಯಾಸವನ್ನು ರೂಢಿಸಿಕೊಳ್ಳಬೇಡಿ. ಒಂದು ವೇಳೆ ಒಂದಕ್ಕಿಂತ ಹೆಚ್ಚು ದಿನ ಮನೆಯಲ್ಲಿ ಇರುವುದಿಲ್ಲ ಅಂತಾದರೆ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿ ಹೋಗುವುದು ಸುರಕ್ಷಿತ. ಇದರಿಂದ ಆ ಸ್ಥಳದಲ್ಲಿ ಪೊಲೀಸರಿಗೆ ಗಸ್ತು ನಡೆಸುವುದು ಸುಲಭವಾಗುತ್ತದೆ ಎಂದು ಬಿ ದಯಾನಂದ್ ಹೇಳಿದ್ದಾರೆ.
ಅಲ್ಲದೆ ಕಳ್ಳರು ಮನೆಯಿಂದ ಹೊರಗಡೆ ಮಾತ್ರ ಇರುವುದಿಲ್ಲ. ಮನೆಯಲ್ಲೂ ಇರುತ್ತಾರೆ. ಮನೆ ಕೆಲಸವರಂತೆ ನಿಮ್ಮ ಮನೆ ಕೆಲಸಕ್ಕೆ ಸೇರಿಕೊಳ್ಳಬಹುದು. ಅವರಿಂದ ಹಣ ಚಿನ್ನಾಭರಣಗಳನ್ನು ದೂರವಿಡಿ. ಅವರನ್ನು ಎಲ್ಲಂದರಲ್ಲಿ ಓಡಾಡಲು ಬಿಡಬೇಡಿ. ಅವರಿಗೆ ಕಾಣುವಂತೆ ಚಿನ್ನಾಭರಣ ಹಾಗೂ ಹಣವನ್ನು ಇಡಬಾರದು. ಇಂತಹ ಸಣ್ಣ ಅಜಾಗರೂಕತೆಯಿಂದ ಕಷ್ಟಪಟ್ಟು ದುಡಿದ ಹಣವನ್ನು ನೀವು ಕಳೆದುಕೊಳ್ಳಬಹುದು ಎಂದು ಬಿ ದಯಾನಂದ್ ಅವರು ಎಚ್ಚರಿಕೆ ನೀಡಿದ್ದಾರೆ.
ಇನ್ನೂ ಬೇಸಿಗೆ ರಜೆ ಆರಂಭವಾಗುವುದಕ್ಕಿಂತ ಮುಂಚೆ ಬೆಂಗಳೂರಿನಲ್ಲಿ ಕಳ್ಳತನದ ಪ್ರಕರಣಗಳು ಹೆಚ್ಚಾಗುತ್ತಿವೆ. ಇದರಿಂದಾಗಿ ಜನ ಜಾಗರೂಕತೆಯಿಂದ ನಡೆದುಕೊಳ್ಳಬೇಕು ಎಂದಿದ್ದಾರೆ. ಇತ್ತೀಚೆಗೆ ಹಲವೆಡೆ ನೇಪಾಳಿ ಗ್ಯಾಂಗ್ ಸಕ್ರಿಯವಾಗಿತ್ತು. ನೇಪಾಳಿ ಗ್ಯಾಂಗ್ ಅನ್ನು ಇದೀಗ ಅರೆಸ್ಟ್ ಮಾಡಲಾಗಿದೆ. ಬೇಸಿಗೆ ರಜೆಯ ಸಂದರ್ಭದಲ್ಲಿ ಇಂತಹ ಗ್ಯಾಂಗ್ಗಳು ಹೆಚ್ಚು ಸಕ್ರಿಯವಾಗುವ ಸಾಧ್ಯತೆ ಇರುತ್ತದೆ. ಹೀಗಾಗಿ ಮನೆ ಬಿಟ್ಟು ಹೋಗುವಾಗ ವಿಶೇಷವಾಗಿ ಒಂದಕ್ಕಿಂತ ಹೆಚ್ಚು ದಿನಗಳವರೆಗೆ ಪ್ರವಾಸ ಹೋಗುವವರು ಜಾಗರೂಕರಾಗಿರಬೇಕು ಎಂದು ಸಲಹೆ ನೀಡಲಾಗಿದೆ.
-
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ












Click it and Unblock the Notifications