ಬಿಎಸ್ವೈ ವಿರುದ್ಧ ಭ್ರಷ್ಟಾಚಾರ ಆರೋಪ ಪ್ರಕರಣ ರದ್ದು: ರಾಜ್ಯಪಾಲರ ನಡೆ ಬಗ್ಗೆ ಸಂಶಯ
ಬೆಂಗಳೂರು, ಜು. 08: ''ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಕುಟುಂಬ ಸದಸ್ಯರು 12.5 ಕೋಟಿ ರೂ. ಲಂಚ ಪಡೆದ ಆರೋಪ ಸಂಬಂಧ ಸಲ್ಲಿಸಿದ್ದ ಖಾಸಗಿ ದೂರನ್ನು ರದ್ದು ಮಾಡಿದ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರ ನಡೆ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ವಿಶೇಷ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗುತ್ತೇನೆ,'' ಎಂದು ದೂರುದಾರ ಟಿ.ಜೆ. ಅಬ್ರಹಾಂ ಅವರು ತಿಳಿಸಿದ್ದಾರೆ.
ದೆಹಲಿಯಲ್ಲಿ ಸುದ್ದಿಗೋಷ್ಠಿ ಕರೆದು ಮಾತನಾಡಿದ ಟಿ.ಜೆ. ಅಬ್ರಹಾಂ, ಬಿ.ಎಸ್. ಯಡಿಯೂರಪ್ಪ ಅವರ ಕುಟುಂಬ ಸದಸ್ಯರ ವಿರುದ್ಧ ಸಲ್ಲಿಸಿದ್ದ ಖಾಸಗಿ ದೂರನ್ನು ನ್ಯಾಯಾಲಯ ತನಿಖೆಗೆ ಆದೇಶಿಸಬೇಕಿತ್ತು. ಸಿಎಂ ಪರವಾಗಿ ಉದ್ದೇಶ ಪೂರ್ವಕವಾಗಿ ಆದೇಶ ಮಾಡಿದಂತಾಗಿದೆ. ನಾನು ಈ ಕೇಸನ್ನು ಯಾವುದೇ ಕಾರಣಕ್ಕೂ ಕೈ ಬಿಡುವುದಿಲ್ಲ. ಹೈಕೋರ್ಟ್ ,ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸುತ್ತೇನೆ. ಈ ಕೇಸ್ನಲ್ಲಿ ನ್ಯಾಯಾಧೀಶರು ಸುಪ್ರೀಂಕೋರ್ಟ್ ಆದೇಶವನ್ನು ಉಲ್ಲಂಘನೆ ಮಾಡಿದ್ದಾರೆ. ಅಭಿಯೋಜನೆಗೆ ಒಳಪಡಿಸಲು ರಾಜ್ಯಪಾಲರು ಮೂರು ತಿಂಗಳ ಒಳಗೆ ನಿರ್ಧಾರ ಪ್ರಕಟಿಸಬೇಕಿತ್ತು. ರಾಜ್ಯಪಾಲರು ಮೂರು ತಿಂಗಳೊಳಗೆ ಪ್ರಕಟಿಸದಿದ್ದರೆ, ಅನುಮತಿ ನೀಡಿದೆ ಎಂದೇ ನ್ಯಾಯಾಲಯ ಪರಿಗಣಿಸಬೇಕು.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ಖಾಸಗಿ ದೂರು ಸಲ್ಲಿಸಲು ಅನುಮತಿ ಕೇಳಿದ್ದು ನಾನು. ಆದರೆ, ನನಗೆ ಯಾವುದೇ ಉತ್ತರ ನೀಡದೇ ಖಾಸಗಿ ದೂರು ವಿಚಾರಣೆ ನಡೆಯುವ ವೇಳೆ ನ್ಯಾಯಾಲಯಕ್ಕೆ ಬಂದು ತಿಳಿಸುತ್ತಾರೆ. ಬಿ.ಎಸ್. ಯಡಿಯೂರಪ್ಪ ಅವರನ್ನು ಅಭಿಯೋಜನೆಗೆ ಒಳಪಡಿಸಲು ಮಂಜೂರಾತಿ ನಿರಾಕರಿಸಲಾಗಿದೆ ಎಂದು ಸ್ಪಷ್ಟಪಡಿಸುತ್ತಾರೆ. ರಾಜ್ಯಪಾಲರ ನಡೆ ಸರಿಯಿಲ್ಲ ಎಂದು ಅಬ್ರಹಾಂ ಕಿಡಿ ಕಾರಿದ್ದಾರೆ.

Recommended Video
ಮುಖ್ಯಮಂತ್ರಿ ಯಡಿಯೂರಪ್ಪ ಅವರು ರಾಜ್ಯಪಾಲರನ್ನು ಭೇಟಿ ಮಾಡಿ ಬಂದಿದ್ದಾರೆ. ಮುಖ್ಯಮಂತ್ರಿಗಳ ಗನ್ ಮ್ಯಾನ್ ನ್ಯಾಯಾಧೀಶರ ಮನೆ ಮುಂದೆ ಯಾಕೆ ಹೋಗಿದ್ದ ಎಂಬುದು ಸಮಾಜಕ್ಕೆ ಗೊತ್ತಾಗಬೇಕು. ಮುಖ್ಯಮಂತ್ರಿಗಳ ವಿರುದ್ಧದ ದೂರು ವಿಚಾರಣೆ ಬಾಕಿ ಇರುವ ವೇಳೆ ಅವರ ಗನ್ ಮ್ಯಾನ್ ನ್ಯಾಯಾಧೀಶರ ಮನೆ ಮುಂದೆ ಯಾಕೆ ಹೋಗಿದ್ದರು. ಲೊಕೇಷನ್ ಟ್ರೇಸ್ ಮಾಡಿದರೆ ಅಸಲಿ ಬಂಡವಾಳ ಬಯಲಾಗುತ್ತದೆ. ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications