ಡೆಬಿಟ್ ಕಾರ್ಡ್ ಕಳ್ಳ ಎಟಿಎಂ ಅರುಣ್ ಸೆರೆ, 1.60 ಲಕ್ಷ ರೂ. ವಶ
ಬೆಂಗಳೂರು, ಅ. 20: ಡೆಬಿಟ್ ಕಾರ್ಡ್ಗಳನ್ನು ಬದಲಾಯಿಸಿ ಹಣ ಡ್ರಾ ಮಾಡಿ ವಂಚಿಸುತ್ತಿದ್ದ ಆರೋಪಿಯ ಬಂಧಿಸಲಾಗಿದೆ. ಡೆಬಿಟ್ ಕಾರ್ಡ್ನಲ್ಲಿ ಖರೀದಿಸಿದ್ದ ಮೊಬೈಲ್ ಫೋನ್, ಚಿನ್ನಾಭರಣ ಮತ್ತು ನಗದು ಹಣ ಒಟ್ಟು 1.60 ಲಕ್ಷ ರೂ. ವಶ ಪಡೆಸಿಕೊಳ್ಳಲಾಗಿದೆ ಎಂದು ಬಾಗಲಗುಂಟೆ ಪೊಲೀಸರು ಹೇಳಿದ್ದಾರೆ.
ಬಾಗಲಗುಂಟೆ ಪೊಲೀಸ್ ಠಾಣಾ ಸರಹದ್ದಿನ ಪಿರ್ಯಾದುದಾರರಾದ ನಾಗಸಂದ್ರ ನಿವಾಸಿ ನಾಗರಾಜು(46) ಎಂಬುವರು ಅಕ್ಟೋಬರ್ 4 ರಂದು ಮಧ್ಯಾಹ್ನ 12-00 ಗಂಟೆಯ ಸಮಯದಲ್ಲಿ ಹೆಸರುಘಟ್ಟ ಮುಖ್ಯರಸ್ತೆಯ ತ್ರಿವೇಣಿ ಸ್ಕೂಲ್ ಪಕ್ಕದ ಕರ್ನಾಟಕ ಎಟಿಎಂ ಕೇಂದ್ರದಲ್ಲಿ ಹಣ ತುಂಬಲು ಹೋಗಿರುತ್ತಾರೆ. ಅವರ ಹಿಂಭಾಗದಲ್ಲಿ ನಿಂತಿದ್ದ ಅಸಾಮಿಯನ್ನು ಸಹಾಯ ಕೇಳಿದಾಗ ಸದರಿ ಅಸಾಮಿಯು ಪಿರ್ಯಾದುದಾರರ ಡೆಬಿಟ್ ಕಾರ್ಡ್ ಬದಲಾಗಿ ಬೇರೊಂದು ಡೆಬಿಟ್ ಕಾರ್ಡ್ ನೀಡಿ, ಪಿರ್ಯಾದುದಾರರ ಡೆಬಿಟ್ ಕಾರ್ಡ್ನಿಂದ 32,000/-ರೂ. ಗಳ ಹಣವನ್ನು ಡ್ರಾ ಮಾಡಿಕೊಂಡ ಸಂಬಂಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಮೋಸದ ಪ್ರಕರಣ ದಾಖಲಾಗಿರುತ್ತದೆ.
ಈ ಪ್ರಕರಣದ ಆರೋಪಿಯಾದ ತುಮಕೂರು ಜಿಲ್ಲೆ ರಾಮಲಿಂಗಪುರದ ನಿವಾಸಿ ಅರುಣ್ ಕುಮಾರ್ ಅಲಿಯಾಸ್ ಎಟಿಎಂ ಅರುಣ್(30 ವರ್ಷ) ಎಂಬುವನನ್ನು ದಸ್ತಗಿರಿ ಮಾಡಲಾಗಿದೆ. ಆರೋಪಿಯು ಡೆಬಿಟ್ ಕಾರ್ಡ್ನಲ್ಲಿ ಖರೀದಿಸಿದ್ದ ಸುಮಾರು 1.6 ಲಕ್ಷ ರೂ. ಮೌಲ್ಯದ 2-ಮೊಬೈಲ್ ಫೋನ್ಗಳು, 3.07 ಗ್ರಾಂ ತೂಕದ ಚಿನ್ನದ ಒಡವೆಗಳು, ಡೆಬಿಟ್ ಕಾರ್ಡ್ನಿಂದ ಡ್ರಾ ಮಾಡಿದ್ದ ನಗದು ಹಣ 1,13,000/-ರೂ. ಕರ್ನಾಟಕ ಬ್ಯಾಂಕ್ನ 1-ಡೆಬಿಟ್ ಕಾರ್ಡ್ ಅನ್ನು ವಶಪಡಿಸಿಕೊಳ್ಳುವಲ್ಲಿ ಬಾಗಲಗುಂಟೆ ಪೊಲೀಸರು ಯಶಸ್ವಿಯಾಗಿರುತ್ತಾರೆ.

ಆರೋಪಿಯನ್ನು ಹೆಚ್ಚಿನ ವಿಚಾರಣೆಗೊಳಪಡಿಸಿದಾಗ ಆರೋಪಿಯು ಎಟಿಎಂ ಸೆಂಟರ್ಸ್ ಬಳಿ ನಿಂತುಕೊಂಡು ಹಣ ಡ್ರಾ ಮಾಡಲು ಬಂದು ಸಹಾಯ ಕೇಳುವ ಸಾರ್ವಜನಿಕರಿಗೆ ಹಣ ಡ್ರಾ ಮಾಡಿಕೊಡುವ ನೆಪದಲ್ಲಿ ಅವರ ಡೆಬಿಟ್ ಕಾರ್ಡ್ಗಳನ್ನು ಬದಲಾವಣೆ ಕೊಂಡು ಆ ಡೆಬಿಟ್ ಕಾರ್ಡ್ಅನ್ನು ಬಳಿಸಿಕೊಂಡು ಹಣ ಡ್ರಾ ಮಾಡುವುದಾಗಿ ತಿಳಿಸಿರುತ್ತಾನೆ. ಆರೋಪಿಯು 2017 ನೇ ಸಾಲಿನಲ್ಲಿ ಶಿರಾ ಪೊಲೀಸ್ ಠಾಣೆ-2, 2019 ನೇ ಸಾಲಿನಲ್ಲಿ ತುಮಕೂರು ಟೌನ್ ಪೊಲೀಸ್ ಠಾಣೆ-2, ಮಧುಗಿರಿ ಪೊಲೀಸ್ ಠಾಣೆ-2 ಮೋಸದ ಪ್ರಕರಣದಲ್ಲಿ ಜೈಲಿಗೆ ಹೋಗಿ ಜಾಮೀನಿನ ಮೇಲೆ ಹೊರಬಂದಿರುವುದಾಗಿ ತನಿಖೆಯಿಂದ ತಿಳಿದು ಬಂದಿರುತ್ತದೆ.
ಆರೋಪಿಯ ಬಂಧನದಿಂದ ಬಾಗಲುಗುಂಟೆ ಪೊಲೀಸ್ ಠಾಣೆ-2, ಉತ್ತರ ವಿಭಾಗದ ಸೆನ್ ಕ್ರೈಂ ಪೊಲೀಸ್ ಠಾಣೆ -1 ಮತ್ತು ಪೀಣ್ಯ ಪೊಲೀಸ್ ಠಾಣೆಯ-1 ಒಟ್ಟು 4 ಮೋಸದ ಪ್ರಕರಣಗಳು ಪತ್ತೆಯಾಗಿರುತ್ತವೆ.

ಈ ಪ್ರಕರಣದಲ್ಲಿ ಶ್ರೀಮತಿ ರೀನಾ ಸುವರ್ಣ, ಎಸಿಪಿ, ಪ್ರಭಾರ ಯಶವಂತಪುರ ಉಪ ವಿಭಾಗ ರವರ ಮಾರ್ಗದರ್ಶನದಲ್ಲಿ ವೆಂಕಟೇಗೌಡ, ಪೊಲೀಸ್ ಇನ್ಸ್ ಪೆಕ್ಟರ್, ಬಾಗಲಗುಂಟೆ ಪೊಲೀಸ್ ಠಾಣೆ ಹಾಗೂ ಪಿಎಸ್ಐ ಕುಮಾರ್.ಎಂ, ಶ್ರೀಕಂಠೇಗೌಡ.ಬಿ, ಆಂಜಿನಪ್ಪ, ಪ್ರಭು ಕೆ.ಎಲ್. ಲೋಕೇಶ್, ಸಂತೋಷ್ಕುಮಾರ್, ನಾಗೇಶ್ ರವರು ಹಾಗೂ ಹೆಚ್.ಸಿ.ರವರುಗಳಾದ ಹನುಮೇಗೌಡ, ಕುಮಾರಸ್ವಾಮಿ, ಶ್ರೀನಿವಾಸ್, ಪಂಚಾಕ್ಷರಿ, ರಜತ್ಕುಮಾರ್, ಪಿ.ಸಿ. ರವರುಗಳಾದ ಪ್ರಕಾಶ್ ಖಿಲಾರಿ, ಪುರುಷೋತ್ತಮ್ ರವರುಗಳು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications