"A-Khata: ಬಿ-ಖಾತಾದಿಂದ ಎ-ಖಾತಾ ಪರಿವರ್ತನೆ: ಲೂಟಿಗೆ ಸರ್ಕಾರದ ಹೊಸ ಯೋಜನೆ?''

ಬೆಂಗಳೂರು, ಅಕ್ಟೋಬರ್ 16: ಕರ್ನಾಟಕ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಕನ್ನಡಿಗರ ಜೇಬಿಗೆ ಕತ್ತರಿ ಹಾಕಿ ಲೂಟಿ ಹೊಡೆಯಲು ಒಂದಲ್ಲ ಒಂದು ಅಡ್ಡದಾರಿ ಹುಡುಕುತ್ತಲೇ ಬಂದಿದೆ. ಇದೀಗ ಜಿಬಿಎ ವ್ಯಾಪ್ತಿಯಲ್ಲಿ ಆಸ್ತಿ ಮಾಲೀಕರಿಗೆ ಬಿ-ಖಾತಾದಿಂದ ಎ-ಖಾತಾ ಪರಿವರ್ತನೆ ಹೆಸರಿನಲ್ಲಿ ಮತ್ತೊಮ್ಮೆ ಹಗಲು ದರೋಡೆ ಮಾಡಲು ಹೊರಟಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದರು.

ಕರ್ನಾಟಕ ರಾಜ್ಯ ಸರ್ಕಾರವು ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಬಿ-ಖಾತಾ ನಿವೇಶನ ಮಾಲೀಕರಿಗೆ ಬಿ-ಖಾತಾದಿಂದ ಎ-ಖಾತಾಗೆ ಪರಿವರ್ತನೆಗಾಗಿ ಆನ್‌ಲೈನ್ ವ್ಯವಸ್ಥೆ ಜಾರಿಗೆ ತಂದಿದೆ. ಇದಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರಿಗಳ ಸಮ್ಮುಖದಲ್ಲಿ ಬುಧವಾರ ಚಾಲನೆ ನೀಡಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ ಆರ್.ಅಶೋಕ್ ಗುರುವಾರ ಎಕ್ಸ್ ಪೋಸ್ಟ್ ಮಾಹಿತಿ ಸರ್ಕಾರದ ವಿರುದ್ಧ ಕಿಡಿ ಕಾರಿದ್ದರು.

B-Khata to A-Khata Govt Faces Loot Allegations from Opposition BJP Leader

ಸರ್ಕಾರ ಖಾತಾ ಹೆಸರಿನಲ್ಲಿ ಜನರ ಲೂಟಿ ಹೊಡೆಯಲು ಮುಂದಾಗಿದೆ ಎಂದು ಆರೋಪಿಸಿದರು. ಅಧಿಕಾರಕ್ಕೆ ಬಂದ ಕೇವಲ 4 ತಿಂಗಳಲ್ಲಿ, ಅಂದರೆ, 2023 ಅಕ್ಟೋಬರ್ ನಲ್ಲಿ ಸ್ಥಿರಾಸ್ತಿಗಳ ಮಾರ್ಗಸೂಚಿ ದರ (ಗೈಡೆನ್ಸ್ ವ್ಯಾಲ್ಯೂ) ಶೇಕಡಾ 30ರಷ್ಟು ಹೆಚ್ಚಳ ಮಾಡಿದ್ದೀರಿ. ನಂತರ ಇ-ಖಾತೆ ಹೆಸರಿನಲ್ಲಿ ಜನರಿಂದ ವಸೂಲಿ ಮಾಡಿದ್ದೀರಿ ಎಂದು ಆರೋಪಿಸಿದರು.

ಈಗ ಬಿ ಖಾತಾ ಪರಿವರ್ತನೆಗೆ ನಿವೇಶನದ ಮಾರ್ಗಸೂಚಿ ದರದ ಶೇಕಡಾ 5ರಷ್ಟು ಶುಲ್ಕ ಹೇರುವ ಮೂಲಕ ಹಗಲು ದರೋಡೆಗೆ ರಾಜ್ಯ ಸರ್ಕಾರ ಇಳಿದಿದೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೇ ಬಿ-ಖಾತಾ ನಿವೇಶನ ಹೊಂದಿರುವ ಜನಸಾಮಾನ್ಯರು ಈಗಾಗಲೇ ಪ್ರತಿ ವರ್ಷ ಆಸ್ತಿ ತೆರಿಗೆ, ನೀರು, ತ್ಯಾಜ್ಯ ಸೇರಿದಂತೆ ಎಲ್ಲ ತೆರಿಗೆಗಳನ್ನೂ ಕಟ್ಟುತ್ತಿದ್ದಾರೆ. ಈಗ ಎ ಖಾತಾ ಪರಿವರ್ತನೆಗೆ ಮಾರ್ಗಸೂಚಿ ದರದ ಆಧಾರದ ಮೇಲೆ ಮತ್ತೊಮ್ಮೆ 2 ಲಕ್ಷದಿಂದ 8 ಲಕ್ಷ ರೂಪಾಯಿವರೆಗೆ ಶುಲ್ಕ ಕಟ್ಟಬೇಕು ಅಂದರೆ ಪಾಪ ಅವರು ಎಲ್ಲಿಂದ ತರಬೇಕು? ನಿಮ್ಮ ದುಡ್ಡಿನ ದಾಹಕ್ಕೆ ಕನ್ನಡಿಗರ ರಕ್ತ ಇನ್ನೆಷ್ಟು ಹೀರುತ್ತೀರಿ? ಎಂದು ಆರ್.ಅಶೋಕ್ ಪ್ರಶ್ನಿಸಿದ್ದಾರೆ.

ನವೆಂಬರ್ 1 ರಿಂದ 100 ದಿನಗಳ ಕಾಲ 'ಎ‌' ಖಾತಾ ಅಭಿಯಾನ

"ನವೆಂಬರ್ 1 ನೇ‌ ತಾರೀಕಿನಿಂದ ಬಿ ಖಾತೆಗಳನ್ನು ಎ ಖಾತೆಗಳಾಗಿ ಬದಲಾವಣೆ ಮಾಡುವ ಐತಿಹಾಸಿಕ ನಿರ್ಣಯಕ್ಕೆ ಸರ್ಕಾರ ತೀರ್ಮಾನಿಸಿದೆ. ಇದು ಬೆಂಗಳೂರಿನ 15 ಲಕ್ಷ ಆಸ್ತಿಗಳ ಮಾಲೀಕರಿಗೆ ಉಪಯೋಗವಾಗುತ್ತದೆ. ಇದೊಂದು ಕ್ರಾಂತಿಕಾರಕ ತೀರ್ಮಾನ.‌ ಆಸ್ತಿ ಶುದ್ಧೀಕರಣಕ್ಕೆ ನಾಂದಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

2,000 ಚ.ಮೀ. ವಿಸ್ತೀರ್ಣದ ಆಸ್ತಿಗಳು ಈ ಕಾರ್ಯಕ್ರಮದ ವ್ಯಾಪ್ತಿಗೆ ಬರುತ್ತವೆ. 2 ಸಾವಿರ ಚದರ ಮೀಟರ್ ಗಿಂತ ಹೆಚ್ಚು ವಿಸ್ತೀರ್ಣದ ಆಸ್ತಿಗಳಿಗೆ ಕ್ಯಾಡ್ ಡ್ರಾಯಿಂಗ್ ಸೇರಿದಂತೆ ಇತರೇ ದಾಖಲೆಗಳನ್ನು ನೀಡಬೇಕಾಗುತ್ತದೆ. ನವೆಂಬರ್ 1 ರಿಂದ ಪ್ರಾರಂಭವಾಗುವ ಈ ಅಭಿಯಾನ 100 ದಿನಗಳ ನಡೆಯಲಿದೆ. 500 ರೂಪಾಯಿ ಅರ್ಜಿ ಶುಲ್ಕವನ್ನು ಕಟ್ಟಿ ಆನ್ ಲೈನ್ ಮೂಲಕ ನೋಂದಣಿ ಮಾಡಿಸಿಕೊಂಡರೆ ಪಾಲಿಕೆ ಅಧಿಕಾರಿಗಳೇ ಮನೆ ಬಾಗಿಲಿಗೆ ಬಂದು ಸೇವೆ ನೀಡುತ್ತಾರೆ ಎಂದು ಅವರು ವಿವರಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+