A Kahta: ಬಿ ಖಾತಾ ಸ್ವತ್ತುಗಳಿಗೆ ಎ ಖಾತಾ ವಿತರಣೆಗೆ ಮಾರ್ಗಸೂಚಿ ಬಿಡುಗಡೆ: ಆಸ್ತಿ ಮಾಲೀಕರು ಗಮನಿಸಿ
ಬೆಂಗಳೂರು: ಬೆಂಗಳೂರು ನಗರ ಪ್ರದೇಶಗಳಲ್ಲಿ ಅನಿಯಂತ್ರಿತವಾಗಿ ಬೆಳೆಯುತ್ತಿರುವ ಅನಧಿಕೃತ ಬಡಾವಣೆಗಳ ನಿಯಂತ್ರಣಕ್ಕಾಗಿ ಹಾಗೂ ನಾಗರಿಕರ ಹಿತ ಕಾಯಲು ಬಿ-ಖಾತಾಗಳಿಗೆ ಷರತ್ತಿನಡಿ ಎ-ಖಾತಾ ನೀಡಲು ಸರ್ಕಾರ ಮುಂದಾಗಿದೆ. ಈ ಸಂಬಂಧ ಇದೀಗ ಅಧಿಕೃತ ಆದೇಶ ನೀಡಿ ಮಾರ್ಗಸೂಚಿಗಳನ್ನು ಪ್ರಕಟಿಸಲಾಗಿದೆ. ಈ ಹಿಂದೆ ಬಿ-ಖಾತಾದಿಂದ ಎ-ಖಾತಾ ಪರಿವರ್ತನೆಗೆ ಚಾಲನೆ ನೀಡಿದ್ದ ಸರ್ಕಾರವು ಇದೀಗ ನಿವೇಶನದಾರರಿಗೆ ಸಿಹಿ ಸುದ್ದಿ ನೀಡಿದೆ.
ಸಕ್ಷಮ ಪ್ರಾಧಿಕಾರ ಅಥವಾ ಸಂಸ್ಥೆಗಳಿಂದ ಅನುಮತಿ ಇಲ್ಲದೇ ಅನಧೀಕೃತವಾಗಿ ನಿರ್ಮಿಸಿದ ಬಡಾವಣೆಗಳಲ್ಲಿನ ನಿವೇಶನಗಳಿಗೆ ಮತ್ತು ಕಟ್ಟಡಗಳ ಮಾಲೀಕರಿಗೆ ಈ ಆದೇಶ ಅನ್ವಯಿಸುತ್ತದೆ. ಇಂತಹ ಬಿ-ಖಾತಾ ಹೊಂದಿರುವ ಸ್ವತ್ತುಗಳ ಮಾಲೀಕರಿಗೆ ಷರತ್ತು ಅನ್ವಯ ಎ- ಖಾತಾಗೆ ರಾಜ್ಯ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದ ಆದೇಶಿಸಿದೆ.

ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಧಾರದ ಬಳಿಕ ಇದೀಗ ಮಾರ್ಗಸೂಚಿ ಹೊರಡಿಸಿದೆ. ಅನುಮತಿ ಇಲ್ಲದೇ ನಿರ್ಮಾಣವಾದ ಬಡಾವಣೆಗಳಲ್ಲಿನ ನಿವೇಶಗಳು, ಆಸ್ತಿಗಳ ಪರಭಾರೆ ವೇಳೆ ಸಾಕಷ್ಟು ತೊಂದರೆ ಆಗುತ್ತಿತ್ತು. ಹೀಗಾಗಿ ಅವುಗಳನ್ನು ಕಾನೂನು ಚೌಕಟ್ಟಿಗೆ ತರಲು, ಇಂತಹ ಅನಧಿಕೃತ ಕಟ್ಟಡಗಳಿಗೆ ಬ್ರೇಕ್ ಹಾಕುವ ಉದ್ದೇಶದಿಂದ ಎ-ಖಾತಾ ವಿತರಣೆಗೆ ಮುಂದಾಗಿದೆ. ಇದರಿಂದ ಸ್ಥಳೀಯ ಸಂಸ್ಥೆಗಳ ಆದಾಯವು ವೃದ್ಧಿಯಾಗುತ್ತದೆ. ಆಸ್ತಿಗಳ ಪರಭಾರೆ, ನಿವೇಶನ ದಾಖಲೆ ಪತ್ರಗಳಲ್ಲಿ ಪಾರದರ್ಶಕತೆ ಹಾಗೂ ಕಾನೂನು ವ್ಯಾಪ್ತಿಗೆ ತಂದಂತಾಗುತ್ತದೆ.
ಖಾಲಿ ನಿವೇಶನ, ಈಗಾಗಲೇ ತಲೆತ್ತಿರುವ ಕಟ್ಟಡಗಳು ಹಾಗೂ ಅಪಾರ್ಟ್ಮೆಂಟ್ಗಳ ಮಾಲೀಕರು ಎ-ಖಾತಾ ಪಡೆಯಲು ಕೆಲವು ಕಡ್ಡಾಯ ಪ್ರಕ್ರಿಯೆ ಪೂರ್ಣಗೊಳಿಸಬೇಕಾಗುತ್ತದೆ. ನೇರವಾಗಿ ಎ ಖಾತಾ ನೀಡಿದಂತಾಗುತ್ತದೆ. ಈ ಆಸ್ತಿಗಳು ಇರುವ ಜಾಗಕ್ಕೆ ಸಾರ್ವಜನಿಕ ರಸ್ತೆಯ ಸಂಪರ್ಕ ಇರಬೇಕು. ಒಂದು ವೇಳೆ ಖಾಸಗಿ ರಸ್ತೆಯಾಗಿದ್ದರೆ ನಿಯಮಗಳಡಿ ಅದನ್ನು ಕಾಯ್ದೆಗಳಡಿ 'ಸಾರ್ವಜನಿಕ ರಸ್ತೆ' ಎಂದು ಘೋಷಿಸಿಸುವುದು ಕಡ್ಡಾಯವಾಗಿದೆ.
ವಿನ್ಯಾಸದ ಅನುಮೋದನೆ ಕಡ್ಡಾಯ
ಕೃಷಿ ಜಮೀನನ್ನು ವಸತಿ ಅಥವಾ ವಾಣಿಜ್ಯ ಉದ್ದೇಶಕ್ಕೆ (ಕೃಷಿಯೇತರ) ಬಳಸಲು ಭೂಪರಿವರ್ತನೆ ಅಗತ್ಯವಾಗಿದೆ. ಇದಕ್ಕಾಗಿ ಕರ್ನಾಟಕ ಭೂಕಂದಾಯ ಕಾಯ್ದೆಯಡಿ ನಿಗದಿತ ಶುಲ್ಕ ಪಾವತಿಸಿ ಅನುಮತಿ ಪಡೆಯಬೇಕು. ಒಂದು ವೇಳೆ ಜಮೀನು ನಗರದ ಮಾಸ್ಟರ್ ಪ್ಲಾನ್ ವ್ಯಾಪ್ತಿಯಲ್ಲಿದ್ದರೆ, ಜಿಲ್ಲಾಧಿಕಾರಿಗಳ ಅನುಮತಿ ಬೇಕಿಲ್ಲ. ಆದರೆ ಸಂಬಂಧಪಟ್ಟ ಅಭಿವೃದ್ಧಿ ಸಕ್ಷಮ ಪ್ರಾಧಿಕಾರಕ್ಕೆ ಶುಲ್ಕ ಕಟ್ಟಿ ವಿನ್ಯಾಸದ ಅನುಮೋದನೆ ಪಡೆಯುವುದು ಕಡ್ಡಾಯವಾಗಿದೆ.
ಸರ್ಕಾರ ಆದೇಶದಲ್ಲಿ ತಿಳಿಸಿರುವಂತೆ, 2024ರ ಸೆಪ್ಟೆಂಬರ್ 10ಕ್ಕೂ ಮುನ್ನ ನೋಂದಾಣಿ ಪತ್ರಗಳ ಮುಖೇನ ಮಾರಾಟ ಮಾಡಲಾದ ಹಾಗೂ ಉಪ ವಿಭಾಗ ಮಾಡಲಾದ ನಿವೇಶನಗಳು ಎ ಖಾತೆ ಪಡೆಯಲು ಇದೇ ಈ ಮಾರ್ಗಸೂಚಿ ಕಡ್ಡಾಯವಾಗಿದೆ. ವಿನ್ಯಾಸ ಅನಜಮೋದನೆ ಪಡೆದ ಬಳಿಕ ಕರ್ನಾಟಕ ಪೌರಸಭೆಗಳ ಕಾಯ್ದೆ 1964 ಮತ್ತು ಕರ್ನಾಟಕ ಪೌರ ನಿಗಮಗಳ ಕಾಯ್ದೆ 1976 ರ ವಿವಿಧ ಕಲಂ ಅಡಿಯಲ್ಲಿ ಅಧಿಕೃತ 'ಎ ಖಾತಾ' ಪಡೆಯಬಹುದಾಗಿದೆ.
ಖಾತಾ ಸಿಗದೇ ನಾಗರಿಕರಿಗೆ ತೊಂದರೆ
ಸರ್ಕಾರ ಇತ್ತೀಚೆಗೆ ಖಾತಾ ಯೋಜನೆಗಳನ್ನು ಘೋಷಿಸಿದೆ. ಬೆಂಗಳೂರಿನಿಂದ ಗ್ರಾಮೀಣ ಭಾಗದವರೆಗೂ ಎ-ಖಾತಾ, ಇ-ಖಾತಾ ವಿತರಣೆ ಯೋಜನೆ ವಿಸ್ತರಣೆ ಮಾಡಿದೆ. ಆದರೆ ಹೆಮ್ಮಿಗೆಪುರ ಸೇರಿದಂತೆ ಬೆಂಗಳೂರು ಹಾಗೂ ರಾಜ್ಯ ಇತರ ಭಾಗಗಳಲ್ಲಿ ಸಕಾಲಕ್ಕೆ ಅಂದರೆ ನಿಗದಿತ 45 ದಿನಗಳ ಒಳಗೆ ಖಾತಾ ವಿತರಣೆ ಆಗುತ್ತಿಲ್ಲ ಎಂಬ ದೂರುಗಳು ಕೇಳಿ ಬಂದಿವೆ.
-
Horoscope March 4: ಈ ರಾಶಿಯವರಿಗೆ ವೃತ್ತಿಯಲ್ಲಿ ಸುಧಾರಣೆ, ಆರೋಗ್ಯ ಕಾಳಜಿ ಮುಖ್ಯ, ದಿನ ಭವಿಷ್ಯ ಇಲ್ಲಿದೆ -
Toxic release postponed: ಯಶ್ ಅಭಿಮಾನಿಗಳಿಗೆ ಆಘಾತ: "ಟಾಕ್ಸಿಕ್" ಸಿನಿಮಾ ಬಿಡುಗಡೆ ದಿಢೀರ್ ಮುಂದೂಡಿಕೆ -
ಕರ್ನಾಟಕ ವಿದ್ಯುತ್ ನಿಗಮ ಬೆಳಕಿನ ಸಂಸ್ಥೆಗೆ ಕತ್ತಲೆಯ ಛಾಯೆ: ಸರ್ಕಾರಿ ನಿರ್ಲಕ್ಷದ ಒಳನೋಟ -
Bengaluru: ‘92 ಲಕ್ಷದ ಪ್ಯಾಕೇಜ್ ಇದ್ದರೂ ಉಳಿಯಲಿಲ್ಲ ಕೆಲಸ’; ಒಂದೇ ದಿನ ಶೇ. 40ರಷ್ಟು ಸಿಬ್ಬಂದಿ ವಜಾ ಮಾಡಿದ ಐಟಿ ಕಂಪನಿ -
Karna Serial: "ಕರ್ಣ" ಧಾರಾವಾಹಿಯಿಂದ ಹೊರಬಂದ ಟಿ.ಎಸ್.ನಾಗಾಭರಣ, ಹಿರಿಯ ನಟ ಅಭಿಜಿತ್ ಎಂಟ್ರಿ -
Gold Rate: ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಹೀಗಿದೆ, ನಿಮ್ಮ ನಗರದ ದರ ಪರಿಶೀಲಿಸಿ -
'ವಂತಾರ'ಕ್ಕೆ ಒಂದು ವರ್ಷ: ಆರೋಗ್ಯ ಸುಧಾರಿಸಿದ ಅನೇಕ ಪ್ರಾಣಿಗಳು ಮರಳಿ ಕಾಡಿಗೆ -
Elnaaz Norouzi: ಭಾರತದಲ್ಲೇ ನೆಲೆಸಿದ್ದಾರೆ ಇರಾನ್ ಸುಂದರಿ, ಮತ್ತೆ ಅಲ್ಲಿಗೆ ಕಾಲಿಟ್ಟರೆ ನನ್ನ ಕೊಲ್ತಾರೆ ಎಂದ ನಟಿ ಎಲ್ನಾಜ್ -
South India: ದಕ್ಷಿಣ ಭಾರತದಲ್ಲಿ ಪ್ರಾದೇಶಿಕ ಪಕ್ಷಗಳ ಪ್ರಭಾವ: ತಮಿಳುನಾಡು ಮುನ್ನಡೆ, ಕರ್ನಾಟಕದಲ್ಲಿ ಏಕೆ ಹಿನ್ನಡೆ -
Middle East War: ಗಲ್ಫ್ ದೇಶಗಳಿಗೆ ರಫ್ತು ಸ್ಥಗಿತ; ರಾಜ್ಯದಲ್ಲೇ ಉಳಿದ ತರಕಾರಿ, ಮೊಟ್ಟೆ, ಹಾಲಿನ ಉತ್ಪನ್ನ- ರೈತರು ಕಂಗಾಲು -
Bengaluru: ಗೊರಗುಂಟೆಪಾಳ್ಯದ ಟ್ರಾಫಿಕ್ಗೆ ಸಿಗಲಿದ್ಯಾ ಮುಕ್ತಿ? ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು 'ಸುರಂಗ ರಸ್ತೆ' ಪ್ರಸ್ತಾಪ -
Rama Navami 2026: ಶ್ರೀರಾಮನವಮಿ ದಿನಾಂಕ, ಮುಹೂರ್ತ, ಮಹತ್ವ, ಪೂಜಾ ವಿಧಾನ ಸೇರಿ ಸಂಪೂರ್ಣ ವಿವರ












Click it and Unblock the Notifications