ಪ್ರಬಲ ಜಾತಿಗಳನ್ನು 2(ಎ) ಗೆ ಸೇರ್ಪಡೆಗೆ ಭಾರಿ ವಿರೋಧ
ಬೆಂಗಳೂರು, ಮಾರ್ಚ್ 10: ಪ್ರಬಲ ಜಾತಿಗಳನ್ನು 2(ಎ) ಸಮುದಾಯಕ್ಕೆ ಸೇರ್ಪಡೆಗೊಳಿಸಬಾರದು ಹಾಗೂ ಉನ್ನತ ಮಟ್ಟದ ಸಮಿತಿಯನ್ನು ರದ್ದುಗೊಳಿಸುವಂತೆ ಅತಿ ಹಿಂದುಳಿದ ವರ್ಗಗಳ ವೇದಿಕೆ ಆಗ್ರಹಿಸಿದೆ.
ಆಯವ್ಯಯದಲ್ಲಿ ನೀಡಿರುವ ಅನುದಾನದ ರೀತಿಯಲ್ಲಿಯೇ ಅತಿ ಹಿಂದುಳಿದ ಸಮುದಾಯಗಳಿಗೆ ಹೆಚ್ಚಿನ ಅನುದಾನ ನೀಡುವಂತೆ ಅತಿ ಹಿಂದುಳಿದ ವರ್ಗಗಳ ವೇದಿಕೆಯ ನಿಯೋಗ ಇಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರು, ಸಚಿವ ಕೋಟ ಶ್ರೀನಿವಾಸ ಪೂಜಾರಿ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮನವಿಯನ್ನ ಸಲ್ಲಿಸಿತು.
ಅತಿ ಹಿಂದುಳಿದ ವರ್ಗಗಳ ವೇದಿಕೆಯ ಗೌರವಾಧ್ಯಕ್ಷರಾದ ಮುಖ್ಯಮಂತ್ರಿ ಚಂದ್ರು, ಅಧ್ಯಕ್ಷರಾದ ಎಂ.ಸಿ ವೇಣುಗೋಪಾಲ್ ಅವರ ನೇತೃತ್ವದ ನಿಯೋಗ ಪ್ರಮುಖರನ್ನು ಭೇಟಿಯಾಗಿ ತನ್ನ ಮನವಿಯನ್ನು ಸಲ್ಲಿಸಿತು.

ಗೌರವಾಧ್ಯಕ್ಷರಾದ ಮುಖ್ಯಮಂತ್ರಿ ಚಂದ್ರು ಮಾತನಾಡಿ
ಮನವಿ ನೀಡುವ ಸಂದರ್ಭದಲ್ಲಿ ಅತಿ ಹಿಂದುಳಿದ ವರ್ಗಗಳ ವೇದಿಕೆಯ ಗೌರವಾಧ್ಯಕ್ಷರಾದ ಮುಖ್ಯಮಂತ್ರಿ ಚಂದ್ರು ಮಾತನಾಡಿ, ಪ್ರವರ್ಗ 2(ಎ) ನಲ್ಲಿರುವ 102 ಅತಿ ಹಿಂದುಳಿದ ಜಾತಿ ವರ್ಗಗಳು ಒಂದಾಗಿ ಈ ಮನವಿಯನ್ನು ನೀಡುತ್ತಿದ್ದೇವೆ. ಪ್ರವರ್ಗ 2(ಎ) ಗೆ ಸೇರ್ಪಡೆಗೊಳಿಸುವಂತೆ ಹಲವಾರು ಪ್ರಬಲ ಸಮುದಾಯಗಳು ತಮ್ಮ ಬಲಪ್ರದರ್ಶನ ಮಾಡುತ್ತಿವೆ. ಈಗಾಗಲೇ ಪ್ರವರ್ಗ 2(ಎ) ದಲ್ಲಿರುವ ಹಲವಾರು ಅತಿ ಹಿಂದುಳಿದ ಜಾತಿಗಳು ಈ ಮೀಸಲಾತಿಯ ಪ್ರಯೋಜನವನ್ನು ಪಡೆದುಕೊಳ್ಳಲು ಆಗಿಲ್ಲ.
ಈ ಸಂದರ್ಭದಲ್ಲಿ ಇನ್ನು ಹೆಚ್ಚಿನ ಜಾತಿಗಳ ಸೇರ್ಪಡೆಯಿಂದಾಗಿ ಈಗಾಗಲೇ ಇರುವ ಜಾತಿಗಳಿಗೆ ತೊಂದರೆ ಉಂಟಾಗುತ್ತದೆ. ಈ ಹಿನ್ನಲೆಯಲ್ಲಿ ಪ್ರವರ್ಗ 2(ಎ) ದಲ್ಲಿರುವ ಅತಿ ಹಿಂದುಳಿದ ಜಾತಿಗಳ ಅಸ್ತಿತ್ವ ಮತ್ತು ಆಸ್ಮಿತೆ ಕಾಪಾಡುವ ನಿರ್ಧಾರ ತಗೆದುಕೊಳ್ಳುವಂತೆ ಮನವಿ ಮಾಡಿದರು.

ಎಂ.ಸಿ ವೇಣುಗೋಪಾಲ್ ಮಾತನಾಡಿ
ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಅಧ್ಯಕ್ಷ ಎಂ.ಸಿ ವೇಣುಗೋಪಾಲ್ ಮಾತನಾಡಿ, ಪ್ರವರ್ಗ 2(ಎ) ಪಟ್ಟಿಯಲ್ಲಿರುವ ಅತಿ ಹಿಂದುಳಿದ ಸಮುದಾಯಗಳಿಗೆ ರಕ್ಷಣೆ ನೀಡುವ ಅವಶ್ಯಕತೆ ಇದೆ. ಅಲ್ಲದೆ ಈಗಾಗಲೇ ಸಿದ್ದಗೊಂಡಿರುವ ಜಾತೀವಾರು ಸಮೀಕ್ಷೆಯನ್ನು ಬಿಡುಗಡೆ ಮಾಡುವ ಮೂಲಕ ಪ್ರವರ್ಗ 2(ಎ) ದಲ್ಲಿರುವ ಜಾತಿಗಳಿಗೆ ರಕ್ಷಣೆ ನೀಡಿ ಎಂದು ಹೇಳಿದರು.

ಮಾಜಿ ಸಭಾಪತಿ ವಿ.ಆರ್ ಸುದರ್ಶನ್ ಮಾತನಾಡಿ
ವೇದಿಕೆಯ ಗೌರವ ಸಲಹೆಗಾರರಾದ ಮಾಜಿ ಸಭಾಪತಿ ವಿ.ಆರ್ ಸುದರ್ಶನ್ ಮಾತನಾಡಿ, ಕಳೆದ ಕೆಲವು ದಿನಗಳಿಂದಲೂ ತಮ್ಮನ್ನು ಪ್ರವರ್ಗ 2(a)ಗೆ ಸೇರಿಸಬೇಕೆಂದು ಸರ್ಕಾರದ ಮೇಲೆ ಒತ್ತಡ ತರುವ ಹೋರಾಟವನ್ನು ಹಮ್ಮಿಕೊಂಡಿರುವ ʼವೀರಶೈವ ಪಂಚಮಸಾಲಿ' ಸಮುದಾಯ ಮತ್ತು ಇವರ ಹಾದಿಯಲ್ಲೇ ಹೊರಟ ಇತರೇ ಪ್ರಭಾವಿ ಸಮುದಾಯಗಳ ಒತ್ತಡವನ್ನು ಗಮನಿಸಿದರೆ ಈ ರಾಜ್ಯದಲ್ಲಿ ನಮ್ಮಂತಹ ಸಣ್ಣ ಪುಟ್ಟ ಸಮುದಾಯಗಳ ಭವಿಷ್ಯ ಅತ್ಯಂತ ಧಾರುಣವಾಗುವ ಸೂಚನೆಗಳು ಕಾಣುತ್ತಿವೆ. ಪ್ರವರ್ಗ 2(a) ನಲ್ಲಿ 15% ಮೀಸಲಾತಿ ಇದ್ದು ಇದನ್ನು 102 ಅತೀ ಹಿಂದುಳಿದ ಸಮುದಾಯಗಳು ಹಂಚಿಕೊಳ್ಳಬೇಕಿದೆ.
