ವಾಹನ ಸವಾರರು, ಗಮನಿಸಬೇಕಾಗಿ ವಿನಂತಿ..! ಬೆಂಗಳೂರಿನಲ್ಲಿ ನಾಳೆ ಬಕ್ರೀದ್ ಆಚರಣೆ: ಸಂಚಾರ ನಿರ್ಬಂಧಗಳನ್ನು ಇಲ್ಲಿ ಪರಿಶೀಲಿಸಿ
ಬೆಂಗಳೂರು, ಜೂನ್ 28: ಬೆಂಗಳೂರಿನಲ್ಲಿ ಗುರುವಾರ ಬಕ್ರೀದ್ (ಈದ್ ಅಲ್-ಅಧಾ) ಹಬ್ಬವನ್ನು ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಗರದಾದ್ಯಂತ ಹಲವಾರು ಸಂಚಾರ ವ್ಯತ್ಯಯಗಳನ್ನು ಘೋಷಿಸಲಾಗಿದೆ. ಬೆಳಗ್ಗೆ 8 ರಿಂದ 11.30 ರ ವರೆಗೆ ಸಂಚಾರ ವ್ಯತ್ಯಯ ಇರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
'ಗುರುವಾರ ಚಾಮರಾಜಪೇಟೆಯಲ್ಲಿರುವ ಈದ್ಗಾ ಮೈದಾನದಲ್ಲಿ ಬಕ್ರೀದ್ ಆಚರಿಸಲಾಗುವುದು. ಈ ಹಿನ್ನೆಲೆಯಲ್ಲಿ ಪಶ್ಚಿಮ ವಿಭಾಗದ ವ್ಯಾಪ್ತಿಯಲ್ಲಿ ಸಂಚಾರ ನಿರ್ಬಂಧಗಳು ಜಾರಿಯಲ್ಲಿರುತ್ತವೆ ಎಂದು ಬೆಂಗಳೂರು ಸಂಚಾರ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಯಾಣಿಕರು ಗಮನಿಸಬೇಕಿಗಿ ವಿನಂತಿ
ಬಸವೇಶ್ವರ ವೃತ್ತದಿಂದ ಸಿಐಡಿ ಜಂಕ್ಷನ್ವರೆಗೆ ಸಂಚಾರವನ್ನು ನಿರ್ಬಂಧಿಸಲಾಗಿರುವುದರಿಂದ ಪ್ರಯಾಣಿಕರು ದೇವರಾಜ ಅರಸು ರಸ್ತೆಯನ್ನು ಬಳಸಲು ಕೋರಲಾಗಿದೆ.
ಲಾಲ್ಬಾಗ್ ಮುಖ್ಯ ಗೇಟ್ನಿಂದ ಕಣ್ಣಪ್ಪ ಪೆಟ್ರೋಲ್ ಬಂಕ್ವರೆಗೆ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಪ್ರಯಾಣಿಕರು ಊರ್ವಶಿ, ಸಿದ್ದಯ್ಯ ರಸ್ತೆ, 34ನೇ ಜಂಕ್ಷನ್, ವಿಲ್ಸನ್ ಗಾರ್ಡನ್ ಮುಖ್ಯರಸ್ತೆ ಮತ್ತು ಹೊಸೂರು ರಸ್ತೆಯನ್ನು ಬಳಸಲು ಸೂಚಿಸಲಾಗಿದೆ.
ಟೋಲ್ ಗೇಟ್ ಜಂಕ್ಷನ್ನಿಂದ ಶಿರಸಿ ವೃತ್ತದವರೆಗೆ ಸಂಚಾರ ನಿರ್ಬಂಧಿಸಿರುವುದರಿಂದ ಸಿರ್ಸಿ ವೃತ್ತದಿಂದ ಬಲ ತಿರುವು ಪಡೆದು ಬಿನ್ನಿ ಮಿಲ್, ಟ್ಯಾಂಕ್ ಬಂಡ್ ರಸ್ತೆ, ಮಾಗಡಿ ರಸ್ತೆ ಮತ್ತು ವಿಜಯನಗರ ಮಾರ್ಗವಾಗಿ ಮೈಸೂರು ರಸ್ತೆಗೆ ಸಂಪರ್ಕ ಕಲ್ಪಿಸುವಂತೆ ಪ್ರಯಾಣಿಕರಿಗೆ ಸೂಚಿಸಲಾಗಿದೆ.

