ಬಾಡೂಟಕ್ಕೆ ಹೆದರಿ ಸೋನಿಯಾ ಕಾರ್ಯಕ್ರಮ ಬದಲು!

ವಿಧಾನಸಭೆ ಚುನಾವಣೆ ಮತ್ತು ಲೋಕಸಭೆ ಉಪ ಚುನಾವಣೆಯಲ್ಲಿ ಕರ್ನಾಟಕದ ಜನರು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿದ್ದಾರೆ. ಆದ್ದರಿಂದ ಮತದಾರರಿಗೆ ಅಭಿನಂದನೆ ಸಲ್ಲಿಸಲು ಸೋನಿಯಾ ಮಂಡ್ಯ ಜಿಲ್ಲೆಗೆ ಆಗಮಿಸಿ ಅಭಿನಂದನೆ ಸಲ್ಲಿಸಲಿದ್ದಾರೆ.
ಮೊದಲು ಸೆ.30ರಂದು ಸೋನಿಯಾ ಗಾಂಧಿ ಮಂಡ್ಯಕ್ಕೆ ಆಗಮಿಸಲಿದ್ದಾರೆ ಎಂದು ಘೋಷಿಸಲಾಗಿತ್ತು. ನಂತರ ಅ.4ಕ್ಕೆ ಕಾರ್ಯಕ್ರಮ ಮುಂದೂಡಲಾಯಿತು. ಪುನಃ ಸೆ.30ರ ಸೋಮವಾರ ಆಗಮಿಸಲಿದ್ದಾರೆ ಎಂದು ಪ್ರಕಟಿಸಲಾಯಿತು. (ಸೆ.30ರಂದು ಕರ್ನಾಟಕಕ್ಕೆ ಸೋನಿಯಾ ಭೇಟಿ)
ಇಷ್ಟೆಲ್ಲಾ ಗೊಂದಲಗಳಿಗೆ ಕಾರಣವಾಗಿದ್ದು ಮಂಡ್ಯ ಜಿಲ್ಲೆಯಲ್ಲಿ ಪ್ರಸಿದ್ಧಿ ಪಡೆದಿರುವ ಬಾಡೂಟ. ಹೌದು ಅ.4ರಂದು ಮಹಾಲಯ ಅಮಾವಾಸ್ಯೆ ಅಂದು ರಾಜ್ಯದಲ್ಲಿ ಜನರು ಬಾಡೂಟದಲ್ಲಿ ಬ್ಯುಸಿ ಆಗಿರುತ್ತಾರೆ. ಮಂಡ್ಯ, ತುಮಕೂರು, ಮೈಸೂರು, ಹಾಸನ ಮುಂತಾದ ಜಿಲ್ಲೆಗಳಲ್ಲೂ ಮಹಾಲಯ ಅಮಾವಾಸ್ಯೆ ಜೋರು.
ಜನರೆಲ್ಲರು ಅ.4 ರಂದ ಬಾಡೂಟದಲ್ಲಿ ಪಾಲ್ಗೊಳ್ಳುತ್ತಾರೆ ಎಂದು ಕಾಂಗ್ರೆಸ್ ನಾಯಕರು ಅರ್ಥ ಮಾಡಿಕೊಂಡಿದ್ದಾರೆ. ಸೋನಿಯಾ ಮೇಡಂ ಬಂದಾಗ ಜನರಿಲ್ಲದೆ ಪರಿತಪಿಸುವುದು ಬೇಡ ಎಂದು ಕಾರ್ಯಕ್ರಮವನ್ನು ಪುನಃ ಸೆ.30ರಂದು ಆಯೋಜಿಸಲು ತೀರ್ಮಾನಿಸಿದ್ದಾರೆ. ರಮ್ಯಾ ಸಭೆಯಲ್ಲಿ ಸೋನಿಯಾ ಮೇಡಂ ಲಡ್ಡು ವಿತರಣೆ
ಮಂಡ್ಯ ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳ ಕಾಂಗ್ರೆಸ್ ಕಾರ್ಯಕರ್ತರು ಸೋನಿಯಾ ಗಾಂಧಿ ಆಗಮಿಸುವ ಸಮಾವೇಶವನ್ನು ಭರ್ಜರಿಯಾಗಿ ನಡೆಸಲು ಆಲೋಚಿಸಿದ್ದಾರೆ. ಇಂತಹ ಸಂರ್ಭದಲ್ಲಿ ಜನರ ಕೊರತೆ ಎದುರಾಗಬಾರದು ಎಂದು ಅ.4ರ ಕಾರ್ಯಕ್ರಮ ರದ್ದುಗೊಳಿಸಿದ್ದಾರೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications