ಬೈಯಪ್ಪನಹಳ್ಳಿ- ಕೃಷ್ಣರಾಜಪುರಂ ಮೆಟ್ರೋ ಪ್ರಯೋಗಿಕ ಸಂಚಾರ ಆರಂಭ ದಿನಾಂಕ
ಬೆಂಗಳೂರು, ಜುಲೈ 15: ಬೆಂಗಳೂರಿನ ಬಹುನಿರೀಕ್ಷಿತ ಬೈಯಪ್ಪನಹಳ್ಳಿ-ಕೃಷ್ಣರಾಜಪುರಂ ನೇರಳೆ ಮಾರ್ಗದಲ್ಲಿ ಮೆಟ್ರೋ ಪ್ರಾಯೋಗಿಕ ಚಾಲನೆ ಆಗಸ್ಟ್ 22 ರಂದು ಪ್ರಾರಂಭವಾಗಲಿದೆ ಎಂದು ವರದಿಗಳು ತಿಳಿಸಿವೆ.
ಟೆಕ್ ಹಬ್ ಆದ ಬೆಂಗಳೂರಿನಲ್ಲಿ ಸಾರ್ವಜನಿಕ ಸಾರಿಗೆ ಸುಲಭಗೊಳಿಸಲು, ಟ್ರಾಫಿಕ್ ನಿಯಂತ್ರಣ, ಸಂಪರ್ಕ ಸಾಧ್ಯತೆ ಹೆಚ್ಚಿಸುವ ನಿರೀಕ್ಷೆಯಿರುವ ನಮ್ಮ ಮೆಟ್ರೋದ ನೇರಳೆ ಮಾರ್ಗವು ಆಗಸ್ಟ್ ಅಂತ್ಯದ ವೇಳೆಗೆ ಸಂಪೂರ್ಣವಾಗಿ ಕಾರ್ಯಾರಂಭ ಮಾಡಲಿದೆ ಎಂದು ತಿಳಿದು ಬಂದಿದೆ.

ವರದಿಯ ಪ್ರಕಾರ, ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ಅದೇ ದಿನ ಕೆಂಗೇರಿ-ಚಲ್ಲಘಟ್ಟ ಮಾರ್ಗದ ಟ್ರಯಲ್ ರನ್ಗೆ ಸಜ್ಜಾಗಿದೆ. ಬೈಯಪ್ಪನಹಳ್ಳಿ- ಕೃಷ್ಣರಾಜಪುರ ಮತ್ತು ಕೆಂಗೇರಿ-ಚಲ್ಲಘಟ್ಟ ಮಾರ್ಗಗಳನ್ನು ಆಗಸ್ಟ್ ಅಂತ್ಯದೊಳಗೆ ಉದ್ಘಾಟಿಸುವ ಯೋಜನೆ ಇದೆ. ಆಗಸ್ಟ್ 22 ರಂದು ನೇರಳೆ ಮಾರ್ಗದ ಎರಡೂ ಸ್ಟ್ರೆಚ್ಗಳಲ್ಲಿ ಟ್ರಯಲ್ ರನ್ಗಳು ಪ್ರಾರಂಭವಾಗಲಿವೆ ಎಂದು ಬಿಎಂಆರ್ಸಿಎಲ್ ಎಂಡಿ ಅಂಜುಮ್ ಪರ್ವೇಜ್ ತಿಳಿಸಿದ್ದಾರೆ.
ಈ ಮಾರ್ಗದಲ್ಲಿ ಆರು ಕೋಚ್ ಮೆಟ್ರೋ ರೈಲುಗಳೊಂದಿಗೆ ಟ್ರಯಲ್ ರನ್ ನಡೆಸಲಾಗುವುದು, ನಂತರ ಬೆನ್ನಗಾನಹಳ್ಳಿಯ ಭಾರತೀಯ ರೈಲ್ವೇಸ್ ಟ್ರ್ಯಾಕ್ನ ಮೇಲ್ಭಾಗದಲ್ಲಿ ಸ್ಥಾಪಿಸಲಾದ ಓಪನ್ ವೆಬ್ ಗ್ರೈಂಡರ್ (OWG) ನ ಲೋಡ್ ಪರೀಕ್ಷೆಯನ್ನು ನಡೆಸಲಾಗುತ್ತದೆ. ಸಿಎಂಆರ್ಎಸ್ (ಮೆಟ್ರೊ ರೈಲು ಸುರಕ್ಷತೆಯ ಕಮಿಷನರ್) ನಂತರ ಮಾರ್ಗವನ್ನು ಪರಿಶೀಲಿಸಿ ಉದ್ಘಾಟನೆಗೆ ಅನುಮೋದನೆ ನೀಡುತ್ತದೆ ಎಂದು ಅವರು ಹೇಳಿದ್ದಾರೆ.