ಮೈಸೂರು ರಸ್ತೆಯಿಂದ ಸಿಟಿ ಮಾರ್ಕೆಟ್ ಕಡೆಗೆ ಪ್ರಯಾಣಿಸುವವರು ಕಿಮ್ಕೋ ಜಂಕ್ಷನ್ನಲ್ಲಿ ಎಡ ತಿರುವು ಪಡೆದು ವಿಜಯನಗರ, ಮಾಗಡಿ ಮುಖ್ಯರಸ್ತೆ ಮತ್ತು ಸಿರ್ಸಿ ವೃತ್ತದ ಮೂಲಕ ಮಾರುಕಟ್ಟೆಗೆ ತೆರಳಬಹುದು ಎಂದು ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಸಾರ್ವಜನಿಕ ಪ್ರಾಣಿ ಬಲಿಗೆ ನಿಷೇಧ
ಸಾರ್ವಜನಿಕ ಸ್ಥಳಗಳಾದ ರಸ್ತೆಗಳು, ಆಸ್ಪತ್ರೆಗಳು, ಶಾಲೆಗಳು, ಕಾಲೇಜುಗಳು, ಉದ್ಯಾನವನಗಳು ಮತ್ತು ಪೂಜಾ ಸ್ಥಳಗಳ ಆವರಣದ ಒಳಗೆ ಅಥವಾ ಹೊರಗೆ ಪ್ರಾಣಿಗಳನ್ನು ಬಲಿ ನೀಡುವುದನ್ನು ಬಿಬಿಎಂಪಿ ನಿಷೇಧಿಸಿದೆ. ಸೋಮವಾರ ಹೊರಡಿಸಿದ ಸುತ್ತೋಲೆಯಲ್ಲಿ, ಅಧಿಕೃತ ಕಸಾಯಿಖಾನೆಗಳಿಗೆ ಮಾತ್ರ ಪ್ರಾಣಿಗಳನ್ನು ಕಡಿಯಲು ಅನುಮತಿ ನೀಡಲಾಗುವುದು ಎಂದು ತಿಳಿಸಿದೆ.
ಕಳೆದ ವರ್ಷ ಆಗಸ್ಟ್ನಲ್ಲಿ ಗಣೇಶ ಚತುರ್ಥಿಯ ಸಂದರ್ಭದಲ್ಲಿ ಬಿಬಿಎಂಪಿಯು ಬೆಂಗಳೂರಿನಲ್ಲಿ ಮಾಂಸ ಮತ್ತು ಗೋಹತ್ಯೆ ನಿಷೇಧ ಹೇರಿತ್ತು.
-
AI ಮೂಲಕ ಬರುವ ಉದ್ಯೋಗ ಅರ್ಜಿಗಳಿಂದ ಬೆಂಗಳೂರು ಉದ್ಯಮಿ ಬೇಸರ: 'ಅರ್ಜಿಗಳು ಜಾಸ್ತಿ, ಅರ್ಹತೆ ಕಡಿಮೆ’ -
ತಿಂಗಳಿಗೆ 50 ಸಾವಿರ ಸಂಬಳ ಇದೆಯಾ? 2026ರಲ್ಲಿ ಬೆಂಗಳೂರಿನಂತಹ ಮಹಾನಗರದಲ್ಲಿ ಜೀವನ ವೆಚ್ಚ ಎಷ್ಟಾಗುತ್ತೆ ಗೊತ್ತಾ? ಇಲ್ಲಿದೆ ಮಾಹಿತಿ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಲಂಡನ್ ಮೆಟ್ರೋಗಿಂತ ಬೆಂಗಳೂರಿನ 'ನಮ್ಮ ಮೆಟ್ರೋ' ಬೆಸ್ಟ್: Viral ಪೋಸ್ಟ್ನಲ್ಲಿ ಅಚ್ಚರಿಯ ಸತ್ಯ ಬಿಚ್ಚಿಟ್ಟ ಯುವತಿ -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ











Click it and Unblock the Notifications