ಮಗನ ಪರ ಪ್ರಚಾರಕ್ಕೆ ಬಚ್ಚೇಗೌಡ್ರು ಬರ್ತಾರಾ? ಶರತ್ ಕ್ಲಿಯರ್ ಕಟ್ ಸ್ಪಷ್ಟನೆ
ಬೆಂಗಳೂರು, ನ 22: ಮುಖ್ಯಮಂತ್ರಿ ಯಡಿಯೂರಪ್ಪ ಆದಿಯಾಗಿ, ಬಿಜೆಪಿ ಮುಖಂಡರ, ಯಾವ ಬೆದರಿಕೆಗೂ, ಒತ್ತಡಕ್ಕೂ ಮಣಿಯದ ಶರತ್ ಬಚ್ಚೇಗೌಡ, ಹೊಸಕೋಟೆ ಕ್ಷೇತ್ರದಿಂದ ಪಕ್ಷೇತರರಾಗಿ ಕಣದಲ್ಲಿ ಉಳಿದಿದ್ದಾರೆ.
ನಾಮಪತ್ರ ಸಲ್ಲಿಕೆ ಹಿಂಪಡೆಯುವ ಕೊನೆಯ ದಿನದಂದು, ಬಿಜೆಪಿಯ ಪ್ರಾಥಮಿಕ ಸದಸ್ಯತ್ವದಿಂದ ಶರತ್ ಅವರನ್ನು ಉಚ್ಚಾಟಿಸಿ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆದೇಶ ಹೊರಡಿಸಿದ್ದರು.
ಚುನಾವಣಾ ಆಯೋಗ ಶರತ್ ಬಚ್ಚೇಗೌಡಗೆ ಪ್ರೆಶರ್ ಕುಕ್ಕರ್ ಅನ್ನು ಚಿಹ್ನೆಯಾಗಿ ನೀಡಿದೆ. ಈ ನಡುವೆ, ಶರತ್ ಅವರ ತಂದೆ, ಬಿಜೆಪಿ ಸಂಸದ, ಬಚ್ಚೇಗೌಡ್ರು, ಮಗನ ಪರವಾಗಿ ಪ್ರಚಾರ ನಡೆಸುತ್ತಾರಾ ಎನ್ನುವುದು ಪ್ರಶ್ನೆಯಾಗಿತ್ತು.

ಈ ಬಗ್ಗೆ ಸ್ಪಷ್ಟನೆ ನೀಡಿರುವ ಶರತ್, "ಶಿಸ್ತುಕ್ರಮ ಎದುರಿಸಬೇಕಾದಂತಹ ಕೆಲಸವನ್ನು ನನ್ನ ತಂದೆ ಮಾಡಿಲ್ಲ. ನನ್ನ ತಂದೆ ಮಾಡಿರುವ ಅಭಿವೃದ್ದಿ ಕೆಲಸವನ್ನು ಮುಂದಿಟ್ಟುಕೊಂಡು ನಾನು ಮತಯಾಚಿಸುತ್ತೇನೆ" ಎಂದು ಹೇಳಿದ್ದಾರೆ.
"ನನ್ನ ಪರವಾಗಿ ಬಚ್ಚೇಗೌಡ್ರು ಪ್ರಚಾರ ನಡೆಸಿದರೆ ತಾನೇ, ಅವರ ವಿರುದ್ದ ಶಿಸ್ತುಕ್ರಮ. ನನ್ನ ತಂದೆ, ಪ್ರಚಾರಕ್ಕೆ ಬರುವುದಿಲ್ಲ" ಎಂದು ಶರತ್ ಸ್ಪಷ್ಟನೆಯನ್ನು ನೀಡಿದ್ದಾರೆ.
"ಕಳೆದ ಚುನಾವಣೆಯಲ್ಲಿ ಬಿಜೆಪಿಯಲ್ಲಿರುವಾಗ ಮತದಾರರು ಆಶೀರ್ವಾದ ಮಾಡಿದರು. ಈಗ ಬಿಜೆಪಿ ಟಿಕೆಟ್ ನೀಡದ ಕಾರಣ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಕಾರ್ಯಕರ್ತರು ಒತ್ತಾಯ ಮಾಡಿದರು. ಹೀಗಾಗಿ ಯಾವುದೇ ಕಾರಣಕ್ಕೂ ಕಣದಿಂದ ಹಿಂದೆ ಸರಿಯಲ್ಲ" ಎಂದು ಶರತ್ ಬಚ್ಚೇಗೌಡ ಹಲವು ಬಾರಿ ಸ್ಪಷ್ಟಪಡಿಸಿದ್ದರು.
-
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ












Click it and Unblock the Notifications