ಪರಿಸರ ಚರ್ಚೆಗೆ ನಾಂದಿ ಹಾಡಿದ ಸರ್ಕಾರದ ವಿಧೇಯಕ
ಬೆಂಗಳೂರು, ಜುಲೈ, 20: ಕರ್ನಾಟಕ ಸರ್ಕಾರ ಚರ್ಚೆಯನ್ನೇ ಮಾಡದೇ ನಗರಾಭಿವೃದ್ಧಿಗೆ ಸಂಬಂಧಿಸಿದ ವಿಧೇಯಕವೊಂದನ್ನು ಅಂಗೀಕಾರ ಮಾಡಿದೆ. ಉದ್ಯಾನವನ ಮತ್ತು ಸಾಮಾಜಿಕ ಅರಣ್ಯಕ್ಕೆ ಮೀಸಲಿಟ್ಟ ಜಾಗಗಳನ್ನು ಕಟ್ಟಡ ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ಧಿ ಕೆಲಸಕ್ಕೆ ಬಳಕೆ ಮಾಡಿಕೊಳ್ಳಲು ಹೊಸ ವಿಧೇಯಕ ಅವಕಾಶ ನೀಡಿದೆ.
ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ (ತಿದ್ದುಪಡಿ) ವಿಧೇಯಕ 2016ಕ್ಕೆ (ಅರ್ಬನ್ ಡೆವಲಪ್ ಮೆಂಟ್ ಅಥಾರಿಟಿ ಬಿಲ್ ) ವಿಧಾನಸಭೆ ಒಪ್ಪಿಗೆ ನೀಡಿದ್ದು ಇದರಿಂದಾಗುವ ಕೆಟ್ಟ ಪರಿಣಾಮಗಳನ್ನು ಬಿ.ಪ್ಯಾಕ್ ಸಂಸ್ಥೆ ಸಾರ್ವಜನಿಕರ ಮುಂದೆ ಇಟ್ಟಿದೆ. ವಿಧೇಯಕ ಸದ್ಯ ರಾಜ್ಯಪಾಲರ ಬಳಿ ಇದ್ದು ಅವರು ಇನ್ನೊಮ್ಮೆ ಪರಾಮರ್ಶೆ ಮಾಡಬೇಕು ಎಂದು ಕೇಳಿಕೊಂಡಿದೆ.[ಅಂಗೀಕಾರವಾದ ಈ ವಿಧೇಯಕ, ಪರಿಸರಕ್ಕೆ ಎಷ್ಟು ಮಾರಕ?]

ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ (ತಿದ್ದುಪಡಿ) ವಿಧೇಯಕದ ದುಷ್ಪರಿಣಾಮಗಳು
* ಸಾರ್ವಜನಿಕ ಅರಣ್ಯ ಪ್ರದೇಶ ನಿಧಾನವಾಗಿ ಮಾಯವಾಗುತ್ತಿರುವ ಸಂದರ್ಭದಲ್ಲಿ ಈ ಕಾನೂನು ಉದ್ಯಾನ ನಗರಿ ಎಂಬ ಹೆಸರನ್ನು ಬಲುಬೇಗ ಇಲ್ಲವಾಗುವಂತೆ ಮಾಡುತ್ತದೆ.
* ಇದು ವಾಣಿಜ್ಯೋದ್ಯಮಿಗಳ ಮತ್ತು ಪ್ರಭಾವಿಗಳಿಗೆ ನೆರವು ನೀಡುವ ಕಾನೂನಾಗಿದ್ದು, ಬೆಂಗಳೂರಿನ ಸುತ್ತಮುತ್ತಲ ಪ್ರದೇಶದಲ್ಲಿದ್ದ ಅರಣ್ಯಗಳಿಗೂ ಆತಂಕ ಎದುರಾಗಿದೆ.[ಅವಧಿಗೂ ಮುನ್ನವೇ ಕಲಾಪ ಮುಕ್ತಾಯ]
ಬಿ.ಪ್ಯಾಕ್ ಸಲಹೆಗಳು
* ಆಟದ ಮೈದಾನಗಳ ನಿರ್ವಹಣೆಗೆ ಸರ್ಕಾರ ಮೊದಲ ಆದ್ಯತೆ ನೀಡಬೇಕು.
* ಮಕ್ಕಳ ಹಕ್ಕು ಕಾಪಾಡಲು ಸರ್ಕಾರ ಮುಂದಾಗಬೇಕು. ಮೈದಾನಗಳ ನಿರ್ವಹಣೆ ಜತೆಗೆ ಕಾಪಾಡುವಿಕೆ ಇಂದಿನ ಅಗತ್ಯವಾಗಿದೆ.
* ಪಾರ್ಕ್ ಮತ್ತು ಸಾಮಾಜಿಕ ಅರಣ್ಯ, ಮೈದಾನಗಳ ಉಳಿವಿಗೆ ಬೆಂಗಳೂರಿನ ನಾಗರಿಕರಿಂದಲೇ ಸಲಹೆ ಆಹ್ವಾನಿಸಿ ಆ ಮೂಲಕ ಪರಿಹಾರ ಕ್ರಮ ತೆಗೆದುಕೊಳ್ಳಬಹುದು.
ವಿಧೇಯಕ ಏನು ಹೇಳುತ್ತದೆ?
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನಿರ್ಮಿಸುವ ಬಡಾವಣೆಯ ಪ್ರದೇಶದ ಶೇ. 15ಕ್ಕೂ ಕಡಿಮೆ ಇಲ್ಲದ ಪ್ರದೇಶವನ್ನು ಸಾರ್ವಜನಿಕ ಉದ್ಯಾನ ಮತ್ತು ಆಟದ ಮೈದಾನಗಳಿಗೆ, ಒಟ್ಟು ಪ್ರದೇಶದ ಶೇ. 10 ಕ್ಕೂ ಕಡಿಮೆ ಇಲ್ಲದಂತೆ ನಾಗರಿಕ ಸೌಲಭ್ಯಕ್ಕೆ ಮೀಸಲಿಡುವ ತಿದ್ದುಪಡಿ ಮಾಡಲಾಗಿತ್ತು.
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
GBA: ಜಿಬಿಎ ವ್ಯಾಪ್ತಿಯಲ್ಲಿ ಪೂರ್ವ ಮುಂಗಾರು ಮಳೆಯ ಪೂರ್ವ ಸಿದ್ಧತೆಗೆ ಕ್ರಮ: ಮಹೇಶ್ವರ್ ರಾವ್ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ












Click it and Unblock the Notifications