ಈ 15% ಮೀಸಲಾತಿ ಇನ್ನೂ ಅರ್ದದಷ್ಟು ದ್ವನಿಯೇ ಇಲ್ಲದ ಸಮುದಾಯಗಳಿಗೂ ತಲುಪಿಲ್ಲ!
ಆಶ್ಚರ್ಯವೆಂದರೆ ಇಲ್ಲಿನ ಅನೇಕ ಸಮುದಾಯಗಳಿಗೆ ಇಷ್ಟು ದಶಕಗಳಲ್ಲಿ ಒಮ್ಮೆಯೂ ಮೀಸಲಾತಿ ಸೌಲಭ್ಯ ದೊರೆತಿಲ್ಲ! ಇದರ ಬಗ್ಗೆ ತಮ್ಮ ಆಯೋಗ ಜಾತಿವಾರು ಸಮೀಕ್ಷೆಗಾಗಿ ಸಂಗ್ರಹಿಸಿರಬಹುದಾದ ದ್ವಿತೀಯ ಮೂಲದ(secondary source of information) ಮಾಹಿತಿಯನ್ನು ದಯವಿಟ್ಟು ಗಮನಿಸಬಹುದು ಎಂದರು.

ಸಲಹೆಗಾರ ಡಾ. ಸಿ.ಎಸ್ ದ್ವಾರಾಕಾನಾಥ್ ಮಾತನಾಡಿ
ವೇದಿಕೆಯ ಗೌರವ ಸಲಹೆಗಾರರಾದ ಡಾ. ಸಿ.ಎಸ್ ದ್ವಾರಾಕಾನಾಥ್ ಮಾತನಾಡಿ, ಸುಪ್ರೀಂ ಕೋರ್ಟ್ ನಿರ್ದೇಶನದ ಮೇಲೆ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಈಗಾಗಲೇ ಅಸ್ತಿತ್ವದಲ್ಲಿ ಇರುವಾಗ ಈಗಿನ ಮೀಸಲಾತಿ ಗೊಂದಲದ ಬಗ್ಗೆ ಮತ್ತೊಂದು "ಉನ್ನತ ಮಟ್ಟದ ಸಮಿತಿ"ಯನ್ನು ಸರ್ಕಾರ ಮಾಡಹೊರಟಿರುವುದು ಅನೈತಿಕ ಮತ್ತು ಅನಾವಶ್ಯಕ. ಈಗಿನ ಮೀಸಲಾತಿ ಗೊಂದಲವನ್ನು ಸದರಿ ಆಯೋಗವೇ ಪರಿಹರಿಸಬೇಕೆಂಬುದು ನಮ್ಮ ಆಶಯ. ಈ ಕಾರಣಕ್ಕೆ ಸದರಿ ಸಮಿತಿಯನ್ನು ಈ ಕೂಡಲೇ ರದ್ದು ಪಡಿಸಬೇಕೆಂದು ಸರ್ಕಾರವನ್ನು ನಮ್ರವಾಗಿ ಒತ್ತಾಯಿಸುತ್ತೇವೆ. ಈ ಎಲ್ಲಾ ಗೊಂದಲಗಳನ್ನು ಪರಿಹರಿಸುವ ಏಕೈಕ ಮಾರ್ಗ ಸರ್ಕಾರದ ಮುಂದಿರುವುದೆಂದರೆ ಹಿಂದುಳಿದ ವರ್ಗಗಳ ಆಯೋಗ ಮಾಡಿರುವ "ಜಾತೀವಾರು ಸಮೀಕ್ಷೆ" (socio economical & educational survey)ಯನ್ನು ಸ್ವೀಕರಿಸಿ ಸಾರ್ವಜನಿಕ ವಾಗಿ ಚರ್ಚೆಗೆ ಬಿಟ್ಟು ಆಯೋಗ ನೀಡಿರುವ ಅಂಕಿಅಂಶಗಳ ಆಧಾರದ ಮೇಲೆ ಈಗಿರುವ ಪಟ್ಟಿಗಳನ್ನು ಪುನರ್ ಪರಿಶೀಲಿಸಿ ಪರಿಷ್ಕೃತ ಪಟ್ಟಿಗಳನ್ನು ರೂಪಿಸಬೇಕು ಎಂದು ಹೇಳಿದರು.

ವಿಧಾನ ಪರಿಷತ್ತಿನ ಸದಸ್ಯರಾದ ಪಿ. ಆರ್. ರಮೇಶ್ ಮಾತನಾಡಿ
ವೇದಿಕೆಯ ಉಪಾಧ್ಯಕ್ಷರು ಹಾಗೂ ವಿಧಾನ ಪರಿಷತ್ತಿನ ಸದಸ್ಯರಾದ ಪಿ. ಆರ್. ರಮೇಶ್ ಮಾತನಾಡಿ, ಇದು ಪ್ರವರ್ಗ 2(a) ನಲ್ಲಿರುವ ಅತಿ ಹಿಂದುಳಿದ, ಅಸಹಾಯಕ, ಅಸಂಘಟಿತ ಜಾತಿಗಳ ಜೀವನ್ಮರಣದ ಪ್ರಶ್ನೆ, ಹಾಗೇನಾದರೂ ಸರ್ಕಾರ ಬಲಿಷ್ಟರ ನ್ಯಾಯಬದ್ದವಲ್ಲದ ಒತ್ತಾಯಕ್ಕೆ ಮಣಿದರೆ ಇದು ತಬ್ಬಲಿ ಸಮುದಾಯಗಳ ಸಾಮೂಹಿಕ ಆತ್ಮಹತ್ಯೆಗೆ ಪ್ರೇರಣೆಯಾಗುತ್ತದೆ ಎಂದು ಅತ್ಯಂತ ನೋವಿನಿಂದ ಹೇಳುತ್ತಿದ್ದೇವೆ. ಬಲಿಷ್ಟರ ಈ ಅನ್ಯಾಯದ ಬೇಡಿಕೆಯನ್ನು ತೀವ್ರವಾಗಿ ವಿರೋಧಿಸುವ ನಾವು, ವೈಜ್ಞಾನಿಕವಾಗಿ, ನ್ಯಾಯಬದ್ದವಾಗಿ, ಸಾಂಪ್ರದಾಯಿಕವಾಗಿ ನಮಗೆ ದಕ್ಕಿರುವ ಹಕ್ಕು ಗಳಿಗೆ ಚ್ಯುತಿ ಬಾರದಂತೆ ನಮ್ಮ ಸಮುದಾಯಗಳಿಗೆ ರಕ್ಷಣೆ ನೀಡಿ ಸಾಮಾಜಿಕ ನ್ಯಾಯ ದಯಪಾಲಿಸಬೇಕೆಂದು ತಮ್ಮಲ್ಲಿ ಕಳಕಳಿಯಿಂದ ಮನವಿ ಮಾಡುತ್ತೇವೆ. ಸರ್ಕಾರ ನಮ್ಮ ನೈತಿಕ ಮತ್ತು ನ್ಯಾಯಬದ್ದ ಮನವಿಯನ್ನು ಮಾನ್ಯ ಮಾಡದಿದ್ದರೆ ಪ್ರವರ್ಗ 2(a) ಪಟ್ಟಿಯಲ್ಲಿರುವ ಎಲ್ಲಾ 102 ಜಾತಿವರ್ಗಗಳು ಸಂಘಟಿತವಾಗಿ ಬೀದಿಗಿಳಿದು ರಾಜ್ಯಾದ್ಯಂತ ಹೋರಾಟ ಮಾಡುವುದು ಅನಿವಾರ್ಯ ಎಂದು ಈ ಮೂಲಕ ನಮ್ರವಾಗಿ ಎಚ್ಚರಿಸುತ್ತಿದ್ದೇವೆ ಎಂದು ಹೇಳಿದರು.
Recommended Video

ಸಕಾರಾತ್ಮಕವಾಗಿ ಸ್ಪಂದಿಸುವ ಭರವಸೆ
ಅತಿ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆಯ ಗೌರವಾಧ್ಯಕ್ಷರಾದ ಮುಖ್ಯಮಂತ್ರಿ ಚಂದ್ರು, ವೇದಿಕೆಯ ಅಧ್ಯಕ್ಷರು ಎಂ.ಸಿ ವೇಣು ಗೋಪಾಲ್ ನೇತೃತ್ವದ ನಿಯೋಗದಲ್ಲಿ, ಮಾಜಿ ಸಭಾಪತಿ ವಿ. ಆರ್. ಸುದರ್ಶನ್, ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷರುಗಳಾದ ಡಾ. ಸಿ.ಎಸ್.ದ್ವಾರಕಾನಾಥ್, ಪ್ರೊ. ನರಸಿಂಹಯ್ಯ, ವಿದಾನಪರಿಷತ್ ಸದಸ್ಯರಾದ ಪಿ.ಆರ್.ರಮೇಶ್, ಕೆ.ಪಿ ನಂಜುಂಡಿ, ಪ್ರಧಾನ ಕಾರ್ಯದರ್ಶಿಗಳಾದ ಎಸ್ ಆರ್ ಯೆಲ್ಲಪ್ಪ, ವೇದಿಕೆಯ ಉಪಾಧ್ಯಕ್ಷ ರಾದ ಡಾ ಜಿ ರಮೇಶ್, ಹೆಚ್. ಸುಬ್ಬಣ್ಣ, ಸಿ. ನಂಜಪ್ಪ, ಬಿ. ವೆಂಕಟೇಶ್, ಬಸಬರಾಜು ಉಪಸ್ಥಿತರಿದ್ದರು.
ಅತಿ ಹಿಂದುಳಿದ ವರ್ಗಗಳಿಗೆ ಹೆಚ್ಚಿನ ಅನುದಾನ ನೀಡುವ ಭರವಸೆ: ಸಿಎಂ
ತಮ್ಮನ್ನು ಭೇಟಿಯಾದ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ನಿಯೋಗದ ಸಮಸ್ಯೆಗಳನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಆಲಿಸಿದರು. ನಂತರ ಮಾತನಾಡಿದ ಅವರು, ಈಗಾಗಲೇ ತಮ್ಮ ಬಜೆಟ್ ನಲ್ಲಿ ಘೋಷಣೆ ಮಾಡಿರುವ ಜೊತೆಗೆ ಹಿಂದುಳಿದ ವರ್ಗಗಳಿಗೆ ಇನ್ನಷ್ಟು ಹೆಚ್ಚಿನ ಅನುದಾನವನ್ನು ನೀಡುವ ಹಾಗೂ ಇನ್ನಿತರ ಮನವಿಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವ ಭರವಸೆ ನೀಡಿದರು.
-
Bengaluru : ಬಾಲ ಭವನ ಬೇಸಿಗೆ ಶಿಬಿರ 2026 ; ಕೇವಲ 1000 ರೂ.ಗೆ 10 ಬಗೆಯ ಕೌಶಲ್ಯ ತರಬೇತಿ, ಇಂದೇ ಅರ್ಜಿ ಸಲ್ಲಿಸಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ












Click it and Unblock the Notifications