ಬಿಜೆಪಿ ಬಿಕ್ಕಟ್ಟಿಗೆ ಸಂತೋಷ್ ಜೀ ಮೇಲೆ ಗೂಬೆ ಕೂರಿಸಿದ ಯಡಿಯೂರಪ್ಪ
ಈಶ್ವರಪ್ಪ ಅತೃಪ್ತರ ಸಭೆ ಕರೆಯುವ ಮೂಲಕ ಹಿರಿಯರ ನಾಯಕತ್ವವನ್ನೇ ಕಡೆಗಣಿಸಿದ್ದಾರೆ. ಈ ಬಂಡಾಯದ ಹಿಂದಿನ ಮಾಸ್ಟರ್ ಮೈಂಡ್ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್ - ಯಡಿಯೂರಪ್ಪ
ಬೆಂಗಳೂರು, ಏಪ್ರಿಲ್ 27: ರಾಜ್ಯ ಬಿಜೆಪಿಯಲ್ಲಿ ಸಂತೋಷ್ ಜೀ-ಯಡಿಯೂರಪ್ಪ ಕಾದಾಟ ಮತ್ತೆ ಮರು ಕಳುಹಿಸಿದಂತೆ ಕಾಣಿಸುತ್ತಿದೆ. ಬಿಜೆಪಿಯಲ್ಲಿ ನಡೆಯುತ್ತಿರುವ ಬಿಕ್ಕಟ್ಟಿಗೆ ಬಿಎಲ್ ಸಂತೋಷ್ ನೇರ ಕಾರಣ ಎಂದು ಬಿಎಸ್ ಯಡಿಯೂರಪ್ಪ ಹರಿಹಾಯ್ದಿದ್ದಾರೆ. ಜತೆಗೆ ಈಶ್ವರಪ್ಪ ಪಕ್ಷದಲ್ಲಿ ಬಿಕ್ಕಟ್ಟು ಸೃಷ್ಟಿಸುತ್ತಿದ್ದಾರೆ ಎಂದು ಅವರು ದೂರಿದ್ದಾರೆ.
ಈ ಕುರಿತು ಮಾತನಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ, "ಈಶ್ವರಪ್ಪ ಅತೃಪ್ತರ ಸಭೆ ಕರೆಯುವ ಮೂಲಕ ಹಿರಿಯರ ನಾಯಕತ್ವವನ್ನೇ ಕಡೆಗಣಿಸಿದ್ದಾರೆ. ಈ ಬಂಡಾಯದ ಹಿಂದಿನ ಮಾಸ್ಟರ್ ಮೈಂಡ್ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್," ಎಂದು ಹೇಳಿದ್ದಾರೆ. ಈ ಮೂಲಕ ಆರ್.ಎಸ್.ಎಸ್ ಮೂಲದ ಸಂತೋಷ್ ಮೇಲೆ ಯಡಿಯೂರಪ್ಪ ಮೊದಲ ಬಾರಿಗೆ ಬಾಯ್ಬಿಟ್ಟು ವಾಗ್ದಾಳಿ ನಡೆಸಿದ್ದಾರೆ.[ಬಿಜೆಪಿಯಲ್ಲಿ ಒಳಜಗಳ ಎಲ್ಲಿದೆ, ಬಿಎಸ್ ವೈ ಮುಖ್ಯಮಂತ್ರಿ ಕ್ಯಾಂಡಿಡೇಟು: ಈಶ್ವರಪ್ಪ]

ಸಂತೋಷ್ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಜತೆ ಉತ್ತಮ ಸಂಬಂಧ ಹೊಂದಿದ್ದು ಬಿಕ್ಕಟ್ಟು ತೀವ್ರವಾಗುವ ಲಕ್ಷಣಗಳಿವೆ.
"ಎಲ್ಲಾ ಬೆಳವಣಿಗೆಗಳನ್ನು ಹಿರಿಯ ನಾಯಕರು, ಜತೆಗೆ ಜನರು ನೋಡುತ್ತಿದ್ದಾರೆ. ಬಂಡಾಯ ನಾಯಕರಿಗೆ ಸರಿಯಾದ ಉತ್ತರ ನೀಡಲಾಗುತ್ತದೆ. ಈಶ್ವರಪ್ಪ ಕೂತು ತಮ್ಮ ಸಮಸ್ಯೆಗಳನ್ನು ಚರ್ಚಿಸಿದ್ದರೆ ಪಕ್ಷ ಇವತ್ತು ಈ ಪರಿಸ್ಥಿತಿ ಎದುರಿಸುವಂತಾಗುತ್ತಿರಲಿಲ್ಲ," ಎಂದು ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.[ಈಶ್ವರಪ್ಪ ಆ್ಯಂಡ್ ಟೀಮ್ ಉಚ್ಛಾಟಿಸಿ- ಗುಡುಗಿದ ಬಿಜೆಪಿ ನಾಯಕರು]
ಈ ಮೂಲಕ ಪಕ್ಷದಲ್ಲಿ ಈಶ್ವರಪ್ಪ ಸಮಸ್ಯೆ ಸೃಷ್ಟಿಸುತ್ತಿದ್ದಾರೆ ಎಂದು ಯಡಿಯೂರಪ್ಪ ಬಹಿರಂಗ ಹೇಳಿಕೆ ನೀಡಿದ್ದಾರೆ.[ಅತೃಪ್ತರ ಸಮಾವೇಶದಲ್ಲಿ ಈಶ್ವರಪ್ಪ-ಬಿಎಸ್ವೈ ಬೆಂಬಲಿಗರ ಮಾರಾಮಾರಿ]

ಇಂದು ಬೆಂಗಳೂರಿನಲ್ಲಿ ಅತೃಪ್ತ ಬಿಜೆಪಿ ನಾಯಕರು ಅರಮನೆ ಮೈದಾನದಲ್ಲಿ ಸಮಾವೇಶ ನಡೆಸಿದ ಬೆನ್ನಿಗೆ ಯಡಿಯೂರಪ್ಪ ಈ ಮಾತುಗಳನ್ನು ಹೊರ ಹಾಕಿದ್ದಾರೆ. ಇದರಿಂದ ಮುಂದಿನ ದಿನಗಳಲ್ಲಿ ಯಡಿಯೂರಪ್ಪ-ಈಶ್ವರಪ್ಪ ನಡುವಿನ ಬಿಕ್ಕಟ್ಟು ಮತ್ತಷ್ಟು ತಾರಕ್ಕೇರುವ ಸಾಧ್ಯತೆ ಇದೆ. (ಒನ್ ಇಂಡಿಯಾ ಸುದ್ದಿ)
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ












Click it and Unblock the Notifications