Get Updates
Get notified of breaking news, exclusive insights, and must-see stories!

B- Khata: ಬಿ - ಖಾತಾದಿಂದ ಎ - ಖಾತಾ ಪರಿವರ್ತನೆ: ಡಿಸಿಎಂ ಡಿ.ಕೆ ಶಿವಕುಮಾರ್ ಲೆಕ್ಕಾಚಾರ ತಲೆಕೆಳಗೆ!

B- Khata: ಬೆಂಗಳೂರು ಹಾಗೂ ಕರ್ನಾಟಕದಲ್ಲಿ ಭಾರೀ ಸದ್ದು ಮಾಡಲಿದೆ. ಅಲ್ಲದೇ ಇದರಿಂದ ಕೋಟ್ಯಾಂತರ ರೂಪಾಯಿ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಲಾಭವಾಗಲಿದೆ ಎನ್ನುವ ಲೆಕ್ಕಾಚಾರಗಳು ಬಿ- ಖಾತಾ ಹಾಗೂ ಇ - ಖಾತಾದಲ್ಲಿ ತೆಲೆಕೆಳಗಿದೆ. ಮುಖ್ಯವಾಗಿ ಬಿ - ಖಾತಾದ ಆಸ್ತಿದಾರರು ಎ - ಖಾತಾಗೆ ಪರಿವರ್ತನೆ ಮಾಡಿಕೊಳ್ಳಲಿದ್ದಾರೆ ಎಂದು ಲೆಕ್ಕಾಚಾರವಾಗಿತ್ತು. ಆದರೆ ಈ ವಿಚಾರದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರ ಲೆಕ್ಕಾಚಾರಗಳು ತೆಲೆಕೆಳಗಾಗಿವೆ. ಅದರ ಕಂಪ್ಲೀಟ್ ಡೀಟೆಲ್ಸ್‌ ಇಲ್ಲಿದೆ.

ಬೆಂಗಳೂರು ಸೇರಿದಂತೆ ಕರ್ನಾಟಕದಲ್ಲಿ ಅಂದಾಜು 30ರಿಂದ 40 ಲಕ್ಷಕ್ಕೂ ಹೆಚ್ಚು ಬಿ - ಖಾತಾ ಆಸ್ತಿಗಳಿದ್ದು, ಈ ಆಸ್ತಿಗಳ ಆಸ್ತಿದಾರರು ಬಿ ಖಾತಾಗೆ ತಮ್ಮ ಆಸ್ತಿಯನ್ನು ಪರಿವರ್ತನೆ ಮಾಡಿಕೊಳ್ಳಲಿದ್ದಾರೆ ಎಂದು ಅಂದಾಜಿಸಲಾಗಿತ್ತು. ಆದರೆ, ಇದರಲ್ಲಿ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರ ಲೆಕ್ಕಾಚಾರ ಪೂರ್ತಿ ಉಲ್ಟಾ ಹೊಡೆದಿದೆ.

ಆಸ್ತಿದಾರರು ತಮ್ಮ ಆಸ್ತಿಯನ್ನು ಬಿ - ಖಾತಾ ದಿಂದ ಎ - ಖಾತಾ ಪರಿವರ್ತನೆ ಮಾಡಿಕೊಳ್ಳುವುದಕ್ಕೆ ನಿರಾಸಕ್ತಿ ತೋರಿಸಿದ್ದಾರೆ. ಬೆಂಗಳೂರಿನಲ್ಲಿ ಲಕ್ಷ ಲಕ್ಷ ಬಿ ಖಾತಾ ಆಸ್ತಿಗಳಿದ್ದು, ಈ ಖಾತಾಗಳನ್ನು ಎ ಖಾತಾಗಳಿಗೆ ಪರಿವರ್ತನೆ ಮಾಡಿಕೊಂಡರೆ ರಾಜ್ಯ ಸರ್ಕಾರಕ್ಕೂ ಕೋಟ್ಯಾಂತರ ರೂಪಾಯಿ ಆದಾಯ ಬರಲಿದೆ. ಅಲ್ಲದೇ ಅರ್ಜಿಗಳ ಸಲ್ಲಿಕೆ ಹಾಗೂ ವಿಲೇವಾರಿಯಿಂದಲೂ ಆದಾಯ ಬರಲಿದೆ ಎಂದು ನಿರೀಕ್ಷಿಸಲಾಗಿತ್ತು.

ಇನ್ನು ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಮಾಡಿಕೊಂಡರೆ ರಿಯಲ್ ಎಸ್ಟೇಟ್ ಬೂಸ್ಟ್‌ ಆಗಲಿದೆ. ರಿಯಲ್ ಎಸ್ಟೇಟ್ ಬೂಸ್ಟ್‌ನಿಂದ ಆಸ್ತಿಗಳ ಬೆಲೆ ಭರ್ಜರಿ ಹೆಚ್ಚಳವಾಗಲಿದೆ ಎಂದು ನಿರೀಕ್ಷೆ ಮಾಡಲಾಗಿತ್ತು. ಆದರೆ ಇದೀಗ ಆ ಲೆಕ್ಕಾಚಾರಗಳು ಸಂಪೂರ್ಣವಾಗಿ ತೆಲೆಕೆಳಗಾಗಿದೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿರುವ ಐದು ಪಾಲಿಕೆಗಳ ವ್ಯಾಪ್ತಿಯಲ್ಲೂ ಬಿ - ಖಾತಾದಿಂದ ಎ- ಖಾತಾ ಪರಿವರ್ತನೆಗೆ ಸಂಪೂರ್ಣ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೇಂದ್ರ ನಗರ ಪಾಲಿಕೆಯಲ್ಲಿ ಕೇವಲ 5 ಅರ್ಜಿಗಳು ಬಿ - ಖಾತಾದಿಂದ ಎ - ಖಾತಾ ಪರಿವರ್ತನೆಗೆ ಸಲ್ಲಿಕೆಯಾಗಿವೆ. ಇನ್ನುಳಿದ ನಾಲ್ಕು ಪಾಲಿಕೆಗಳಲ್ಲಿ ಈ ಖಾತಾ ಪರಿವರ್ತನೆಗೆ ಸಂಬಂಧಿಸಿದಂತೆ ಅರ್ಜಿ ಸಲ್ಲಿಕೆ ಆಗುತ್ತಿಲ್ಲ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬಿ ಖಾತಾ ಇರುವ ಆಸ್ತಿದಾರರಿಗೆ ನಗರಾಭಿವೃದ್ಧಿ ಇಲಾಖೆಯು ಭರ್ಜರಿ ಗುಡ್‌ನ್ಯೂಸ್ ಕೊಟ್ಟಿತ್ತು. ಬಿ ಖಾತಾದಿಂದ ಎ ಖಾತಾಗೆ ಪರಿವರ್ತನೆಗೆ ಅವಕಾಶ ಮಾಡಿಕೊಡಲಾಗಿದ್ದು, 5% ಮಾರ್ಗಸೂಚಿ ದರ ಕಟ್ಟಿ ಎ ಖಾತಾ ಪಡೆಯಲು ಅವಕಾಶ ಇದೆ. ಆದರೆ, ಡಿ.ಕೆ ಶಿವಕುಮಾರ್ ಅವರ ಮಹತ್ವಕಾಂಕ್ಷೆಯ ಎ ಖಾತಾ ಪರಿವರ್ತನೆ ಪ್ಲ್ಯಾನ್‌ಗೆ ಆಸ್ತಿದಾರರು ಕ್ಯಾರೇ ಎನ್ನುತ್ತಿಲ್ಲ ಎನ್ನುವ ಮಾತು ಕೇಳಿ ಬಂದಿದೆ. ಇದಕ್ಕೆ ಮುಖ್ಯ ಕಾರಣ ಪರಿವರ್ತನೆಗೆ ಲಕ್ಷ ಲಕ್ಷ ರೂಪಾಯಿ ಖರ್ಚಾಗುವ ಸಾಧ್ಯತೆ ಇರುವುದು ಸಹ ಒಂದಾಗಿದೆ ಎಂದು ಹೇಳಲಾಗುತ್ತಿದೆ.

ಬಿ ಖಾತಾ ಆದಾಯ ನಿರೀಕ್ಷೆ: ಇನ್ನು ಕರ್ನಾಟಕ ಕಾಂಗ್ರೆಸ್ ಸರ್ಕಾರವು ಈ ಯೋಜನೆಯಿಂದ ಭಾರೀ ಆದಾಯ ಗಳಿಸಲಿದೆ ಎಂದು ನಿರೀಕ್ಷೆ ಮಾಡಿತ್ತು. ಆದರೆ ರಾಜ್ಯ ಸರ್ಕಾರದ ಆ ನಿರೀಕ್ಷೆಗಳು ತಲೆಕೆಳಗಾಗಿವೆ.

ಇನ್ನು ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಅವರು ಬಿ ಖಾತಾದ ವಿಚಾರದಲ್ಲಿ ನೀಡಿದ ಒಂದೇ ಒಂದು ಹೇಳಿಕೆಯಿಂದ ಡಿ.ಕೆ ಶಿವಕುಮಾರ್‌ ಅವರ ಲೆಕ್ಕಾಚಾರಗಳು ತಲೆಕೆಳಗಾಗಿವೆ ಎಂದು ಹೇಳಲಾಗುತ್ತಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+