ಕೆಆರ್ ಪುರಂ - ಬೈಯಪ್ಪನಹಳ್ಳಿ, ಸುಮಾರು ಎರಡು ಕಿಲೋಮೀಟರ್ಗಳು, ವೈಟ್ಫೀಲ್ಡ್ ಪ್ರದೇಶವನ್ನು ಕೆಂಗೇರಿ, ಚಲ್ಲಘಟ್ಟ, ಮೆಜೆಸ್ಟಿಕ್ ಮತ್ತು ಬೆಂಗಳೂರಿನ ಇತರ ಭಾಗಗಳಿಗೆ ಸಂಪರ್ಕಿಸುತ್ತದೆ. ಹಿಂದಿನ ಬಿಜೆಪಿ ನೇತೃತ್ವದ ಸರ್ಕಾರದ ಅವಧಿಯಲ್ಲಿ ವೈಟ್ಫೀಲ್ಡ್-ಕೆಆರ್ ಪುರಂ ಮಾರ್ಗವನ್ನು ಪ್ರಾರಂಭಿಸಲಾಗಿತ್ತು.
ಆದರೆ ಈ ಮೆಟ್ರೋ ಪ್ರಮುಖ ವಿಸ್ತರಣೆಯ ಕಾಮಗಾರಿಗಳನ್ನು ಪೂರ್ಣಗೊಳಿಸಲು ಸಾಧ್ಯವಾಗದೆ ಟೀಕೆಗಳನ್ನು ಎದುರಿಸಿತ್ತು. ನಂತರ BMRCL ಅವರು ಬೆಂಗನಹಳ್ಳಿ ರೈಲು ನಿಲ್ದಾಣದ ಮೇಲೆ ತೆರೆದ ವೆಬ್ ಗ್ರೈಂಡರ್ ಅನ್ನು ಸ್ಥಾಪಿಸಬೇಕಾಗಿದೆ ಎಂದು ಸ್ಪಷ್ಟಪಡಿಸಿದರು. ಇದಕ್ಕೆ ಭಾರತೀಯ ರೈಲ್ವೇಯಿಂದ ಅನುಮತಿ ಬೇಕಾಗಿದೆ.
ಇದಲ್ಲದೆ ನಿನ್ನೆಯಷ್ಟೇ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಲಕ್ಕಸಂದ್ರ ಸುರಂಗ ಮಾರ್ಗ ಹಾಗೂ ಮಹಾತ್ಮ ಗಾಂಧಿ ರಸ್ತೆಯ ಸುರಂಗ ಸ್ಟೇಷನ್ ಬಳಿ ನಡೆಯುತ್ತಿರುವ ಕಾಮಗಾರಿ ಸ್ಥಳಕ್ಕೆ ಶುಕ್ರವಾರ ತೆರಳಿ ಪರಿಶೀಲನೆ ನಡೆಸಿದರು. ಮೆಟ್ರೋ ಸುರಂಗ ಕಾಮಗಾರಿ ಬಹಳ ಉತ್ತಮವಾಗಿ ಸಾಗುತ್ತಿದೆ. ಅಧಿಕಾರಿಗಳು ಎಷ್ಟೇ ಹೇಳಿದರೂ ಕಾಮಗಾರಿಯ ಪ್ರಗತಿಯನ್ನು ನಾನು ಕಣ್ಣಾರೆ ನೋಡಬೇಕು ಎಂದು ಇಲ್ಲಿಗೆ ಭೇಟಿ ನೀಡಿದ್ದೇನೆ ಎಂದರು.
ಅಧಿಕಾರಿಗಳ ಮಾಹಿತಿ ಪ್ರಕಾರ 20.9 ಕಿಮೀ ಸುರಂಗ ಮಾರ್ಗ ಆಗಿದೆ. ಒಟ್ಟು 18 ನಿಲ್ದಾಣಗಳನ್ನು ಮಾಡಲಾಗುತ್ತಿದೆ. ನಾಲ್ಕು ಪ್ಯಾಕೆಜ್ ನಲ್ಲಿ ಈ ಯೋಜನೆ ತೆಗೆದುಕೊಳ್ಳಲಾಗಿದೆ. ಕೆಲವೆಡೆ ಕಾಮಗಾರಿ ಪೂರ್ಣಗೊಂಡಿದ್ದರೆ, ಮತ್ತೆ ಕೆಲವು ಕಡೆಗಳಲ್ಲಿ 70%, 80% ಪೂರ್ಣವಾಗಿದೆ. 2025ರ ಮಾರ್ಚ್ ವೇಳೆಗೆ ಈ ಮೆಟ್ರೋ ಕಾಮಗಾರಿ ಪೂರ್ಣವಾಗಲಿದೆ " ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ನಿಗದಿತ ಸಮಯದಲ್ಲಿ ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳು, ಗುತ್ತಿಗೆದಾರರು, ಸರಕಾರ ಎಲ್ಲರ ಸಹಕಾರ ಬೇಕು. ಬ್ರ್ಯಾಂಡ್ ಬೆಂಗಳೂರು ನಿರ್ಮಾಣ ಮಾಡಲು ಟ್ರಾಫಿಕ್ ಸಮಸ್ಯೆ ನಿವಾರಣೆಗೆ ಆದ್ಯತೆ ನೀಡಿ ಕಾಮಗಾರಿ ತೀವ್ರಗತಿಯಲ್ಲಿ ಸಾಗುತ್ತಿದೆ. ಬೆಂಗಳೂರಿನ ಅಭಿವೃದ್ಧಿಗಾಗಿ ಬಹಳ ದೊಡ್ಡ ಯೋಜನೆಗಳ ಬಗ್ಗೆ ಚರ್ಚೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Gold: ದುಬೈಯಿಂದ ಭಾರತಕ್ಕೆ ಚಿನ್ನದ ಪೂರೈಕೆ ಪುನರಾರಂಭ; ಗ್ರಾಹಕರ ನಿರ್ಧಾರದಿಂದ ಬೆದರಿದ ವ್ಯಾಪಾರಿಗಳು -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ












Click it and Unblock the Notifications