Bengaluru : ಬಾಲ ಭವನ ಬೇಸಿಗೆ ಶಿಬಿರ 2026 ; ಕೇವಲ 1000 ರೂ.ಗೆ 10 ಬಗೆಯ ಕೌಶಲ್ಯ ತರಬೇತಿ, ಇಂದೇ ಅರ್ಜಿ ಸಲ್ಲಿಸಿ
ಬೆಂಗಳೂರು: ಬೇಸಿಗೆ ರಜೆ ಹತ್ತಿರವಾಗುತ್ತಿದ್ದಂತೆ ಪೋಷಕರಿಗೆ ತಮ್ಮ ಮಕ್ಕಳನ್ನು ಹೇಗೆ ಕ್ರಿಯಾಶೀಲವಾಗಿ ತೊಡಗಿಸಬೇಕು ಎನ್ನುವ ಚಿಂತೆ ಶುರುವಾಗುತ್ತದೆ. ಇದಕ್ಕೊಂದು ಅತ್ಯುತ್ತಮ ಪರಿಹಾರವೆಂಬಂತೆ, ಕರ್ನಾಟಕ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಡಿಯಲ್ಲಿ ಬರುವ ಕಬ್ಬನ್ ಪಾರ್ಕ್ನಲ್ಲಿರುವ ಬಾಲ ಭವನ ಸೊಸೈಟಿಯು 5 ರಿಂದ 16 ವರ್ಷದೊಳಗಿನ ಮಕ್ಕಳಿಗಾಗಿ 'ಬೇಸಿಗೆ ಶಿಬಿರ-2026' (Summer Camp-2026) ಅನ್ನು ಘೋಷಿಸಿದೆ.
ಏಪ್ರಿಲ್ 10, 2026 ರಿಂದ ಆರಂಭವಾಗಲಿರುವ ಈ ಬೇಸಿಗೆ ಶಿಬಿರವು ಮೇ 15, 2026 ರವರೆಗೆ ನಡೆಯಲಿದೆ. ನಗರದ ಕಸ್ತೂರಬಾ ರಸ್ತೆಯಲ್ಲಿರುವ ಕಬ್ಬನ್ ಪಾರ್ಕ್ನ ಬಾಲ ಭವನ ಸೊಸೈಟಿ ಆವರಣದಲ್ಲಿಯೇ ಈ ಸಂಪೂರ್ಣ ಶಿಬಿರ ಆಯೋಜನೆಯಾಗಿದೆ. ಆಟದ ಜೊತೆಗೆ ಪಾಠ ಹಾಗೂ ಕೌಶಲ್ಯಾಭಿವೃದ್ಧಿಗೆ ಒತ್ತು ನೀಡುವ ನಿಟ್ಟಿನಲ್ಲಿ ಶಿಬಿರವನ್ನು ಬಹಳ ಅಚ್ಚುಕಟ್ಟಾಗಿ ವಿನ್ಯಾಸಗೊಳಿಸಲಾಗಿದೆ.

ಏನೆಲ್ಲಾ ಚಟುವಟಿಕೆಗಳಿರುತ್ತವೆ?
ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಪೂರಕವಾಗುವಂತೆ ಹಲವು ಚಟುವಟಿಕೆಗಳನ್ನು ಇಲ್ಲಿ ಹಮ್ಮಿಕೊಳ್ಳಲಾಗಿದೆ. ಚಿತ್ರಕಲೆ, ಕರಕುಶಲ ಕಲೆ , ಬೀದಿ ನಾಟಕ, ಜೇಡಿಮಣ್ಣಿನ ಕಲೆ (ಕ್ಲೇ ಆರ್ಟ್), ಕರಾಟೆ, ಯೋಗ, ಮೆಹಂದಿ, ತಬಲಾ ಮತ್ತು ಪಾಶ್ಚಿಮಾತ್ಯ ನೃತ್ಯದಂತಹ ಕಲೆಗಳನ್ನು ನುರಿತ ಮತ್ತು ಅನುಭವಿ ಕಲಾ ತರಬೇತುದಾರರಿಂದ ಕಲಿಸಲಾಗುತ್ತದೆ. ಇದರ ಜೊತೆಗೆ ಇಂದಿನ ಮೊಬೈಲ್ ಯುಗದಲ್ಲಿ ಮಕ್ಕಳು ಮರೆಯುತ್ತಿರುವ ನಮ್ಮ ಹಳ್ಳಿಗಾಡಿನ ದೇಸಿ ಆಟಗಳಾದ ಗೋಲಿ, ಬುಗುರಿ, ಚಿನ್ನಿದಾಂಡು, ಲಗೋರಿ ಮತ್ತು ಕಬಡ್ಡಿ ಆಟಗಳನ್ನೂ ಆಡಿಸಲಾಗುತ್ತದೆ. ತ್ಯಾಜ್ಯದಿಂದ ಉಪಯುಕ್ತ ವಸ್ತುಗಳನ್ನು ತಯಾರಿಸುವ (Best of waste) ಕಲೆಯನ್ನೂ ಮಕ್ಕಳಿಗೆ ಹೇಳಿಕೊಡಲಾಗುತ್ತದೆ. ಒಟ್ಟಾರೆಯಾಗಿ 10 ವಿವಿಧ ಚಟುವಟಿಕೆಗಳಿಗೆ ತರಬೇತಿ ನೀಡಲಾಗುತ್ತದೆ.
ಶುಲ್ಕದ ವಿವರ
ಈ ಬೇಸಿಗೆ ಶಿಬಿರದ ಶುಲ್ಕವನ್ನು ಬಹಳ ಕೈಗೆಟುಕುವ ದರದಲ್ಲಿ ನಿಗದಿಪಡಿಸಲಾಗಿದೆ. ಒಟ್ಟು ಶುಲ್ಕ 1000 ರೂ. ಆಗಿರುತ್ತದೆ.
1. ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ಮಕ್ಕಳಿಗೆ ನಿಗದಿತ ಶುಲ್ಕದಲ್ಲಿ ಶೇಕಡಾ 50% ರಷ್ಟು ರಿಯಾಯಿತಿ (500 ರೂ.) ನೀಡಲಾಗುವುದು. (ಇದಕ್ಕಾಗಿ ಶಾಲೆಯ ಅಗತ್ಯ ದಾಖಲೆಗಳನ್ನು ಒದಗಿಸಬೇಕು).
2. ವಿಕಲಚೇತನ ಮಕ್ಕಳು ಹಾಗೂ 5 ರಿಂದ 16 ವರ್ಷದೊಳಗಿನ ಆರ್ಥಿಕವಾಗಿ ಹಿಂದುಳಿದ ಮಕ್ಕಳಿಗೆ ಸಂಪೂರ್ಣ ಉಚಿತ ಪ್ರವೇಶ ಕಲ್ಪಿಸಲಾಗಿದೆ.
3. ಈಗಾಗಲೇ ಬಾಲ ಭವನದ ಸದಸ್ಯತ್ವ ಪಡೆದಿರುವ ಮಕ್ಕಳಿಗೆ ಶುಲ್ಕದಲ್ಲಿ ಶೇಕಡಾ 25% ರಷ್ಟು ವಿನಾಯಿತಿ ಸಿಗಲಿದೆ.
ಅರ್ಜಿ ಸಲ್ಲಿಕೆ ಹೇಗೆ?
ಆಸಕ್ತ ಪೋಷಕರು ನಿಗದಿತ ಅರ್ಜಿ ನಮೂನೆಗಳನ್ನು ಬೆಂಗಳೂರಿನ ಕಬ್ಬನ್ ಪಾರ್ಕ್ನಲ್ಲಿರುವ ಬಾಲ ಭವನದ ಕಚೇರಿಯಲ್ಲಿ ಬೆಳಿಗ್ಗೆ 9:00 ಗಂಟೆಯಿಂದ ಸಂಜೆ 4:00 ಗಂಟೆಯವರೆಗೆ ಖುದ್ದಾಗಿ ಪಡೆದುಕೊಳ್ಳಬಹುದು (ಸರ್ಕಾರಿ ರಜಾ ದಿನಗಳನ್ನು ಹೊರತುಪಡಿಸಿ).
ಗಮನಿಸಬೇಕಾದ ಪ್ರಮುಖ ನಿಯಮಗಳು
ಶಿಬಿರದ ಅವಧಿಯಲ್ಲಿ ಮಕ್ಕಳು ಮೊಬೈಲ್ ಫೋನ್ ಬಳಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಎಲ್ಲಾ ಭಾನುವಾರಗಳು ಹಾಗೂ ಸರ್ಕಾರಿ ರಜಾ ದಿನಗಳಂದು ಯಾವುದೇ ಬೇಸಿಗೆ ಶಿಬಿರದ ಚಟುವಟಿಕೆಗಳು ಇರುವುದಿಲ್ಲ. ಶಿಬಿರದ ಸಮಾರೋಪ ಸಮಾರಂಭವು ಮೇ 15, 2026 ರಂದು ಅದ್ಧೂರಿಯಾಗಿ ನಡೆಯಲಿದೆ.
ಕರ್ನಾಟಕ ಸರ್ಕಾರದ ಈ ಉಪಕ್ರಮವು ಪೋಷಕರಿಂದ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ. ಖಾಸಗಿ ಸಂಸ್ಥೆಗಳು ಬೇಸಿಗೆ ಶಿಬಿರಗಳ ಹೆಸರಿನಲ್ಲಿ ಸಾವಿರಾರು ರೂಪಾಯಿಗಳನ್ನು ಸುಲಿಯುತ್ತಿರುವ ಇಂದಿನ ದಿನಗಳಲ್ಲಿ, ಬಾಲ ಭವನವು ಅತ್ಯಂತ ಕಡಿಮೆ ಶುಲ್ಕದಲ್ಲಿ ಗುಣಮಟ್ಟದ ತರಬೇತಿಯನ್ನು ನೀಡಲು ಮುಂದಾಗಿರುವುದು ಶ್ಲಾಘನೀಯ. ವಿಶೇಷವಾಗಿ ವಿಕಲಚೇತನರು ಮತ್ತು ಆರ್ಥಿಕವಾಗಿ ಹಿಂದುಳಿದ ಮಕ್ಕಳಿಗೆ ಉಚಿತ ಪ್ರವೇಶ ಕಲ್ಪಿಸುವ ಮೂಲಕ ಸರ್ಕಾರವು ಎಲ್ಲರಿಗೂ ಸಮಾನ ಅವಕಾಶವನ್ನು ಒದಗಿಸಿದೆ.
ಬಾಲ ಭವನ ಬೇಸಿಗೆ ಶಿಬಿರ 2026: ಕೇವಲ 1,000 ರೂ.ಗೆ ಸಿಗಲಿದೆ 10 ಬಗೆಯ ಕೌಶಲ್ಯ ತರಬೇತಿ! 🌟🧒👧#BalBhavan2026 #SummerCamp #NewsUpdate #OIKannada #Oneindia #BengaluruKids #SkillDevelopment #SummerHolidays pic.twitter.com/dkvCsng5ZS
— oneindiakannada (@OneindiaKannada) March 10, 2026
ಮಕ್ಕಳನ್ನು ಗ್ಯಾಜೆಟ್ಗಳಿಂದ ದೂರವಿಟ್ಟು, ಅವರಲ್ಲಿ ಹೊಸ ಕೌಶಲ್ಯಗಳನ್ನು ಬೆಳೆಸಲು ಹಾಗೂ ಹೊಸ ಸ್ನೇಹಿತರನ್ನು ಸಂಪಾದಿಸಲು ಈ ಶಿಬಿರವು ಅದ್ಭುತ ವೇದಿಕೆಯಾಗಿದೆ. ಹೆಚ್ಚಿನ ಮಾಹಿತಿ ಹಾಗೂ ನೋಂದಣಿಗಾಗಿ ಬಾಲ ಭವನ ಸೊಸೈಟಿ, ಕಬ್ಬನ್ ಪಾರ್ಕ್, ಬೆಂಗಳೂರು ಕಚೇರಿಯನ್ನು ಅಥವಾ ದೂರವಾಣಿ ಸಂಖ್ಯೆ: 080-22864189 ಅನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ಕೋರಲಾಗಿದೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications