ಪರಿಸರ ಚರ್ಚೆಗೆ ನಾಂದಿ ಹಾಡಿದ ಸರ್ಕಾರದ ವಿಧೇಯಕ
ಬೆಂಗಳೂರು, ಜುಲೈ, 20: ಕರ್ನಾಟಕ ಸರ್ಕಾರ ಚರ್ಚೆಯನ್ನೇ ಮಾಡದೇ ನಗರಾಭಿವೃದ್ಧಿಗೆ ಸಂಬಂಧಿಸಿದ ವಿಧೇಯಕವೊಂದನ್ನು ಅಂಗೀಕಾರ ಮಾಡಿದೆ. ಉದ್ಯಾನವನ ಮತ್ತು ಸಾಮಾಜಿಕ ಅರಣ್ಯಕ್ಕೆ ಮೀಸಲಿಟ್ಟ ಜಾಗಗಳನ್ನು ಕಟ್ಟಡ ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ಧಿ ಕೆಲಸಕ್ಕೆ ಬಳಕೆ ಮಾಡಿಕೊಳ್ಳಲು ಹೊಸ ವಿಧೇಯಕ ಅವಕಾಶ ನೀಡಿದೆ.
ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ (ತಿದ್ದುಪಡಿ) ವಿಧೇಯಕ 2016ಕ್ಕೆ (ಅರ್ಬನ್ ಡೆವಲಪ್ ಮೆಂಟ್ ಅಥಾರಿಟಿ ಬಿಲ್ ) ವಿಧಾನಸಭೆ ಒಪ್ಪಿಗೆ ನೀಡಿದ್ದು ಇದರಿಂದಾಗುವ ಕೆಟ್ಟ ಪರಿಣಾಮಗಳನ್ನು ಬಿ.ಪ್ಯಾಕ್ ಸಂಸ್ಥೆ ಸಾರ್ವಜನಿಕರ ಮುಂದೆ ಇಟ್ಟಿದೆ. ವಿಧೇಯಕ ಸದ್ಯ ರಾಜ್ಯಪಾಲರ ಬಳಿ ಇದ್ದು ಅವರು ಇನ್ನೊಮ್ಮೆ ಪರಾಮರ್ಶೆ ಮಾಡಬೇಕು ಎಂದು ಕೇಳಿಕೊಂಡಿದೆ.[ಅಂಗೀಕಾರವಾದ ಈ ವಿಧೇಯಕ, ಪರಿಸರಕ್ಕೆ ಎಷ್ಟು ಮಾರಕ?]

ಕರ್ನಾಟಕ ನಗರಾಭಿವೃದ್ಧಿ ಪ್ರಾಧಿಕಾರಗಳ (ತಿದ್ದುಪಡಿ) ವಿಧೇಯಕದ ದುಷ್ಪರಿಣಾಮಗಳು
* ಸಾರ್ವಜನಿಕ ಅರಣ್ಯ ಪ್ರದೇಶ ನಿಧಾನವಾಗಿ ಮಾಯವಾಗುತ್ತಿರುವ ಸಂದರ್ಭದಲ್ಲಿ ಈ ಕಾನೂನು ಉದ್ಯಾನ ನಗರಿ ಎಂಬ ಹೆಸರನ್ನು ಬಲುಬೇಗ ಇಲ್ಲವಾಗುವಂತೆ ಮಾಡುತ್ತದೆ.
* ಇದು ವಾಣಿಜ್ಯೋದ್ಯಮಿಗಳ ಮತ್ತು ಪ್ರಭಾವಿಗಳಿಗೆ ನೆರವು ನೀಡುವ ಕಾನೂನಾಗಿದ್ದು, ಬೆಂಗಳೂರಿನ ಸುತ್ತಮುತ್ತಲ ಪ್ರದೇಶದಲ್ಲಿದ್ದ ಅರಣ್ಯಗಳಿಗೂ ಆತಂಕ ಎದುರಾಗಿದೆ.[ಅವಧಿಗೂ ಮುನ್ನವೇ ಕಲಾಪ ಮುಕ್ತಾಯ]
ಬಿ.ಪ್ಯಾಕ್ ಸಲಹೆಗಳು
* ಆಟದ ಮೈದಾನಗಳ ನಿರ್ವಹಣೆಗೆ ಸರ್ಕಾರ ಮೊದಲ ಆದ್ಯತೆ ನೀಡಬೇಕು.
* ಮಕ್ಕಳ ಹಕ್ಕು ಕಾಪಾಡಲು ಸರ್ಕಾರ ಮುಂದಾಗಬೇಕು. ಮೈದಾನಗಳ ನಿರ್ವಹಣೆ ಜತೆಗೆ ಕಾಪಾಡುವಿಕೆ ಇಂದಿನ ಅಗತ್ಯವಾಗಿದೆ.
* ಪಾರ್ಕ್ ಮತ್ತು ಸಾಮಾಜಿಕ ಅರಣ್ಯ, ಮೈದಾನಗಳ ಉಳಿವಿಗೆ ಬೆಂಗಳೂರಿನ ನಾಗರಿಕರಿಂದಲೇ ಸಲಹೆ ಆಹ್ವಾನಿಸಿ ಆ ಮೂಲಕ ಪರಿಹಾರ ಕ್ರಮ ತೆಗೆದುಕೊಳ್ಳಬಹುದು.
ವಿಧೇಯಕ ಏನು ಹೇಳುತ್ತದೆ?
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನಿರ್ಮಿಸುವ ಬಡಾವಣೆಯ ಪ್ರದೇಶದ ಶೇ. 15ಕ್ಕೂ ಕಡಿಮೆ ಇಲ್ಲದ ಪ್ರದೇಶವನ್ನು ಸಾರ್ವಜನಿಕ ಉದ್ಯಾನ ಮತ್ತು ಆಟದ ಮೈದಾನಗಳಿಗೆ, ಒಟ್ಟು ಪ್ರದೇಶದ ಶೇ. 10 ಕ್ಕೂ ಕಡಿಮೆ ಇಲ್ಲದಂತೆ ನಾಗರಿಕ ಸೌಲಭ್ಯಕ್ಕೆ ಮೀಸಲಿಡುವ ತಿದ್ದುಪಡಿ ಮಾಡಲಾಗಿತ್ತು.
-
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications