ಲಾಲ್ ಬಾಗ್ ಫಲಪುಷ್ಪ ಪ್ರದರ್ಶನದಲ್ಲಿ ಬಾಹುಬಲಿ ಪ್ರತಿಕೃತಿ
ಬೆಂಗಳೂರು, ಡಿಸೆಂಬರ್ 13 : ಲಾಲ್ ಬಾಗ್ ನಲ್ಲಿ ಜನವರಿ 19 ರಿಂದ ಪ್ರಾರಂಭವಾಗಲಿರುವ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನದಲ್ಲಿ ಶ್ರವಣಬೆಳಗೊಳದ ಬಾಹುಬಲಿ ಪ್ರತಿಕೃತಿ ನಿರ್ಮಾಣಗೊಳ್ಳಲಿದೆ.
ಈ ಬಾರಿ ಫಲಪುಷ್ಪ ಪ್ರದರ್ಶನದ ಅಂಗವಾಗಿ ಗಾಜಿನ ಮನೆಯಲ್ಲಿ ಬಾಹುಬಲಿ( ಗೊಮ್ಮಟೇಶ್ವರ) ಪ್ರತಿಮೆ ನಿರ್ಮಿಸಲು ಮೈಸೂರು ಉದ್ಯಾನ ಕಲಾಸಂಘ ಹಾಗೂ ತೋಟಗಾರಿಕೆ ಇಲಾಖೆ ನಿರ್ಧರಿಸಿದೆ. ಪುಷ್ಪ ಪ್ರದರ್ಶನ

ಜನವರಿ 19 ರಿಂದ ರಿಂದ ಜನವರಿ 28 ರವರಗೆ ನಡೆಯಲಿದೆ. ಪ್ರತಿ ವರ್ಷ ಫಲಪುಷ್ಪ ಪ್ರದರ್ಶನದಲ್ಲಿ ದೇಶದ ಪ್ರತಿಷ್ಠಿತ ಸ್ಮಾರಕಗಳನ್ನು ನಿರ್ಮಿಸಿ ಪುಷ್ಪ ಪ್ರೇಮಿಗಳನ್ನು ರಂಜಿಸುವುದು ಪದ್ಧತಿಯಾಗಿತ್ತು.
ಈ ಸಲ ಸ್ವಾತಂತ್ರ್ಯೋತ್ಸವ ಪ್ರದರ್ಶನದಲ್ಲಿ ಕುವೆಂಪು ಮನೆ, ಕವಿಶೈಲ ಎಲ್ಲರ ಗಮನ ಸೆಳೆದಿತ್ತು.12 ವರ್ಷಕ್ಕೊಮ್ಮೆ ನಡೆಯುವ ಮಹಾಮಸ್ತಕಾಭಿಷೇಕ 2018ರ ಫೆಬ್ರುವರಿಯಲ್ಲಿ ನಡೆಯುತ್ತಿದೆ.
ಬಾಹುಬಲಿಯ ಚರಿತ್ರೆ ತಿಳಿಸಲು ಇದು ಸಕಾಲ. ಹಾಗಾಗಿ ಈ ವಿಷಯವನ್ನು ಆಯ್ದುಕೊಳ್ಳಲಾಗಿದೆ ಎಂದು ತೋಟಗಾರಿಕೆ
ಇಲಾಖೆಯ ಜಂಟಿ ನಿರ್ದೇಶಕ ಡಾ. ಎಂ.ಜಗದೀಶ್ ತಿಳಿಸಿದರು. ಶ್ರವಣಬೆಳಗೊಳದಲ್ಲಿ 58.8 ಅಡಿ ಎತ್ತರದ ಗೊಮ್ಮಟ ಮೂರ್ತಿ ಇದೆ. ಅಷ್ಟೇ ಎತ್ತರ ನಿರ್ಮಿಸಲು ಸಾಧ್ಯವಾಗದು.
ಎಷ್ಟು ಎತ್ತರದ ಮೂರ್ತಿ ನಿರ್ಮಿಸಬೇಕು, ಅದಕ್ಕೆ ಹೂ ಎಷ್ಟು ಬೇಕಾಗುತ್ತದೆ ಎಂಬ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ ಎಂದರು.
ಫಲಪುಷ್ಪ ಪ್ರದರ್ಶನದಲ್ಲಿ ಸಾಕಷ್ಟು ಪ್ರತಿಮೆಗಳ ಪ್ರತಿಕೃತಿ ನಿರ್ಮಿಸಿದ್ದೇವೆ. ಆದರೆ, ದೇವರ ಮೂರ್ತಿಯ ಪ್ರತಿರೂಪ ನಿರ್ಮಿಸುತ್ತಿರುವುದು ಇದೇ ಮೊದಲು. 2010ರಲ್ಲಿ ಹಂಪಿಯ ಕಲ್ಲಿನ ರಥದ ಪ್ರತಿಕೃತಿ ನಿರ್ಮಿಸಿದ್ದೆವು.
2012ರಲ್ಲಿ ಸಾಂಚಿಯಲ್ಲಿನ ಬುದ್ಧನ ಸ್ತೂಪ ಗಾಜಿನ ಮನೆಯಲ್ಲಿ ಅನಾವರಣಗೊಂಡಿತ್ತು ಎಂದು ವಿವರಿಸಿದರು.
ಈ ಸಲದ ಆಕರ್ಷಣೆಗಳು: ಕೆರೆಯ ನೀರು ಶುದ್ಧೀಕರಿಸಲು ಲಾಲ್ಬಾಗ್ನಲ್ಲಿ ನಿರ್ಮಿಸಲಾಗುತ್ತಿರುವ ಸಣ್ಣ ನಯಾಗಾರ ಈ ಬಾರಿಯ ಫಲಪುಷ್ಪ ಪ್ರದರ್ಶನದ ಆಕರ್ಷಣೆಯ ಕೇಂದ್ರ ಬಿಂದುವಾಗಲಿದೆ. ಹಾಗಾಗಿ
ಪ್ರದರ್ಶನಕ್ಕೂ ಮುನ್ನವೇ ಜಲಪಾತದ ಉದ್ಘಾಟನೆ ನಡೆಸಲು ಇಲಾಖೆ ಚಿಂತನೆ ನಡೆಸಿದೆ. ಜೊತೆಗೆ ಜವರಾಯ ಜಲಪಾತವನ್ನು ಜನರು ಕಣ್ತುಂಬಿಕೊಳ್ಳಬಹುದು.
ಲಾಲ್ಬಾಗ್ನ ಪಾರಂಪರಿಕ ಕಟ್ಟಡಗಳಲ್ಲಿ ಒಂದಾಗಿರುವ ಡಾ. ಎಂ. ಎಚ್. ಮರಿಗೌಡ ರಾಷ್ಟ್ರೀಯ ತೋಟಗಾರಿಕೆ ಗ್ರಂಥಾಲಯ ನವೀಕರಣ ಕೆಲಸವೂ ಮುಕ್ತಾಯ ಹಂತಕ್ಕೆ ಬಂದಿದ್ದು, ಫಲಪುಷ್ಪ ಪ್ರದರ್ಶನದ ವೇಳೆಗೆ
ಸಾರ್ವಜನಿಕರ ವೀಕ್ಷಣೆಗೆ ಸಾಧ್ಯವಾಗಿಸಲು ಪ್ರಯತ್ನಿಸುತ್ತಿದ್ದೇವೆ. ಶೀಘ್ರ ಲೋಕಾರ್ಷಣೆ ಮಾಡುತ್ತೇವೆ ಎಂದು ಜಗದೀಶ್ ತಿಳಿಸಿದರು.
-
ಬೆಂಗಳೂರು-ಮಂಗಳೂರು ಮಧ್ಯ ನಿತ್ಯ ತಡರಾತ್ರಿ ವಿಮಾನ ಸೇವೆ, ಯಾವಾಗ? ಸಮಯ-ವೇಳಾಪಟ್ಟಿ ಇಲ್ಲಿದೆ -
Karnataka Highways: 1846 ಕಿಮೀ ರಾಜ್ಯ ಹೆದ್ದಾರಿ ಅಭಿವೃದ್ಧಿಗೆ 5000 ಕೋಟಿ ರೂ ಘೋಷಣೆ -
Karnataka Weather: ಮಾರ್ಚ್ 12ರ ವರೆಗೆ ಬೆಂಗಳೂರು ಸೇರಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುನ್ಸೂಚನೆ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
ಬೆಂಗಳೂರು, ವಿದ್ಯಾಕಾಶಿ ಧಾರವಾಡದಲ್ಲಿ "ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್" ಆರಂಭ: ಬಜೆಟ್ನಲ್ಲಿ ಘೋಷಣೆ -
ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ: ಇದು ನಿಜಕ್ಕೂ ಕಾರ್ಯಸಾಧುವೆ? ತಜ್ಞರು ಹೇಳುವುದೇನು? -
Tamarind Cultivation: ಹೊಸಪೇಟೆ ಹುಣಸೆ ಘಟಕಕ್ಕೆ ವಿಶ್ವಬ್ಯಾಂಕ್ ಉನ್ನತ ಮಟ್ಟದ ತಂಡ ಭೇಟಿ, ರೈತರಿಗೆ ಗುಡ್ನ್ಯೂಸ್ ನಿರೀಕ್ಷೆ -
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Oil Import: ತೈಲ ಆಮದಿಗೆ ವಿದೇಶಗಳ ಅನುಮತಿ ಬೇಕಿಲ್ಲ: ಭಾರತದ ಸ್ವತಂತ್ರ ಇಂಧನ ನೀತಿ ಹೊಂದಿದೆ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್












Click it and Unblock the Notifications